Surathkal ನಿರುಪಯೋಗಿ ಟೋಲ್‌ಬೂತ್‌ ತೆರವಿಗೆ ಹೋರಾಟ ಸಮಿತಿ ಆಗ್ರಹ


Team Udayavani, Sep 2, 2023, 12:23 AM IST

Surathkal ನಿರುಪಯೋಗಿ ಟೋಲ್‌ಬೂತ್‌ ತೆರವಿಗೆ ಹೋರಾಟ ಸಮಿತಿ ಆಗ್ರಹ

ಸುರತ್ಕಲ್‌: ನಿರುಪಯೋಗಿ ಟೋಲ್‌ ಬೂತ್‌ ತೆರವುಗೊಳಿಸದಿರುವುದರಿಂದ, ಮುನ್ಸೂಚನೆ ಇಲ್ಲದೆ ದಿಢೀರ್‌ ಎದುರಾಗುವ ಟೋಲ್‌ ಬೂತ್‌ ನಿಂದ ವಾಹನ ಅವಘಡಗಳು ನಡೆದು, ಪ್ರಾಣಹಾನಿಗಳು ಈಗಾಗಲೆ ಸಂಭವಿಸಿದೆ.

ಮತ್ತಷ್ಟು ದುರಂತಗಳು ಸಂಭವಿಸುವ ಮುನ್ನ ಟೋಲ್‌ ಬೂತ್‌ ಅನ್ನು ತತ್‌ಕ್ಷಣವೇ ತೆರವುಗೊಳಿಸಬೇಕು ಎಂದು ಸುರತ್ಕಲ್‌ ಟೋಲ್‌ ಗೇಟ್‌ ಹೋರಾಟ ಸಮಿತಿ ಆಗ್ರಹಿಸಿದೆ.

ಟೋಲ್‌ ಬೂತ್‌ ತೆರವುಗೊಳಿಸುವಂತೆ ಹೋರಾಟ ಸಮಿತಿಯು ಹಲವು ಬಾರಿ ಒತ್ತಾಯ ಮಾಡಿತ್ತು. ಅನಗತ್ಯವಾಗಿ ನಿರುಪಯುಕ್ತ ಟೋಲ್‌ ಬೂತ್‌ ಉಳಿಸಿಕೊಂಡು ಟೋಲ್‌ ಕೇಂದ್ರದ ಪರಿಸರದಲ್ಲಿ ರಸ್ತೆ ಅಭಿವೃದ್ಧಿ ಪಡಿಸುತ್ತಿರುವುದು ಜನರ ತೆರಿಗೆಯ ಹಣದ ದುರುಪಯೋಗವಾಗಿದೆ ಎಂದು ಸಮಿತಿ ಆರೋಪಿಸಿದೆ.

ಏಳು ವರ್ಷಗಳ ಕಾಲ ಜನರ ಸತತ ಹೋರಾಟದಿಂದ ಅಧಿಕೃತವಾಗಿ ಮುಚ್ಚಲ್ಪಟ್ಟಿರುವ ಸುರತ್ಕಲ್‌ ಟೋಲ್‌ ಗೇಟ್‌ನ ನಿರುಪಯೋಗಿ ಬೂತ್‌ಗಳನ್ನು ಒಂಬತ್ತು ತಿಂಗಳು ಕಳೆದರೂ ತೆರವುಗೊಳಿಸದಿರುವುದು ಖಂಡನೀಯ ಎಂದು ಸಮಿತಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ಸಂಸದರು, ಶಾಸಕರು ಟೋಲ್‌ ಕೇಂದ್ರ ತೆರವು ಮಾಡಲು ಯಾಕೆ ಮುಂದಾಗಿಲ್ಲ. ಸುರತ್ಕಲ್‌ ಟೋಲ್‌ ಸುಂಕವನ್ನು ಹೆಜಮಾಡಿ ಟೋಲ್‌ ಕೇಂದ್ರದಲ್ಲಿ, ಅಥವಾ ಮರಳಿ ಸುರತ್ಕಲ್‌ ಟೋಲ್‌ ಕೇಂದ್ರದಲ್ಲೋ ಸಂಗ್ರಹ ಮಾಡುವುದು ಅಸಾಧ್ಯ. ಹೋರಾಟ ಸಮಿತಿ ಅದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಹೋರಾಟ ಸಮಿತಿಯ ಸಂಚಾಲಕ ಮುನೀರ್‌ ಕಾಟಿಪಳ್ಳ ,ಪುರುಷೋತ್ತಮ್‌ ಚಿತ್ರಾಪುರ ಮತ್ತಿತರರು ಒತ್ತಾಯಿಸಿದರಲ್ಲದೆ, ಇಲ್ಲಿನ ನಿರುಪಯೋಗಿ ಟೋಲ್‌ ಬೂತ್‌ ಅನ್ನು ತೆರವುಗೊಳಿಸದಿದ್ದಲ್ಲಿ ಸುರತ್ಕಲ್‌ ಟೋಲ್‌ ಬೂತ್‌ ತೆರವಿಗಾಗಿ ಹೋರಾಟವನ್ನು ಆರಂಭಿಸುವುದಾಗಿ ಎಚ್ಚರಿಸಿದರು.

ಟಾಪ್ ನ್ಯೂಸ್

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.