![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 29, 2024, 11:20 PM IST
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸೋಮವಾರ ಒಣ ಹವೆ ಇತ್ತು. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೇ 3ರ ವರೆಗೆ ಬಿಸಿ ಮತ್ತು ಶುಷ್ಕ ವಾತಾವರಣ ಇರಲಿದೆ.
ಮೇ 6ರ ವರೆಗೆ ಕರಾವಳಿಯಲ್ಲಿ ಮಳೆ ಸಾಧ್ಯತೆ ಕಡಿಮೆ ಇದೆ. ಗರಿಷ್ಠ ತಾಪಮಾನವೂ ಯಥಾ ಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹವಾಮಾನ ಇಲಾಖೆ ಮುನ್ನೆಚ್ಚರಿಕೆ: ಬಿಸಿ ಮತ್ತು ಶುಷ್ಕ ವಾತಾವರಣ ಹಿನ್ನೆಲೆಯಲ್ಲಿ ನವಜಾತ ಶಿಶುಗಳು, ಹಿರಿಯರು ಮತ್ತು ಅನಾರೋಗ್ಯದಿಂದ ಬಳಲುತ್ತಿರುವವರ ಬಗ್ಗೆ ಎಚ್ಚರಿಕೆ ವಹಿಸಬೇಕಾದ ಅಗತ್ಯವಿದೆ.
ನೇರವಾಗಿ ಸೂರ್ಯನ ಶಾಖಕ್ಕೆ ಹೋಗುವುದನ್ನು ತಪ್ಪಿಸಬೇಕು. ಹಗುರ, ಸಡಿಲ, ತಿಳಿಯಾದ ಬಣ್ಣದ ಹತ್ತಿಯ ಬಟ್ಟೆ ಧರಿಸಬೇಕು. ಬಿಸಿಲಿಗೆ ಹೋಗುವಾಗ ಬಟ್ಟೆ, ಟೊಪ್ಪಿ ಅಥವಾ ಛತ್ರಿಯಿಂದ ತಲೆ ಮುಚ್ಚಿಕೊಳ್ಳಬೇಕು ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.