‘ರಸ್ತೆ ವಿಸ್ತರಣೆಗೆ ಜಾಗ ನೀಡಿದವರಿಗೆ ಟಿಡಿಆರ್‌’


Team Udayavani, Oct 30, 2017, 12:44 PM IST

30-Mng-8.jpg

ಕೊಟ್ಟಾರ ಚೌಕಿ: ಮೂಲ ಸೌಕರ್ಯ ಪ್ರತಿಯೊಬ್ಬರಿಗೂ ಆವಶ್ಯಕವಾಗಿದ್ದು, ಪಾಲಿಕೆಯ ಜತೆ ಜನರೂ ಕೈ ಜೋಡಿಸಿದಲ್ಲಿ ಅದನ್ನು ಸುಲಭವಾಗಿ ಸಾಧಿಸಬಹುದು ಎಂದು ಮಹಾನಗರ ಪಾಲಿಕೆ ಮುಖ್ಯ ಸಚೇತಕ ಶಶಿಧರ್‌ ಹೆಗ್ಡೆ ಹೇಳಿದರು.

ಕೊಟ್ಟಾರಚೌಕಿ ಮಾಲೆಮಾರ್‌ ಅಯ್ಯಪ್ಪ ಗುಡಿ ಮುಂಭಾಗದ ಕಾಲನಿಯಲ್ಲಿ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ವಿಸ್ತರಣೆ, ಕಾಂಕ್ರೀಟ್‌, ಒಳಚರಂಡಿ ಮತ್ತಿತರ ಕಾಮಗಾರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಭಾಗದಲ್ಲಿ ನಿವಾಸಿಗಳು ಸ್ವಯಂ ಪ್ರೇರಿತವಾಗಿ ಭೂಮಿ ಬಿಟ್ಟು ಕೊಟ್ಟಿದ್ದಾರೆ. ಅವರಿಗೆ ಟಿಡಿಆರ್‌ ನೀಡಲಾಗಿದೆ. ಈ
ವ್ಯವಸ್ಥೆಯಲ್ಲಿ ಪಾಲಿಕೆಯ ಅನುಮತಿಯೊಂದಿಗೆ 400ರಿಂದ 800 ಚದರ ಅಡಿವರೆಗೆ ಕೊಠಡಿ ಮತ್ತಿತರ ವ್ಯವಸ್ಥೆ ನಿರ್ಮಿಸಲು ಇದರಿಂದ ಸಾಧ್ಯವಿದೆ. ಇತರರಿಗೂ ಪರಭಾರೆ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಶುಚಿತ್ವ ಕಾಪಾಡಿ
ಒಂದು ಕಾಲದಲ್ಲಿ ಮಾಲೆಮಾರ್‌ ಮೂಲ ಸೌಕರ್ಯವಿಲ್ಲದೆ ನೆರೆ ನೀರು ನಿಂತು ಸಾಂಕ್ರಾಮಿಕ ರೋಗ ಹರಡುವ ಪ್ರದೇಶವಾಗಿತ್ತು. ಈಗ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ಮಹಾನಗರ ಪಾಲಿಕೆ ಶುಚಿತ್ವ ಕಾಪಾಡಲು ಕೋಟ್ಯಂತರ ರೂಪಾಯಿ ವ್ಯಯಿಸುತ್ತಿದೆ. ಮನೆ ಮನೆ ತ್ಯಾಜ್ಯ ಸಂಗ್ರಹ ಮಾಡಿ ವಿಲೇವಾರಿ ಮಾಡಲಾಗುತ್ತಿದೆ. ಹೀಗಾಗಿ ಬಡಾವಣೆಯ ರಸ್ತೆ ಪಕ್ಕ ಹಾಗೂ ಖಾಲಿ ಜಾಗಗಳಲ್ಲಿ ಕಸ ಎಸೆಯದೆ, ಶುಚಿತ್ವ ಕಾಪಾಡಲು ಸಹಕರಿಸಬೇಕು ಎಂದು ಮನವಿ ಮಾಡಿದರು.

ಸಮ್ಮಾನ
ಕಾರ್ಪೊರೇಟರ್‌ ಶಶಿಧರ್‌ ಹೆಗ್ಡೆ, ಭೂಮಿ ಬಿಟ್ಟು ಸಹಕರಿಸಿದ ಪಾರ್ವತಿ, ಚಂದ್ರಾವತಿ, ಹಿರಿಯ ಕಾರ್ಯಕರ್ತ ಲೋಕನಾಥ್‌, ಅರುಣ್‌ ಕುಮಾರ್‌, ಮೈಕಲ್‌ ಅವರನ್ನು ಸಮ್ಮಾನಿಸಲಾಯಿತು. ಮುಖಂಡರಾದ ಶಕುಂತಳಾ ಕಾಮತ್‌, ಶೇಖರ್‌ ಶೆಟ್ಟಿ, ಲ್ಯಾನ್ಸಿ ಮೊಂತೆರೋ, ಆಶಾ ಶೆಟ್ಟಿ, ದಿನೇಶ್‌ ಕೋಡಿಕಲ್‌ ಮತ್ತಿತರರು ಉಪಸ್ಥಿತರಿದ್ದರು. ಮಮತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಮಾಲೆಮಾರ್‌ – ಆಕಾಶ ಭವನ ರಸ್ತೆಗೆ ಡಾಮರು
ಮುಂದಿನ ಹಂತದಲ್ಲಿ ಮಾಲೆಮಾರ್‌ ಆಕಾಶ ಭವನ ರಸ್ತೆಗೆ ಡಾಮರು ಕಾಮಗಾರಿಗೆ ಯೋಜನೆ ರೂಪಿಸಿದ್ದು, ಅಂದಾಜು 30 ಲಕ್ಷ ರೂ. ವೆಚ್ಚ ತಗುಲಲಿದೆ. ಮುಂದಿನ ವರ್ಷ ಕಾಮಗಾರಿ ಆರಂಭಿಸಲು ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಶಶಿಧರ ಹೆಗ್ಡೆ ಭರವಸೆ ನೀಡಿದರು.

ಟಾಪ್ ನ್ಯೂಸ್

BBK11: ಈ ವಾರ ಮನೆಯಿಂದ ಯಾರು ಹೋಗಲ್ಲ.. ಕಾರಣವೇನು?

BBK11: ಈ ವಾರ ಮನೆಯಿಂದ ಯಾರು ಹೋಗಲ್ಲ.. ಕಾರಣವೇನು?

5-bommai

ಪೊಲೀಸ್ ಸ್ಟೇಶನ್ ಮೇಲೆ ದಾಳಿ ಮಾಡಿದರೆ ಪೊಲೀಸರು ಏನೂ ಮಾಡುವಂತಿಲ್ಲವೇ ? ಬೊಮ್ಮಾಯಿ‌ ಪ್ರಶ್ನೆ

Arrested: ಈವೆಂಟ್‌ ಮ್ಯಾನೇಜ್‌ಮೆಂಟ್‌ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ

Arrested: ಈವೆಂಟ್‌ ಮ್ಯಾನೇಜ್‌ಮೆಂಟ್‌ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ

Raichur: ಸ್ಕೂಟಿ – ಕಾರು ಡಿಕ್ಕಿ; ಯುವತಿ ಸ್ಥಳದಲ್ಲೇ ಸಾವು

Raichur: ಸ್ಕೂಟಿ – ಕಾರು ಡಿಕ್ಕಿ; ಯುವತಿ ಸ್ಥಳದಲ್ಲೇ ಸಾವು

15 ಅಡಿ ಆಳದ ಬಾವಿಗೆ ಬಿತ್ತು ನವದಂಪತಿಯ ಕಾರು; ಬದುಕಿ ಬಂದಿದ್ದೇ ಪವಾಡ!

Miracle: 15 ಅಡಿ ಆಳದ ಬಾವಿಗೆ ಬಿತ್ತು ನವದಂಪತಿಯ ಕಾರು; ಬದುಕಿ ಬಂದಿದ್ದೇ ಪವಾಡ!

Veera Ratna Foundation: ಯೋಧರ ಕುಟುಂಬಕ್ಕೆ ಹೆಗಲಾಗುವ ವೀರ ರತ್ನ

Veera Ratna Foundation: ಯೋಧರ ಕುಟುಂಬಕ್ಕೆ ಹೆಗಲಾಗುವ ವೀರ ರತ್ನ

1

Ratan Naval Tata: ರತನ್‌ ಟಾಟಾ ಮರೆಯಾದ ಮಾಣಿಕ್ಯ; ಅಳಿದ ಮೇಲೂ ಉಳಿವ ನೆನಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

26

Mangaluru: ಬಾಂಗ್ಲಾ ಪ್ರಜೆ; ಒಂದು ವಾರ ಕಸ್ಟಡಿಗೆ

Arrested: ಜುಗಾರಿ ಆಟ ಆಡುತ್ತಿದ್ದ 6 ಮಂದಿ ಸೆರೆ

Arrested: ಜುಗಾರಿ ಆಟ ಆಡುತ್ತಿದ್ದ 6 ಮಂದಿ ಸೆರೆ

11

Mangaluru: ಕಾರು ಢಿಕ್ಕಿ; ಸ್ಕೂಟರ್‌ ಸವಾರ ಸಾವು

10

Mangaluru: ನಿವೃತ್ತ ಕರ್ನಲ್‌ ರತ್ನಕುಮಾರ್‌ ಅಡಪ ನಿಧನ

Mangaluru: ಓವರ್‌ ಟೇಕ್‌ ಗಲಾಟೆ; ಬಸ್‌ ಗೆ ನುಗ್ಗಿ ಕಂಡಕ್ಟರ್‌ ಗೆ ಹಲ್ಲೆ

Mangaluru: ಓವರ್‌ ಟೇಕ್‌ ಗಲಾಟೆ; ಬಸ್‌ ಗೆ ನುಗ್ಗಿ ಕಂಡಕ್ಟರ್‌ ಮೇಲೆ ಹಲ್ಲೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK11: ಈ ವಾರ ಮನೆಯಿಂದ ಯಾರು ಹೋಗಲ್ಲ.. ಕಾರಣವೇನು?

BBK11: ಈ ವಾರ ಮನೆಯಿಂದ ಯಾರು ಹೋಗಲ್ಲ.. ಕಾರಣವೇನು?

5-bommai

ಪೊಲೀಸ್ ಸ್ಟೇಶನ್ ಮೇಲೆ ದಾಳಿ ಮಾಡಿದರೆ ಪೊಲೀಸರು ಏನೂ ಮಾಡುವಂತಿಲ್ಲವೇ ? ಬೊಮ್ಮಾಯಿ‌ ಪ್ರಶ್ನೆ

crime

Bidar:‌ ರಸ್ತೆ ಅಪಘಾತ; ಇಬ್ಬರು ಬಲಿ; ಪ್ರಕರಣ ದಾಖಲು

4-udupi

Malpe: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪಾಪನಾಶಿನಿ ನದಿಯಲ್ಲಿ ಪತ್ತೆ

10

JC Nagar Dussehra: ಜೆ.ಸಿ.ನಗರ ದಸರಾದಲ್ಲಿ ನೂರಾರು ಪಲ್ಲಕ್ಕಿಗಳ ಉತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.