“ಬ್ಲೂ ಫ್ಲ್ಯಾಗ್‌’ ಮಾನ್ಯತೆ ಪಡೆಯುವತ್ತ ತಣ್ಣೀರುಬಾವಿ ಬೀಚ್‌

ಕೇಂದ್ರ ಅರಣ್ಯ ಮಂತ್ರಾಲಯ ತಜ್ಞರ ತಂಡದಿಂದ ಅಧ್ಯಯನ

Team Udayavani, Jan 26, 2021, 7:00 AM IST

“ಬ್ಲೂ ಫ್ಲ್ಯಾಗ್‌’ ಮಾನ್ಯತೆ ಪಡೆಯುವತ್ತ ತಣ್ಣೀರುಬಾವಿ ಬೀಚ್‌

ಮಹಾನಗರ: ಪಡುಬಿದ್ರಿ ಬೀಚ್‌ಗೆ ಅಂತಾರಾಷ್ಟ್ರೀಯ “ಬ್ಲೂ ಫ್ಲ್ಯಾಗ್‌’ ಮಾನ್ಯತೆ ಲಭಿಸಿರುವ ಬೆನ್ನಲ್ಲೇ ಇದೀಗ ಮಂಗಳೂರಿನ ತಣ್ಣೀರುಬಾವಿ ಬೀಚ್‌ಗೂ “ಬ್ಲೂ ಫ್ಲ್ಯಾಗ್‌’ ಮಾನ್ಯತೆ ಪಡೆಯಲು ಸಿದ್ಧತೆ ಆರಂಭವಾಗಿದೆ.

ಬೀಚ್‌ಗಳನ್ನು ಪರಿಸರ ಸ್ನೇಹಿ ಮಾಡುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುವುದಕ್ಕೆ ದೇಶದ ಎಂಟು ಬೀಚ್‌ಗಳಿಗೆ ಬ್ಲೂ ಫ್ಲ್ಯಾಗ್‌ ಮಾನ್ಯತೆ  ಕಳೆದ ವರ್ಷ ದೊರೆತಿದ್ದು, ಈ ಪೈಕಿ ರಾಜ್ಯದ ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಕಾಸರಕೋಡ್‌, ಉಡುಪಿ ಪಡುಬಿದ್ರೆ ಬೀಚ್‌ಗೆ ಬ್ಲೂ ಫ್ಲ್ಯಾಗ್‌ ಮಾನ್ಯತೆ ಲಭಿಸಿದೆ. 2019ರಲ್ಲಿ ಪಡುಬಿದ್ರಿ, ತಣ್ಣೀರುಬಾವಿ ಬೀಚ್‌ ಸಹಿತ ರಾಜ್ಯದ 16 ಬೀಚ್‌ಗಳಿಗೆ ಬ್ಲೂ ಫ್ಲ್ಯಾಗ್‌ ಮಾನ್ಯತೆ ನೀಡುವ ಬಗ್ಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಆ ಪೈಕಿ 12 ಬೀಚ್‌ಗಳಿಗೆ ಕೇಂದ್ರ ಒಪ್ಪಿಗೆ ನೀಡಿದ್ದು, ಮೊದಲ ಹಂತದಲ್ಲಿ ಪಡುಬಿದ್ರಿ ಹಾಗೂ ಕಾಸರಕೋಡ್‌ ಬೀಚ್‌ಗಳು ಮಾನ್ಯತೆ ಪಡೆದುಕೊಂಡಿತ್ತು. ಇದೀಗ ಎರಡನೇ ಹಂತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಸೇರಿರುವ ತಣ್ಣೀರುಬಾವಿ ಬೀಚ್‌ಗೂ ಬ್ಲೂ ಫ್ಲಾ Âಗ್‌ ಮಾನ್ಯತೆ ಪಡೆಯುವುದಕ್ಕೆ ಕೇಂದ್ರ ಸರಕಾರದಿಂದ ಅಧ್ಯಯನ ಪ್ರಕ್ರಿಯೆ ಪ್ರಾರಂಭಗೊಂಡಿದೆ.

ಅದರಂತೆ ಕೇಂದ್ರ ಅರಣ್ಯ ಮಂತ್ರಾಲಯದ ಚೆನ್ನೈನಲ್ಲಿರುವ “ಎನ್‌ಸಿಎಸ್‌ಸಿಎಂ’ ಹಾಗೂ ಹೊಸದಿಲ್ಲಿಯ “ಸೈಕೋಮ್‌’ ಸಂಸ್ಥೆಯ ಪ್ರತಿನಿಧಿಗಳ ತಂಡವೊಂದು ತಣ್ಣೀರುಬಾವಿ ಬೀಚ್‌ಗೆ ಭೇಟಿ ನೀಡಿ ಪ್ರಾಥಮಿಕ ಪರಿಶೀಲನೆ ನಡೆಸಿದ್ದಾರೆ. ಗಾಳಿ ಮರದ ಫ್ಲಾಂಟೇಶನ್‌ನಿಂದ ದಕ್ಷಿಣ ಭಾಗಕ್ಕೆ ಇರುವ 2 ಕಿ.ಮೀ. ವ್ಯಾಪ್ತಿಯ ತೀರ ಪ್ರದೇಶದ ಬಗ್ಗೆ ಪ್ರತಿನಿಧಿಗಳು ಅಧ್ಯಯನ ನಡೆಸಿದ್ದು, ಕೆಲವೇ ದಿನದಲ್ಲಿ ಕೇಂದ್ರ ಸರಕಾರಕ್ಕೆ ವರದಿ ನೀಡಲಿದ್ದಾರೆ.

ಯಾವ ರೀತಿ ಅಧ್ಯಯನ? :

ಮೊದಲ ಹಂತವಾಗಿ ಕೆಲವು ತಿಂಗಳ ಹಿಂದೆ ತಣ್ಣೀರುಬಾವಿ ಬೀಚ್‌ಗೆ ಆಗಮಿಸಿದ ಕೇಂದ್ರದ ಪರಿಶೀಲನ ತಂಡ ಬ್ಲೂ ಫ್ಲಾ Âಗ್‌ ಮಾನ್ಯತೆಗೆ ತಕ್ಕುದಾದ ವ್ಯವಸ್ಥೆ ಇದೆ ಎಂಬುದನ್ನು ಉಲ್ಲೇಖೀಸಿದ್ದರು. ಇದರಂತೆ 2ನೇ ಹಂತವಾಗಿ ಸೋಮವಾರ ಮಂಗಳೂರಿಗೆ ಆಗಮಿಸಿದ ವಿಜ್ಞಾನಿಗಳು ಹಾಗೂ ತಜ್ಞರ ನೇತೃತ್ವದ ತಂಡವು ವಿವರವಾದ ಅಧ್ಯಯನ ಕೈಗೊಂಡಿದೆ. ಕಡಲಿನ ನೀರಿನ ಮಾದರಿ ಪರೀಕ್ಷೆ, ಅಲೆಗಳ ವೇಗ, ಭದ್ರತೆ, ರಕ್ಷಣಾ ಅಂಶಗಳು, ಮರಳಿನ ವ್ಯಾಪ್ತಿ, ಪ್ರವಾಸಿಗರಿಗೆ ಸೂಕ್ತವಾಗುವ ಸೌಲಭ್ಯಗಳು ಸಹಿತ ಎಲ್ಲ ಅಂಶಗಳನ್ನು ಪರಿಶೀಲಿಸಿದೆ.

ಮುಂದೇನು? :

ತಜ್ಞರ ವರದಿಯನ್ನು ಕೇಂದ್ರವು ಪರಿಶೀಲಿಸಿದ ಬಳಿಕ ತಣ್ಣೀರುಬಾವಿ ಬೀಚ್‌ನಲ್ಲಿ ಯಾವೆಲ್ಲ ಸೌಕರ್ಯಗಳನ್ನು ತುರ್ತಾಗಿ ಕೈಗೊಳ್ಳಬೇಕಾದ ಅಂಶಗಳ ಆಧಾರದಲ್ಲಿ ಟೆಂಡರ್‌ ಕರೆದು ವಿವಿಧ ಕಾಮಗಾರಿ ನಡೆಸಲು ನಿರ್ದೇಶನ ನೀಡಲಿದೆ.

ಗರಿಷ್ಠ ಸುಮಾರು 10 ಕೋ.ರೂ. ಇದಕ್ಕಾಗಿ ವೆಚ್ಚ ಮಾಡುವ ಸಾಧ್ಯತೆ ಇದೆ. ಕಾಮಗಾರಿ ಪೂರ್ಣವಾದ ಬಳಿಕ ಅದನ್ನು ಪರಿಶೀಲಿಸಿ ಕೇಂದ್ರ ಸರಕಾರವು ಡೆನ್ಮಾರ್ಕ್‌ನಲ್ಲಿರುವ

ಫೌಂಡೇಶನ್‌ ಫಾರ್‌ ಎನ್ವಿರಾನ್ಮೆಂಟ್‌ ಎಜುಕೇಶನ್‌ ಸಂಸ್ಥೆಗೆ ವರದಿ ಕಳುಹಿಸಿ ಬ್ಲೂ ಫ್ಲ್ಯಾಗ್‌ ಮಾನ್ಯತೆ ನೀಡಲು ಕೋರಲಾಗುತ್ತದೆ. ಇದರ ಆಧಾರದಂತೆ ಡೆನ್ಮಾರ್ಕ್‌ ತಂಡ ತಣ್ಣೀರುಬಾವಿಗೆ ಆಗಮಿಸಿ, ಮಾನ್ಯತೆ ನೀಡುವ ಬಗ್ಗೆ ಕ್ರಮ ಕೈಗೊಳ್ಳಲಿದೆ.

ಏನಿದು ಬ್ಲೂ ಫ್ಲ್ಯಾಗ್‌? :

ಕಡಲ ತೀರ (ಬೀಚ್‌)ಗಳಲ್ಲಿನ ಸ್ವಚ್ಚತೆ, ಪರಿಸರ ಸ್ನೇಹಿ ವಾತಾವರಣ ಮತ್ತಿತರ ಅಂಶಗಳನ್ನು ಪರಿಗಣಿಸಿ ಪರಿಸರ ಶಿಕ್ಷಣ ವೇದಿಕೆ (ಎಫ್‌.ಇ.ಇ-ಫೌಂಡೇಶನ್‌ ಫಾರ್‌ ಎನ್ವಿರಾನ್ಮೆಂಟ್‌ ಎಜುಕೇಶನ್‌) ಬ್ಲೂ ಫ್ಲ್ಯಾಗ್‌ ಪ್ರಮಾಣ ಪತ್ರ ನೀಡುತ್ತದೆ. ಅಂತಾರಾಷ್ಟ್ರೀಯ ಮಟ್ಟದ ಡೆನ್ಮಾರ್ಕ್‌ನಲ್ಲಿರುವ ಈ ಸಂಸ್ಥೆಯು ಪರಿಸರ ಶಿಕ್ಷಣ ಹಾಗೂ ಮಾಹಿತಿ, ನೀರಿನ ಗುಣಮಟ್ಟ, ಪರಿಸರ ನಿರ್ವಹಣೆ, ಸಂರಕ್ಷಣೆ, ಭದ್ರತೆ ಹಾಗೂ ಸೇವೆ ಎಂಬ ಪ್ರಮುಖ ಭಾಗಗಳಲ್ಲಿ 33 ಮಾನದಂಡಗಳನ್ನಿಟ್ಟುಕೊಂಡು ಈ ಮಾನ್ಯತೆ ನೀಡುತ್ತದೆ. ಇದನ್ನು ಭಾರತ ಸಹಿತ 47 ರಾಷ್ಟ್ರಗಳು ಮಾನ್ಯ ಮಾಡಿವೆ. ಇಂತಹ ಪ್ರಮಾಣಪತ್ರ ಪಡೆದ ಬೀಚ್‌ಗಳಲ್ಲಿ ನೀಲಿ ಬಣ್ಣದ ಧ್ವಜಾರೋಹಣ ಮಾಡಲಾಗುತ್ತದೆ. ವಿದೇಶಗಳಲ್ಲಿ ಇಂತಹ ಪ್ರಮಾಣಪತ್ರ ಪಡೆದ ಬೀಚ್‌ಗಳಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಹೀಗಾಗಿ ಭಾರತೀಯ ಪ್ರವಾಸೋದ್ಯಮ ಅಭಿವೃದ್ಧಿ ದೃಷ್ಟಿಯಿಂದ ಇಂತಹ ಪ್ರಮಾಣಪತ್ರ ಪಡೆಯುವುದು ಅತ್ಯಂತ ಪ್ರಮುಖವಾಗಿದೆ.

 

ಏನಿರಲಿದೆ? :

  • ಶುದ್ಧ ಕುಡಿಯುವ ನೀರು
  • ಸುಸಜ್ಜಿತ ಶೌಚಾಲಯ
  • ಸೋಲಾರ್‌ ಪವರ್‌
  • ತ್ಯಾಜ್ಯ ನಿರ್ವಹಣ ಘಟಕ
  • ಪ್ರವಾಸಿಗರಿಗೆ ಅತ್ಯುತ್ತಮ ಕಾಲುದಾರಿ
  • ಲ್ಯಾಂಡ್‌ಸ್ಕೇಪಿಂಗ್‌ ಲೈಟಿಂಗ್‌
  • ಕುಳಿತುಕೊಳ್ಳಲು ವ್ಯವಸ್ಥೆ
  • ಹೊರಾಂಗಣ ಕ್ರೀಡಾಕೂಟದ ಪರಿಕರ, ವ್ಯವಸ್ಥೆ
  • ಸಿಸಿಟಿವಿ/ ಕಂಟ್ರೋಲ್‌ ರೂಂ
  • ಪ್ರಥಮ ಚಿಕಿತ್ಸಾ ಕೇಂದ್ರ
  • ಭದ್ರತೆಗಾಗಿ ವಾಚ್‌ ಟವರ್‌, ಬೀಚ್‌ ಭದ್ರತೆಗೆ ಆದ್ಯತೆ
  • ಬೀಚ್‌ ಸುತ್ತ ಪರಿಸರ ಸೂಕ್ತ ವ್ಯವಸ್ಥೆ
  • ಪಾರ್ಕಿಂಗ್‌ ವ್ಯವಸ್ಥೆ

 

ತಣ್ಣೀರುಬಾವಿ ಬೀಚ್‌ ಬ್ಲೂ ಫ್ಲ್ಯಾಗ್‌ ಮಾನ್ಯತೆಗೆ ಸಂಬಂಧಿಸಿದ ಮೊದಲ ಹಂತದಲ್ಲಿ ಶಿಫಾರಸು ಆಗಿದೆ. ಇದರ ಆಧಾರದಲ್ಲಿ ಕೇಂದ್ರ ಅರಣ್ಯ ಮಂತ್ರಾಲಯದ ಸಂಸ್ಥೆಯು ಪರಿಶೀಲನೆಗೆ ಆಗಮಿಸಿತ್ತು. ಅವರ ವರದಿ ಆಧಾರಿತವಾಗಿ ಕೇಂದ್ರ ಸರಕಾರವು ಪ್ರವಾಸೋದ್ಯಮ ಪೂರಕ ವಿವಿಧ ಕಾಮಗಾರಿಯನ್ನು ಇಲ್ಲಿ ಕೈಗೆತ್ತಿಕೊಳ್ಳಲಿದೆ. ಅದಾದ ಬಳಿಕ ಬ್ಲೂ ಪ್ಲ್ಯಾಗ್‌ ಮಾನ್ಯತೆಗೆ ಸಂಬಂಧಿಸಿದ ಪ್ರಕ್ರಿಯೆ ನಡೆಯಲಿದೆ. -ಡಾ| ವೈ.ಕೆ. ದಿನೇಶ್‌ ಕುಮಾರ್‌,   ಪ್ರಾದೇಶಿಕ ನಿರ್ದೇಶಕರು, ದ.ಕ. ಪರಿಸರ ಇಲಾಖೆ

ಟಾಪ್ ನ್ಯೂಸ್

Arif Khan

Anti-national activities ವಿರುದ್ಧ ಕ್ರಮಕ್ಕೆ ಸಿಎಂ ವಿಜಯನ್ ಮೌನ: ಕೇರಳ ರಾಜ್ಯಪಾಲ

Omar Abdulla

Federalism..; ಒಮರ್ ಅಬ್ದುಲ್ಲಾಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

brij Bhushan

Power…; ವಿನೇಶ್ ಫೋಗಾಟ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಬ್ರಜ್ ಭೂಷಣ್!

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Dakshineswar-kali-temple-kolkatha

Famous Godesess Temple: ಹಿಂದೂ ನವರತ್ನ ದೇವಾಲಯ ದಕ್ಷಿಣೇಶ್ವರ ಕಾಳಿ ಮಂದಿರ

h-kantaraju

Cast Census: ಕಾಯ್ದೆ ಪ್ರಕಾರ ಸರಕಾರ ಜಾತಿಗಣತಿ ವರದಿ ಒಪ್ಪಬೇಕು

BJP-Head

Haryana Election Result: ಹರಿಯಾಣದಲ್ಲಿ ಅಭಿವೃದ್ಧಿ ಗ್ಯಾರಂಟಿ ಗೆದ್ದಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru University: 9ಕ್ಕೂ ಅಧಿಕ ಪಿ.ಜಿ. ಕೋರ್ಸ್‌ಗೆ ವಿದ್ಯಾರ್ಥಿಗಳಿಲ್ಲ !

Mangaluru University: 9ಕ್ಕೂ ಅಧಿಕ ಪಿ.ಜಿ. ಕೋರ್ಸ್‌ಗೆ ವಿದ್ಯಾರ್ಥಿಗಳಿಲ್ಲ !

Mangaluru: “ಐ ವಾಚ್‌’ ಗಿಫ್ಟ್‌ ಆಸೆಗೆ 1,10,028 ರೂ. ಕಳೆದುಕೊಂಡರು

Mangaluru: “ಐ ವಾಚ್‌’ ಗಿಫ್ಟ್‌ ಆಸೆಗೆ 1,10,028 ರೂ. ಕಳೆದುಕೊಂಡರು

Gangolli

Mangaluru: ಉಸಿರಾಟ ಸಮಸ್ಯೆ; ಎಂಟು ತಿಂಗಳ ಗರ್ಭಿಣಿ ಸಾವು

Mangaluru: ಹುಲಿ ವೇಷದ ಅಬ್ಬರ ಸವಿಯಲಿರುವ ತಾರೆಯರು

Mangaluru: ಹುಲಿ ವೇಷದ ಅಬ್ಬರ ಸವಿಯಲಿರುವ ತಾರೆಯರು

Election Result: ಹರಿಯಾಣ, ಜಮ್ಮು ಕಾಶ್ಮೀರ ಫಲಿತಾಂಶ: ಬಿಜೆಪಿ ಸಂಭ್ರಮ

Election Result: ಹರಿಯಾಣ, ಜಮ್ಮು ಕಾಶ್ಮೀರ ಫಲಿತಾಂಶ: ಬಿಜೆಪಿ ಸಂಭ್ರಮ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Arif Khan

Anti-national activities ವಿರುದ್ಧ ಕ್ರಮಕ್ಕೆ ಸಿಎಂ ವಿಜಯನ್ ಮೌನ: ಕೇರಳ ರಾಜ್ಯಪಾಲ

Omar Abdulla

Federalism..; ಒಮರ್ ಅಬ್ದುಲ್ಲಾಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

brij Bhushan

Power…; ವಿನೇಶ್ ಫೋಗಾಟ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಬ್ರಜ್ ಭೂಷಣ್!

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Dakshineswar-kali-temple-kolkatha

Famous Godesess Temple: ಹಿಂದೂ ನವರತ್ನ ದೇವಾಲಯ ದಕ್ಷಿಣೇಶ್ವರ ಕಾಳಿ ಮಂದಿರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.