ಮಳೆಗಾಲಕ್ಕೂ ಮುನ್ನ ಕಿರು ಸೇತುವೆಗೆ ಬೇಕಿದೆ ತಡೆಗೋಡೆ

ಬೆಳ್ತಂಗಡಿ: ಅಪಾಯ ಆಹ್ವಾನಿಸುತ್ತಿದೆ ಕಾಲುಸಂಕ

Team Udayavani, Apr 25, 2019, 5:50 AM IST

4

ಕಕ್ಕೆನೇಜಿ ಸಮೀಪ ಏಳೂವರೆ ಹೊಳೆಗೆ ಮಳೆಗಾಲದಲ್ಲಿ ಅಡಿಕೆ ಮರದಲ್ಲಿ ನಿರ್ಮಿಸಿದ ಕಾಲುಸಂಕ. (ಸಂಗ್ರಹ ಚಿತ್ರ)

ಬೆಳ್ತಂಗಡಿ: ಮಳೆಗಾಲದಲ್ಲಿ ತಾ|ನಾದ್ಯಂತ ತಡೆಗೋಡೆ ಇಲ್ಲದಿರುವ ಕಿರುಸೇತುವೆ, ಕಾಲುಸಂಕಗಳು ಅಪಾಯಕ್ಕೆ ಆಹ್ವಾನ ನೀಡುತ್ತಿದ್ದು, ಜನರು ಆತಂಕ ಎದುರಿಸಬೇಕಾಗಿದೆ. ದುರ್ಗಮ ಪ್ರದೇಶ ಒಂದೆಡೆಯಾ ದರೆ, ಕಿರು ಸೇತುವೆಗಳು ತಡೆಗೋಡೆ ಯಿಲ್ಲದೆ ಶಿಥಿಲಾವಸ್ಥೆಯಲ್ಲಿರುವುದ ರಿಂದ ಮಳೆಗಾಲ ಸನ್ನಿಹಿತದಲ್ಲಿ ಮುಂಜಾ ಗೃತೆ ವಹಿಸಬೇಕಾಗಿದೆ. ಸ್ವಲ್ಪ ಆಯ ತಪ್ಪಿದರೂ ಪರಿಸ್ಥಿತಿ ವಿಕೋಪಕ್ಕೆ ತೆರಳುವ ಪ್ರದೇಶಗಳು ತಾ|ನ ಹಲವೆಡೆ ಇವೆ. ವಿದ್ಯಾರ್ಥಿಗಳ ಸಹಿತ ವೃದ್ಧರು, ಸಾರ್ವಜನಿಕರು, ದ್ವಿಚಕ್ರ ಸವಾರರು ಆತಂಕದಲ್ಲಿ ಸಂಚರಿಸಬೇಕಾಗಿದ್ದು, ಜೀವಕ್ಕೆ ಕುತ್ತು ಬರುವ ಸಾಧ್ಯತೆ ಇದೆ.

ಗುರಿಂಗಾನದ ಕಿರು ಸೇತುವೆ
ಲಾೖಲ ಗ್ರಾಮದ ಗುರಿಂಗಾನ 2ನೇ ಕ್ರಾಸ್‌ ರಸ್ತೆಯಲ್ಲಿ ಮುಂದೆ ಸಾಗಿದಾಗ ಸಿಗುವ ಕಿರು ಸೇತುವೆ ಶಿಥಿಲಾ ವಸ್ಥೆಯಲ್ಲಿದೆ. ಸುಮಾರು 20ಕ್ಕೂ ಹೆಚ್ಚು ಮನೆಗಳಿಗೆ ಪ್ರಮುಖ ಸಂಪರ್ಕವಾಗಿದ್ದು, ಪ್ರತಿ ವರ್ಷ ಮಳೆಗಾಲದಲ್ಲಿ ಸೇತುವೆ ಮುಳುಗಡೆಯಾಗು ತ್ತಿದೆ. ಕಳೆದ ವರ್ಷ ಜಿ.ಪಂ. ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದಾಗ ಗ್ರಾ.ಪಂ.ನಿಂದ ನೂತನ ಸೇತುವೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೂ ಈವರೆಗೆ ಯಾವುದೇ ಅನುದಾನ ದೊರೆತಿಲ್ಲ ಎನ್ನುತ್ತಾರೆ ಗ್ರಾ.ಪಂ. ಅಧಿಕಾರಿಗಳು. ರಸ್ತೆಯು ತೀವ್ರ ಹದಗೆಟ್ಟಿದ್ದು, ಡಾಮರು ಕಾಮಗಾರಿಯಾಗದೆ ಜಲ್ಲಿ ಎದ್ದು ಬಂದು, ವಾಹನ ಸವಾರರು ಆಯ ತಪ್ಪಿದರೆ ಕಲ್ಲು-ಬಂಡೆಗಳಿರುವ ಪ್ರಪಾತಕ್ಕೆ ಉರುಳಿ ಅನಾಹುತ ಸಂಭವಿಸುವ ಭೀತಿ ಇದೆ.

ಮಣ್ಣು ಕುಸಿತ
ಇಂದಬೆಟ್ಟು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕಲ್ಲಾಜೆ ಶಾಲೆ ಸಂಪರ್ಕ ರಸ್ತೆಯ ಕಡಂಬಿಲದಲ್ಲಿ ಮಳೆಗಾಲ ಸಮೀಪದಲ್ಲಿ ರಸ್ತೆ ಬದಿ ಮಣ್ಣು ಕುಸಿತವಾಗುತ್ತದೆ. ಹಲವು ಬಾರಿ ದುರಸ್ತಿ ಕೈಗೊಂಡರೂ ಸಂಪರ್ಕ ನಿರ್ಮಿಸುವುದೇ ಸವಾಲಾಗಿದೆ.

ಚಾರ್ಮಾಡಿ ರಸ್ತೆ ದುರ್ಗಮ
ಚಾರ್ಮಾಡಿ ಹೆದ್ದಾರಿಯಯಲ್ಲಿ ಹಲವು ಕಿರು ಸೇತುವೆಗಳಿದ್ದು, ಈ ಬಾರಿ ಮಳೆಗಾಲಕ್ಕೆ ಆತಂಕ ಎದುರಾಗಿದೆ. ಚಾರ್ಮಾಡಿ ಘಾಟಿ 3ನೇ ತಿರುವಲ್ಲಿ ಕಳೆದ ಬಾರಿ ಗುಡ್ಡ ಕುಸಿತಕ್ಕೊಳಗಾಗಿ ಸಂಪರ್ಕ ಸಮಸ್ಯೆಯಾಗಿತ್ತು. ಈ ಬಾರಿಯೂ ಮುನ್ನೆಚ್ಚರಿಕೆ ವಹಿಸದಿದ್ದಲ್ಲಿ ಮತ್ತೆ ಅನಾಹುತ ಎದುರಾಗುವ ಸಾಧ್ಯತೆ ಇದೆ. ಎ. 15ರಂದು ಕೂಲಿ ಕೆಲಸ ನಿರ್ವಹಿಸುತ್ತಿದ್ದ ಮುಂಡಾಜೆ ಗ್ರಾ.ಪಂ.ನ ಚಾಮುಂಡಿ ನಗರ ನಿವಾಸಿಯೊಬ್ಬರು ಕಡಿರುದ್ಯಾವರ ಗ್ರಾಮದ ಉದ್ದದ ಪಲ್ಕೆ ಎಂಬಲ್ಲಿನ ತಡೆಗೋಡೆ ಇಲ್ಲದ ಕಿರು ಸೇತುವೆಯಿಂದ ಬಿದ್ದು ಮೃತಪಟ್ಟಿದ್ದರು. ದುರಂತ ಸಂಭವಿಸುವುದಕ್ಕೂ ಮುನ್ನ ಕಿರು ಸೇತುವೆಗಳಿಗೆ ಸೂಕ್ತ ಕಾಯಕಲ್ಪ ಒದಗಿಸಲು ಅಧಿಕಾರಿಗಳು, ಜನಪ್ರತಿನಿಧಿಗಳು ಇಚ್ಛಾಶಕ್ತಿ ಪ್ರದರ್ಶಿಸಬೇಕಿದೆ.

ಅಡಿಕೆ ಮರದ ಕಾಲು ಸಂಕ
ಮುಂಡಾಜೆ ಗ್ರಾಮದ ಸೋಮಂತಡ್ಕದಿಂದ ದಿಡುಪೆಗೆ ಹೋಗುವ ರಸ್ತೆಯಲ್ಲಿ ಸುಮಾರು 9 ಕಿ.ಮೀ. ಸಾಗಿದಾಗ ಮಿತ್ತಬಾಗಿಲು ಗ್ರಾ.ಪಂ. ವ್ಯಾಪ್ತಿಯ ಕುಕ್ಕಾವು ಪ್ರದೇಶವಿದೆ. ಇಲ್ಲಿಂದ ಕೂಡಬೆಟ್ಟು ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಕಕ್ಕೆನೇಜಿ ಸಮೀಪ ಏಳೂವರೆ ಹೊಳೆ ಸಿಗುತ್ತದೆ. ಇಲ್ಲಿನ ನೂರಾರು ಮನೆಯವರು ಈ ಹೊಳೆ ದಾಟಿಕೊಂಡೇ ಮುಖ್ಯರಸ್ತೆಗೆ ಬರಬೇಕು. ಇಲ್ಲಿ ಸೇತುವೆ ನಿರ್ಮಾಣವಾದರೆ ಅದೆಷ್ಟೋ ವರ್ಷಗಳ ಬೇಡಿಕೆ ಈಡೇರಿದಂತಾಗುತ್ತದೆ. ಆದರೂ ಸಂಸದರು, ಶಾಸಕರು, ಅಧಿಕಾರಿಗಳು ಸೇತುವೆ ನಿರ್ಮಾಣಕ್ಕೆ ಮನಸ್ಸು ಮಾಡಿಲ್ಲ. ಸೇತುವೆ ಇಲ್ಲದಿದ್ದರೂ ಹೊಳೆ ದಾಟಲು ಗ್ರಾಮಸ್ಥರು ಶ್ರಮದಾನದ ಮೂಲಕ ಅಡಿಕೆ ಮರದ ಕಾಲು ಸಂಕವನ್ನು ನಿರ್ಮಿಸಿ ಹೊಳೆ ದಾಟುತ್ತಿದ್ದಾರೆ. ಇಂತಹಾ ಹಲವು ನಿದರ್ಶನಗಳು ತಾಲೂಕಿನ ಬಾಂಜಾರು, ಕುತ್ರೊಟ್ಟು ಸಹಿತ ಹಳ್ಳಿಪ್ರದೇಶದಲ್ಲಿ ಕಾಣಸಿಗುತ್ತವೆ.

ಕಿರು ಸೇತುವೆ ಅಭಿವೃದ್ಧಿಗೆ ಸರಕಾರಕ್ಕೆ ಪ್ರಸ್ತಾವನೆ
ತಾಲೂಕಿನ 45ಕ್ಕೂ ಹೆಚ್ಚು ಕಿರು ಸೇತುವೆಗಳ ಅಭಿವೃದ್ಧಿಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸ ಲಾಗಿದೆ. ಕಡಿರುದ್ಯಾವರ, ಕುಕ್ಕೇಡಿ ಗ್ರಾ.ಪಂ.ಗಳ ಕಿರು ಸೇತುವೆ ಅಭಿವೃದ್ಧಿಪಡಿಸಲಾಗಿದೆ. ನೀತಿಸಂಹಿತೆಯಿಂದ ಹಲವು ಕಾಮಗಾರಿ ತಡವಾಗಿದೆ. ಕಿಂಡಿ ಅಣೆಕಟ್ಟು ಅಥವಾ ಸಣ್ಣ ನೀರಾವರಿ ಪ್ರದೇಶಗಳಲ್ಲಿ ಜನವಸತಿ ಇದ್ದಲ್ಲಿ ಸಂಪರ್ಕಕ್ಕೆ ಕಿರು ಸೇತುವೆಗೆ ಅವಕಾಶವಿದೆ. ಆದರೆ ತಡೆಗೋಡೆ ನಿರ್ಮಿಸುವಂತಿಲ್ಲ.
ಉಳಿದಂತೆ ಕಾಮಗಾರಿ ಪ್ರಗತಿಯಲ್ಲಿದೆ.
– ಹರೀಶ್‌ ಪೂಂಜ, ಶಾಸಕರು

- ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.