ಮುಡುಪಿನಡ್ಕ-ಮೈಂದನಡ್ಕ ರಸ್ತೆ ಕಾಮಗಾರಿ ಸ್ಥಗಿತ 


Team Udayavani, Dec 28, 2017, 3:44 PM IST

28-Dec-15.jpg

ಬಡಗನ್ನೂರು: ಮುಡುಪಿನಡ್ಕ -ಮೈಂದನಡ್ಕ ಜಿ.ಪಂ. ರಸ್ತೆ ಡಾಮರು ಕಾಮಗಾರಿಗೆ ಆರಂಭದಲ್ಲೇ ವಿಘ್ನ ಎದುರಾಗಿದೆ. ರಸ್ತೆ ಇಕ್ಕೆಲಗಳಲ್ಲಿ ಸಮತಟ್ಟುಗೊಳಿಸಿ ಜಲ್ಲಿ ಹಾಕಿದ ಕೆಲಸಗಾರರು 15 ದಿನಗಳಿಂದ ನಾಪತ್ತೆಯಾಗಿದ್ದಾರೆ.

ಮುಡುಪಿನಡ್ಕ-ಸುಳ್ಯಪದವು ಜಿ.ಪಂ. ರಸ್ತೆಯನ್ನು ಅಭಿವೃದ್ಧಿಗೊಳಿಸುವಂತೆ ನಾಗರಿಕರಿಂದ ಅಹೋರಾತ್ರಿ ಪ್ರತಿಭಟನೆಗಳೂ ನಡೆದಿದ್ದವು. ಕಡೆಗೂ ಸಂಸದೀಯ ಕಾರ್ಯದರ್ಶಿ ಹಾಗೂ ಪುತ್ತೂರು ಶಾಸಕಿ ಶಕುಂತಳಾ ಟಿ. ಶೆಟ್ಟಿ ಅವರ ಪ್ರಯತ್ನದಿಂದ ಒನ್‌ ಟೈಮ್‌ ಇಂಪ್ರೂವ್‌ಮೆಂಟ್‌ ಯೋಜನೆಯಲ್ಲಿ ಮುಡುಪಿನಡ್ಕದಿಂದ ಮೈಂದನಡ್ಕ ಮಧ್ಯೆ 2.1 ಕಿ.ಮೀ. ರಸ್ತೆ ಅಭಿವೃದ್ಧಿಗೆ 1.20 ಕೋಟಿ ರೂ. ಅನುದಾನ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಗುತ್ತಿಗೆದಾರರು ಡಿಸೆಂಬರ್‌ ಮೊದಲಿಗೇ ಕಾಮಗಾರಿಯನ್ನು ಆರಂಭಿಸಿದ್ದಾರೆ. ಆದರೆ ಅಲ್ಪ ಕೆಲಸ ಮುಗಿಸಿ ತೆರಳಿದ್ದಾರೆ.

ಧೂಳಿನ ಮಜ್ಜನ
ಮೊದಲೇ ರಸ್ತೆ ಹದಗೆಟ್ಟ ಕಾರಣದಿಂದ ಈ ಭಾಗದ ನಾಗರಿಕರು ಸಂಚಾರ ಸಮಸ್ಯೆಯಿಂದ ಹೈರಾಣಾಗಿದ್ದಾರೆ. ಈಗ ರಸ್ತೆಯ ಇಕ್ಕೆಲಗಳಲ್ಲಿ ಸಮತಟ್ಟು ಮಾಡಿರುವುದರಿಂದ ಸಂಚಾರದ ಸಂದರ್ಭ ಧೂಳಿನ ಮಜ್ಜನವಾಗುತ್ತಿದೆ. ಕೆಲವು ಕಡೆ ಗಳಲ್ಲಿ ರಸ್ತೆಯನ್ನು ಅಗೆದು ಜಲ್ಲಿ ಹಾಕಿ ಬಿಟ್ಟಿರುವುದರಿಂದ ದ್ವಿಚಕ್ರ ವಾಹನಗಳಿಗಂತೂ ಸಂಚಾರಕ್ಕೆ ಸವಾಲಾಗಿದೆ.

ಗಾಳಿ ಸುದ್ದಿ?
ರಸ್ತೆಯ ಕಾಮಗಾರಿ ಆರಂಭಿಸಿದ ಗುತ್ತಿಗೆದಾರ ಕೆಲಸಗಾರರು ನಿಯಮದಂತೆ ರಸ್ತೆಯ ಇಕ್ಕೆಲಗಳಲ್ಲಿ ಸಮತಟ್ಟು ಮಾಡುವ ಹಾಗೂ ಜಲ್ಲಿ ಹಾಕುವ ಕೆಲಸ ಮಾಡಿಲ್ಲ. ಮಂಗಳೂರಿನಿಂದ ಕಾಮಗಾರಿ ಪರಿಶೀಲನೆಗೆ ಆಗಮಿಸಿದ್ದ ಯೋಜನೆಯ ಮೇಲ್ವಿಚಾರಕರು ತರಾಟೆಗೆ ತೆಗೆದುಕೊಂಡ ಕಾರಣ ಕಾಮಗಾರಿ ಸ್ಥಗಿತಗೊಂಡಿದೆ ಎನ್ನುವ ಸುದ್ದಿ ಸಾರ್ವಜನಿಕ ವಲಯದಲ್ಲಿ ಹರಿದಾಡಿದೆ. ಆದರೆ ಪಿಡಬ್ಲ್ಯುಡಿ ಗುತ್ತಿಗೆದಾರರು ಇದನ್ನು ನಿರಾಕರಿಸಿದ್ದಾರೆ.

ಅಗ್ರಿಮೆಂಟ್‌ ಅಂತಿಮವಾಗಿಲ್ಲ
ಕಾಮಗಾರಿಗೆ ಅನುದಾನ ನಿಗದಿಯಾಗಿ ಗುತ್ತಿಗೆದಾರರಿಗೆ ಟೆಂಡರ್‌ ಆಗಿದ್ದು, ಅಗ್ರಿಮೆಂಟ್‌ ಹಂತದಲ್ಲಿದೆ. ಟೆಂಡರ್‌ ಆಗಿರುವುದರಿಂದ ಅರ್ತ್‌ ವರ್ಕ್‌ ಮುಗಿಸುವ ಸಮಯಕ್ಕೆ ಟೆಂಡರ್‌ನ ಹಣಕಾಸು ಬಿಡ್‌ ಅಂತಿಮಗೊಳ್ಳುವ ನಿರೀಕ್ಷೆಯಲ್ಲಿ ಕಾಮಗಾರಿ ಆರಂಭಿಸಲಾಗಿದೆ. ಆದರೆ ನಿರೀಕ್ಷೆಯಂತೆ ಅಂತಿಮಗೊಳ್ಳದ ಕಾರಣಕ್ಕೆ ಕಾಮಗಾರಿಯನ್ನು ನಿಲ್ಲಿಸಲಾಗಿದೆ ಎನ್ನುವುದು ಲೋಕೋಪಯೋಗಿ ಇಲಾಖೆಯ ಹೇಳಿಕೆಯಾಗಿದೆ.

ಬಾಕಿಯಾಗುವುದಿಲ್ಲ
ಹಲವು ರೀತಿಯ ಪ್ರಯತ್ನ ನಡೆಸಿದ ಬಳಿಕ ಈ ರಸ್ತೆಯ ಅಭಿವೃದ್ಧಿಗೆ ಅನುದಾನ ನೀಡಲು ಸಾಧ್ಯವಾಗಿದೆ. ಕಾಮಗಾರಿ ಏಕೆ ಸ್ಥಗಿತಗೊಂಡಿದೆ ಎಂಬ ಕುರಿತು ಸಂಬಂಧಿಸಿದ ಇಲಾಖೆಯವರಲ್ಲಿ ಕೇಳುತ್ತೇನೆ. ಮಂಜೂರುಗೊಂಡ ಕಾಮಗಾರಿ ಯಾವುದೇ ಕಾರಣಕ್ಕೂ ಬಾಕಿಯಾಗುವುದಿಲ್ಲ.
– ಶಕುಂತಳಾ ಟಿ. ಶೆಟ್ಟಿ ಶಾಸಕರು, 

ತಾತ್ಕಾಲಿಕ ಸ್ಥಗಿತ
 ಟೆಂಡರ್‌ ಪ್ರಕ್ರಿಯೆ ಆರಂಭವಾದ ಕಾರಣ ಗುತ್ತಿಗೆದಾರರು ಕೆಲಸ ಆರಂಭಿಸಿದ್ದರು. ಆರಂಭಿಕ ಕೆಲಸ ಪೂರ್ಣಗೊಂಡ ಹಿನ್ನೆಲೆಯಲ್ಲಿ ತಾತ್ಕಾಲಿಕ ನಿಲ್ಲಿಸಲಾಗಿದೆ. ಅಗ್ರಿಮೆಂಟ್‌ ಅಂತಿಮ ಹಂತದಲ್ಲಿದೆ. ಈ ಪ್ರಕ್ರಿಯೆ ಅಂತಿಮಗೊಂಡ ಕೂಡಲೇ ಕಾಮಗಾರಿಯನ್ನು ಮತ್ತೆ ಆರಂಭಿಸಲಾಗುವುದು.
ಬಾಲಕೃಷ್ಣ ಭಟ್‌
  ಪಿಡಬ್ಲ್ಯುಡಿ ಎಂಜಿನಿಯರ್‌

ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

Udupi: ಗೀತಾರ್ಥ ಚಿಂತನೆ-73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

B Nagendra: ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಇ.ಡಿ. ಅರ್ಜಿ

B Nagendra: ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಇ.ಡಿ. ಅರ್ಜಿ

ಯೋಗೇಶ್ವರ್‌ ಬಿಜೆಪಿ ಕಟ್ಟಾಳುವಲ್ಲ: ಅಶೋಕ್‌

C. P. Yogeshwara ಬಿಜೆಪಿ ಕಟ್ಟಾಳುವಲ್ಲ: ಅಶೋಕ್‌

CPY-annapoorana

By Election: ಚನ್ನಪಟ್ಟಣ, ಸಂಡೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಿಸಿದ ಎಐಸಿಸಿ

Uttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿUttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿ

Uttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Belthangady: ಆಮ್ನಿ ಕಾರು ಬೆಂಕಿಗಾಹುತಿ

de

Gerukatte: ಕೆರೆಯಲ್ಲಿ ಅಪರಿಚಿತ ಶವ ಪತ್ತೆ

6

Belthangady: ಕಡೆಗೂ ಕಜಕ್ಕೆ ಶಾಲೆಯವರೆಗೆ ಬಂತು ಸರಕಾರಿ ಬಸ್‌

5

Mudipinadka-ಸುಳ್ಯಪದವು: ರಸ್ತೆ ಹೊಂಡ ತಪ್ಪಿಸುವುದೇ ಸಾಹಸ!

1(1)

Puttur: ನಿಧಾನಕ್ಕೆ ಹೋಗಿ, ಇಲ್ಲಿ ಕೆಲಸವೂ ನಿಧಾನಗತಿಯಲ್ಲಿದೆ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

Udupi: ಗೀತಾರ್ಥ ಚಿಂತನೆ-73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

B Nagendra: ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಇ.ಡಿ. ಅರ್ಜಿ

B Nagendra: ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಇ.ಡಿ. ಅರ್ಜಿ

ಯೋಗೇಶ್ವರ್‌ ಬಿಜೆಪಿ ಕಟ್ಟಾಳುವಲ್ಲ: ಅಶೋಕ್‌

C. P. Yogeshwara ಬಿಜೆಪಿ ಕಟ್ಟಾಳುವಲ್ಲ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.