ಹೆಚ್ಚುವರಿ 11.59 ಎಕ್ರೆ ಕೈಬಿಡಲು ಪಾಲಿಕೆ ತೀರ್ಮಾನ


Team Udayavani, Jul 19, 2017, 2:35 AM IST

palike-teermana.jpg

ಲಾಲ್‌ಬಾಗ್‌: ಪಂಪ್‌ವೆಲ್‌ನಲ್ಲಿ ಸುಸಜ್ಜಿತ ಬಸ್‌ ನಿಲ್ದಾಣ ನಿರ್ಮಾಣಕ್ಕೆ ನಿಗದಿಪಡಿಸಿರುವುದಕ್ಕಿಂತ ಹೆಚ್ಚುವರಿಯಾಗಿ 2ನೇ ಹಂತದ ಭೂಸ್ವಾಧೀನದ ತಾರೆತೋಟ ವ್ಯಾಪ್ತಿಯ ಸುಮಾರು 11.59 ಎಕ್ರೆ ಭೂಮಿಯನ್ನು ಕೈಬಿಡುವ ಸಂಬಂಧ ಮಹಾನಗರ ಪಾಲಿಕೆ ಮಂಗಳವಾರ ತೀರ್ಮಾನ ಕೈಗೊಂಡಿದೆ. 

ಈ ನಿರ್ಣಯದಿಂದ 9 ವರ್ಷಗಳಿಂದ ಅತಂತ್ರರಾಗಿದ್ದ ಸುಮಾರು 60ಕ್ಕೂ ಅಧಿಕ ಕುಟುಂಬಗಳಿಗೆ ನೆರವಾಗಲಿದೆ.
ಮೇಯರ್‌ ಕವಿತಾ ಸನಿಲ್‌ ಅವರ ಅಧ್ಯಕ್ಷತೆಯಲ್ಲಿ, ಮನಪಾ ನಗರ ಯೋಜನೆ ಅಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷ ರವೂಫ್‌ ನೇತೃತ್ವದಲ್ಲಿ ಮಂಗಳವಾರ ನಡೆದ ಸ್ಥಾಯೀ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಪಂಪ್‌ವೆಲ್‌ನಲ್ಲಿ ನೂತನ ಬಸ್‌ ತಂಗುದಾಣಕ್ಕೆ 1ನೇ ಹಂತದಲ್ಲಿ 7.50 ಎಕ್ರೆ ಹಾಗೂ 4 ಎಕ್ರೆ  ಸಹಿತ ಒಟ್ಟು 11.50 ಎಕ್ರೆ  ಭೂಮಿಯನ್ನು ಮೊದಲು ಭೂಸ್ವಾಧೀನ ಮಾಡಲಾಗಿತ್ತು. 

ಜಿಲ್ಲಾಡಳಿತ ಇದನ್ನು ಬಸ್‌ನಿಲ್ದಾಣಕ್ಕೆ ನಿಗದಿಪಡಿಸಿ ನಕ್ಷೆ ರೂಪಿಸಿತ್ತು. ಇದನ್ನು ಹೊರತು ಪಡಿಸಿ, ಹೆಚ್ಚುವರಿಯಾಗಿ ಮೊದಲ ಭೂಸ್ವಾಧೀನ ಜಾಗದ ಪಕ್ಕದಲ್ಲಿ ಮತ್ತೆ 11.59 ಎಕರೆ ಜಾಗವನ್ನು ಭೂಸ್ವಾಧೀನ ಮಾಡಲು ಪಾಲಿಕೆ 2008ರಲ್ಲಿ ನಿರ್ಧರಿಸಿತ್ತು. 

ಪರಿಹಾರವೂ ಇಲ್ಲ- ಭೂಮಿಯೂ ಇಲ್ಲ..!
ಮೊದಲ ಹಂತದ ಭೂಸ್ವಾಧೀನ ಪ್ರಕ್ರಿಯೆ ಪೂರ್ಣವಾದ ಬಳಿಕ ಇದರೊಳ ಗಡೆಯೇ ಬಸ್‌ ನಿಲ್ದಾಣ ಕಲ್ಪಿಸಲು ನಕ್ಷೆ ಸಿದ್ಧಪಡಿಸಲಾಗಿತ್ತು. 

ಹೀಗಾಗಿ ಹೆಚ್ಚುವರಿಯಾಗಿ ಪಡೆಯಲಾಗಿದ್ದ ಭೂಮಿಗೆ ಪರಿಹಾರ ಹಸ್ತಾಂತರ ಆಗಿರಲಿಲ್ಲ.
ಕಳೆದ 9 ವರ್ಷಗಳಿಂದ ಈ ಭೂಮಿ ಕಡತದಲ್ಲಿ “ಪಾಲಿಕೆಯದ್ದು’ ಎಂದೇ ಉಳಿದುಕೊಂಡಿತ್ತು. ಅತ್ತ  ಜಾಗ ಕಳೆದುಕೊಂಡವರಿಗೆ ಹಣವೂ ಇಲ್ಲ. ಇತ್ತ ಭೂಮಿಯೂ ಇಲ್ಲ ಎಂಬ ಪರಿಸ್ಥಿತಿ ನಿರ್ಮಾಣ ವಾಗಿತ್ತು. ತೀರಾ ಬಡ ಕುಟುಂಬಗಳು ಈ ಜಾಗದಲ್ಲಿ ನೆಲೆಸಿದ ಕಾರಣ ಮನೆ ಸಹಿತ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳನ್ನು ಈ ಭೂಮಿಯಲ್ಲಿ ನಡೆಸಲು ಅವಕಾಶವಿರಲಿಲ್ಲ. “ತಮ್ಮ ಜಾಗವನ್ನು ಪಡೆದು ಪರಿಹಾರ ಮೊತ್ತವನ್ನಾದರೂ ನೀಡಿ, ಅಥವಾ ಭೂಮಿ ಯನ್ನು  ವಾಪಸ್‌ ಕೊಡಿ’ ಎಂದು ಈ ಕುಟುಂಬಗಳು ಹಲವು ಬಾರಿ ಪಾಲಿಕೆಗೆ ಮನವಿ ಕೂಡ ಸಲ್ಲಿಸಿತ್ತು. 
2014ರಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಮತ್ತು ಆಗಿನ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 2ನೇ ಹಂತದ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣ ಕೈಬಿಡಲು ಮನಪಾಕ್ಕೆ ಸೂಚನೆ ನೀಡಲಾಗಿತ್ತು. 

ಅಂದು 19 ಕೋಟಿ; ಈಗ 30 ಕೋಟಿ ಪರಿಹಾರ..!
2ನೇ ಹಂತದ ಭೂಸ್ವಾಧೀನ ಮಾಡಿರುವ ಭೂಮಿಗೆ 2009ರಲ್ಲಿ 19 ಕೋಟಿ ರೂ. ಇದ್ದ ಪರಿಹಾರ ಮೊತ್ತ ಈಗ 30 ಕೋಟಿ ರೂ.ಗೆ ಏರಿಕೆಯಾಗಿದೆ. 

ಇಷ್ಟು ದೊಡ್ಡ ಮೊತ್ತವನ್ನು ಪರಿಹಾರ ನೀಡಲು ಪಾಲಿಕೆಗೆ  ಕಷ್ಟ ಸಾಧ್ಯ. ಜತೆಗೆ ಬಸ್‌ ನಿಲ್ದಾಣಕ್ಕೆಂದು (11.50 ಎಕರೆ) ಈಗಾಗಲೇ ಜಾಗ ಮೀಸಲಿರಿಸಿರುವುದರಿಂದ ಹೆಚ್ಚುವರಿಯಾಗಿ ಅನಗತ್ಯವಾಗಿ ಬೇರೆ ಜಮೀನಿನ ಆವಶ್ಯಕತೆ ಇಲ್ಲ  ಮತ್ತು  60 ಕುಟುಂಬಗಳು ಈ ಸಂಬಂಧ ಕಳೆದ 9 ವರ್ಷಗಳಿಂದ ಭೂಮಿ ಅಥವಾ ಪರಿಹಾರ ನೀಡುವಂತೆ ನಿರಂತರವಾಗಿ ಪಾಲಿಕೆಗೆ ಮನವಿ ಮಾಡುತ್ತಿರುವ ಕಾರಣದಿಂದ ಜಾಗ ಕೈಬಿಡಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಪಾಲಿಕೆ ಮೂಲಗಳು ತಿಳಿಸಿವೆ.

ಈಗ ನಗರ ಯೋಜನಾ ಸ್ಥಾಯೀ ಸಮಿತಿಯಲ್ಲಿ ಕೆಲವರ ವಿರೋಧದ ಮಧ್ಯೆಯೂ 2ನೇ ಹಂತದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ನಿರ್ಣಯ ಕೈಗೊಂಡಿದೆ. ಮುಂದಿನ ಪಾಲಿಕೆ ಸಭೆಯಲ್ಲಿ ಇದು ಸ್ಥಿರೀಕರಣಗೊಳ್ಳುವ ಸಾಧ್ಯತೆ ಇದೆ. ಈ ಮೂಲಕ ಕಳೆದ 9 ವರ್ಷಗಳಿಂದ ಭೂಮಿಯೂ ಇಲ್ಲ ಪರಿಹಾರವೂ ಇಲ್ಲ ಎಂದು ಕಾಯುತ್ತ ಕುಳಿತಿರುವ ಸುಮಾರು 60 ಕುಟುಂಬಗಳು ನಿಟ್ಟುಸಿರು ಬಿಡುವಂತಾಗಿದೆ ಎಂದು ಮೂಲಗಳು ತಿಳಿಸಿವೆ.

ಬಸ್‌ ನಿಲ್ದಾಣ ನಿರ್ಮಾಣ: ಪ್ರಸ್ತಾವನೆ ಪರಿಶೀಲನೆ
ಪಂಪ್‌ವೆಲ್‌ನಲ್ಲಿ ಸುಸಜ್ಜಿತ  ಬಸ್‌ ನಿಲ್ದಾಣ ಕಲ್ಪಿಸುವ ಹಲವು ವರ್ಷದ ಕನಸಿಗೆ ಈಗ ಮೂರ್ತರೂಪ ದೊರಕಿದ್ದು, ಪ್ರಾಥಮಿಕ ಸಿದ್ಧತೆಗಳು ಈಗಾಗಲೇ ನಡೆಯುತ್ತಿದೆ. ಖಾಸಗಿ ಹಾಗೂ ಸರಕಾರಿ ಸಹಭಾಗಿತ್ವ (ಪಿಪಿಪಿ)ದಲ್ಲಿ ಬಸ್‌ ನಿಲ್ದಾಣ ನಿರ್ಮಿಸುವ ಸಂಬಂಧ ಆಸಕ್ತ ಅಭಿವೃದ್ಧಿ ಸಂಸ್ಥೆಯವರಿಂದ ಮಾದರಿ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ. 6 ಜನರು ಈ ಸಂಬಂಧ ಮುಂದೆ ಬಂದು ಮಾದರಿ ಪ್ರಸ್ತಾವನೆ  ಸಲ್ಲಿಸಿದ್ದಾರೆ. ಈಗಾಗಲೇ ಬಂದ ಮಾದರಿ ಪ್ರಸ್ತಾವನೆಗಳನ್ನು ಪರಿಶೀಲಿಸಿ ಜು. 27ರಂದು ಇದು ಅಂತಿಮಗೊಳ್ಳಲಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಕುರಿತಂತೆ ಪ್ರಾಥಮಿಕ ವಿಚಾರ ವಿನಿಮಯ ಸಭೆ ನಡೆದಿದೆ. ಪಂಪ್‌ವೆಲ್‌ ಹೆದ್ದಾರಿ ಪಕ್ಕದ ಸುಮಾರು 11.50 ಎಕರೆ ಜಾಗದಲ್ಲಿ ಬಸ್‌ ನಿಲ್ದಾಣ ನಿರ್ಮಾಣವಾಗಲಿದೆ.

ಟಾಪ್ ನ್ಯೂಸ್

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mangaluru: ನೂತನ ಮೇಯರ್‌ ಮನದಾಳ:ಜನಸ್ನೇಹಿ ಆಡಳಿತ, ಸ್ಮಾರ್ಟ್‌ ಸಿಟಿಗೆ ವೇಗ

Mangaluru: ನೂತನ ಮೇಯರ್‌ ಮನದಾಳ:ಜನಸ್ನೇಹಿ ಆಡಳಿತ, ಸ್ಮಾರ್ಟ್‌ ಸಿಟಿಗೆ ವೇಗ

Kinnigoli – Patching work for potholes on Mulki State Highway

Kinnigoli – ಮೂಲ್ಕಿ ರಾಜ್ಯ ಹೆದ್ದಾರಿ ಹೊಂಡ ಗುಂಡಿಗಳಿಗೆ ತೇಪೆ ಕಾರ್ಯ

Ullal: ಹಿರಿಯರ ಬಡಾವಣೆಗೆ ಸೌಲಭ್ಯಗಳೇ ಇಲ್ಲ

Ullal: ಹಿರಿಯರ ಬಡಾವಣೆಗೆ ಸೌಲಭ್ಯಗಳೇ ಇಲ್ಲ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.