ಕಟೀಲು ಎಪಿಎಂಸಿ ಕಟ್ಟಡಕ್ಕೆ ಶಿಲಾನ್ಯಾಸ
Team Udayavani, Jan 12, 2018, 10:17 AM IST
ಕಟೀಲು: ಗ್ರಾಮೀಣ ಪ್ರದೇಶದ ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ಉತ್ತಮ ಬೆಲೆ ಸಿಗಬೇಕು. ಈ ನಿಟ್ಟನಲ್ಲಿ ಎಪಿಎಂಸಿ ವತಿಯಿಂದ ಕಟೀಲಿನಲ್ಲಿ 35 ಲಕ್ಷ ರೂ. ವೆಚ್ಚದಲ್ಲಿ ಮಾರುಕಟ್ಟೆ ನಿರ್ಮಾಣವಾಗಲಿದೆ ಎಂದು ಶಾಸಕ ಅಭಯಚಂದ್ರ ಜೈನ್ ಹೇಳಿದರು.
ಜ. 11ರಂದು ಕಟೀಲು ಗ್ರಾ.ಪಂ. ವ್ಯಾಪ್ತಿಯಲ್ಲಿನ ಮಾಂಜದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಎಪಿಎಂಸಿ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ, ಅವರು ಮಾತನಾಡಿದರು. ಕೃಷಿ ಚಟುವಟಿಕೆಗಳಿಗಾಗಿ ಇಲ್ಲಿನ ರೈತರು ಕಿನ್ನಿಗೋಳಿ ಅಥವಾ ಬಜಪೆ ಕೃಷಿ ಮಾರುಕಟ್ಟೆಗಳನ್ನು ಅವಲಂಬಿಸಬೇಕಾಗಿತ್ತು. ಈ ಕಟ್ಟಡವು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾರ್ಯಾಚರಿಸಲಿದೆ ಎಂದರು.
ಎಪಿಎಂಸಿ ಅಧ್ಯಕ್ಷ ಪ್ರಮೋದ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ. ಸದಸ್ಯ ಸುಕುಮಾರ್ ಸನಿಲ್, ಕಟೀಲು ಗ್ರಾ. ಪಂ. ಅಧ್ಯಕ್ಷೆ ಗೀತಾ ಪೂಜಾರಿ, ಉಪಾಧ್ಯಕ್ಷ ಕಿರಣ್ ಶೆಟ್ಟಿ, ಎಪಿಎಂಸಿ ಮಾಜಿ ಅಧ್ಯಕ್ಷ ಮೋನಪ್ಪ ಶೆಟ್ಟಿ ಎಕ್ಕಾರು, ಜೋಯಲ್ ಡಿ’ಸೋಜಾ, ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಜಿ.ಪಂ. ಮಾಜಿ ಸದಸ್ಯೆ ಶೈಲಾ ಸಿಕ್ವೇರಾ, ನಿತನ್ ಹೆಗ್ಡೆ ಕಾವರ ಮನೆ, ಯಾಧವ ಕೋಟ್ಯಾನ್ ಪೆರ್ಮುದೆ, ವಿಕ್ರಂ ಮಾಡ, ಗ್ರಾ. ಪಂ. ಸದಸ್ಯ ರಮಾನಂದ ಪೂಜಾರಿ, ಡೋಲ್ಫಿ ಸಂತುಮಾಯೋರ್, ಪ್ರಕಾಶ್, ದಯಾನಂದ ಶೆಟ್ಟಿ, ಕೃಷಿ ಇಲಾಖೆ ಕಾರ್ಯದರ್ಶಿ ಕುಬೇರ್ ನಾಯಕ್, ಅಶೋಕ್ ಕುಮಾರ್, ಶ್ರೀನಿವಾಸ ಮೂರ್ತಿ, ಜಯಲಕ್ಷ್ಮೀ ಮತ್ತಿತರರಿದ್ದರು.
ಕೋಟಿ ರೂ. ವೆಚದಲ್ಲಿ ರಸ್ತೆ
ನಬಾರ್ಡ್ನಿಂದ 1 ಕೋ. ರೂ. ವೆಚ್ಚದಲ್ಲಿ ಕಟೀಲು- ಮಲ್ಲಿಗೆಯಂಗಡಿ -ನಡುಗೋಡು – ಶಿಬರೂರು ಸಂರ್ಪಕಿಸುವ ರಸ್ತೆ ನಿರ್ಮಾಣ ಮಾಡಲಾಗುವುದು. ಈಗಾಗಲೇ ಸರ್ವೆ ಕಾರ್ಯ ಮುಗಿದಿದ್ದು, ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭ ವಾಗಲಿದೆ. ಈ ರಸ್ತೆಯ ಬಗ್ಗೆ ಉದಯವಾಣಿಯ ಸುದಿನದಲ್ಲಿ ರಸ್ತೆ ಅಗತ್ಯದ ಬಗ್ಗೆ ವರದಿ ಮಾಡಲಾಗಿತ್ತು.
ಕಾಮಗಾರಿ ನಡೆಯಲಿದೆ
ಕಿನ್ನಿಗೋಳಿ -ಕಟೀಲು -ಉಲ್ಲಂಜೆ ರಸ್ತೆಗೆ ಎರಡು ಕೋಟಿ ರೂ. ವೆಚ್ಚದಲ್ಲಿ 2 ಸೇತುವೆ ಸಹಿತ ರಸ್ತೆಗೆ ಡಾಮರು ಕಾಮಗಾರಿ ನಡೆಯಲಿದೆ. ಕೆಲವೊಂದು ಕಡೆಗಳಲ್ಲಿ ದಾನಿಗಳು ರಸ್ತೆಗೆ ಸ್ಥಳ ಬಿಟ್ಟರೆ, ಅಗಲಗೊಳಿಸುವ ಕೆಲಸವು ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ
Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್ ಆರೋಪ
Kinnigoli ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ
Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Women’s T20 World Cup: ಆಸೀಸ್ಗೆ ಸುಲಭದ ತುತ್ತಾದ ಲಂಕಾ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.