ನಗರ ವ್ಯಾಪ್ತಿಯ ರಸ್ತೆಗಳಿಗೆ ತೇಪೆ ಕಾರ್ಯ ಆರಂಭ
Team Udayavani, Oct 14, 2017, 10:26 AM IST
ಮಹಾನಗರ: ನಿರಂತರ ಮಳೆಯ ಕಾರಣದಿಂದ ತನ್ನ ವ್ಯಾಪ್ತಿಯ ಬಹುತೇಕ ರಸ್ತೆಗಳು ಕೆಟ್ಟುಹೋಗಿ ಸಂಚಾರ ಕಷ್ಟವಾದ ಹಿನ್ನೆಲೆಯಲ್ಲಿ ಹೊಂಡ ಮುಚ್ಚುವ ಕೆಲಸಕ್ಕೆ ಪಾಲಿಕೆ ಮುಂದಾಗಿದೆ.
ಹೊಂಡ ಮುಚ್ಚುವಂತೆ ಸಾರ್ವಜನಿಕರು ಪ್ರತಿಭಟನೆ ಸಹಿತ ವಿವಿಧ ರೀತಿಯಲ್ಲಿ ಪಾಲಿಕೆಯ ಗಮನ ಸೆಳೆದಿದ್ದರು. ಮಳೆ ನಿಂತ ಕೂಡಲೇ ದುರಸ್ತಿ ಆರಂಭಿಸುವುದಾಗಿ ಪಾಲಿಕೆ ಹೇಳಿತ್ತು.
ಬುಧವಾರ ಪಡೀಲ್ನ ಅಳಪೆ ಕ್ರಾಸ್ನಿಂದ ಗುಂಡಿ ಮುಚ್ಚುವ ಕೆಲಸ ಶುರು ಮಾಡಲಾಗಿದೆ. ಮಳೆ ಬರದಿದ್ದರೆ ದುರಸ್ತಿ ಕಾರ್ಯ ಮುಂದುವರಿಯಲಿದೆ. ಅಳಪೆ ಮೇಘನಗರ, ಪಡೀಲ್ನ ಬಜಾಲ್ ಕ್ರಾಸ್, ಪಂಪ್ವೆಲ್ ವ್ಯಾಪ್ತಿಯಲ್ಲಿ ಗುರುವಾರವೂ ಹೊಂಡ ಮುಚ್ಚುವ ಕೆಲಸ ನಡೆದಿದೆ.
ವಾಹನ ನಿಬಿಡ ಪ್ರದೇಶವಾದ ಹಂಪನಕಟ್ಟೆ ವ್ಯಾಪ್ತಿಯಲ್ಲೂ ಹೊಂಡಗಳಿಗೆ ತೇಪೆ ಕೆಲಸ ಆರಂಭಿಸಲಾಗಿದೆ. ಇದಾದ ಬಳಿಕ ಬಹಳಷ್ಟು ಸಮಸ್ಯೆಯಾಗುತ್ತಿರುವ ಪಂಪ್ವೆಲ್-ಕಂಕನಾಡಿ ದ್ವಿಪಥ ರಸ್ತೆ, ಕಂಕನಾಡಿ ಬೈಪಾಸ್ ರಸ್ತೆ ಹಾಗೂ ಬೆಂದೂರ್ವೆಲ್ ರಸ್ತೆಯ ಹೊಂಡ ಮುಚ್ಚುವ ಕೆಲಸ ನಡೆಯಲಿದೆ. ಅನಂತರ ಜ್ಯೋತಿ, ಬಂದರು ರಸ್ತೆ, ಸೆಂಟ್ರಲ್ ಮಾರ್ಕೆಟ್ ರಸ್ತೆ, ನೆಲ್ಲಿಕಾಯಿ ರಸ್ತೆ ಸಹಿತ ಇತರ ಕಡೆಗಳಲ್ಲಿ ಹೊಂಡ ಮುಚ್ಚುವ ಕೆಲಸ ನಡೆಯಲಿದೆ.
ಎರಡನೇ ಹಂತದಲ್ಲಿ ಪಾಲಿಕೆಯ 60 ವಾರ್ಡ್ಗಳ ಪೈಕಿ ಕಾರ್ಪೊರೇಟರ್ಗಳ ಸೂಚನೆ ಮೇರೆಗೆ ಆಯಾ ವ್ಯಾಪ್ತಿಯ ಹೊಂಡ ಮುಚ್ಚುವ ಕೆಲಸ ನಡೆಸಲು ಅಧಿಕಾರಿಗಳು ತೀರ್ಮಾನಿಸಿದ್ದಾರೆ. ಮೊದಲಿಗೆ ತೇಪೆ ಹಾಕಿ, ಆ ಬಳಿಕ ಡಾಮರು ಹಾಕುವ ಬಗ್ಗೆ ನಿರ್ಧರಿಸಲಾಗಿದೆ.
ಸಿಟಿ ಆಸ್ಪತ್ರೆ ರಸ್ತೆ; ಚರಂಡಿ ಕಾಮಗಾರಿ
ಕದ್ರಿ-ಮಲ್ಲಿಕಟ್ಟೆ ರಸ್ತೆಯ ಸಿಟಿ ಆಸ್ಪತ್ರೆಯಿಂದ ಎಡಭಾಗದಲ್ಲಿ ಹಾದು ಹೋಗುವ ರಸ್ತೆಯಲ್ಲಿ ಚರಂಡಿ ಕಾಮಗಾರಿ ಹಿನ್ನೆಲೆಯಲ್ಲಿ ಕದ್ರಿ ದೇವಸ್ಥಾನಕ್ಕೆ ಹೋಗುವ ಒಳ ರಸ್ತೆಯನ್ನು ಮುಚ್ಚಲಾಗಿದೆ. ಆಸ್ಪತ್ರೆಯ ಮುಂಭಾಗದ ಮುಖ್ಯ ಚರಂಡಿಯು ನಿತ್ಯ ಸಮಸ್ಯೆ ಸೃಷ್ಟಿಸುತ್ತಿದ್ದ ಹಿನ್ನೆಲೆಯಲ್ಲಿ ಇದನ್ನು ಪೂರ್ಣ ರೀತಿಯಲ್ಲಿ ಸರಿಪಡಿಸಲು ಪಾಲಿಕೆ ಮುಂದಾಗಿದ್ದು, ಕಾಮಗಾರಿಮುಗಿಯುವ ವರೆಗೆ ಇಲ್ಲಿ ಸಂಚಾರ ನಿರ್ಬಂಧಿಸಲಾಗಿದೆ.
ಪಂಪ್ವೆಲ್ನಿಂದ ಕಂಕನಾಡಿಗೆ ಹೋಗುವ ಗಣೇಶ್ ಮೆಡಿಕಲ್ ಮುಂಭಾಗದಲ್ಲಿ ಒಂದು ತಿಂಗಳಿನಿಂದ ಮ್ಯಾನ್ಹೋಲ್ ಕಾಮಗಾರಿ ನಡೆಯುತ್ತಿದ್ದು, ಇಲ್ಲೂ ಬೆಳಗ್ಗೆ ಹಾಗೂ ಸಂಜೆ ಈ ರಸ್ತೆಯಲ್ಲಿ ಟ್ರಾಫಿಕ್ ಸಮಸ್ಯೆಯೂ ಕಾಡುತ್ತಿದೆ.
ನಿರಂತರ ಕಾರ್ಯಾಚರಣೆ
ಮಂಗಳೂರು ವ್ಯಾಪ್ತಿಯಲ್ಲಿನ ಹೊಂಡ ತುಂಬಿದ ರಸ್ತೆಗೆ ತೇಪೆ ಹಚ್ಚುವ ಕೆಲಸವನ್ನು ಬುಧವಾರದಿಂದ ಆರಂಭಿಸಲಾಗಿದೆ. ಮಳೆ ಬಾರದಿದ್ದರೆ, ನಗರದ ಎಲ್ಲ ರಸ್ತೆಯ ಹೊಂಡಗಳಿಗೆ ತೇಪೆ ಕಾರ್ಯ ಮುಂದುವರಿಯುವುದು. ವಾಹನ ಸವಾರರಿಗೆ ಯಾವುದೇ ಸಮಸ್ಯೆ ಆಗದಂತೆ ಕಾಮಗಾರಿ ನಡೆಸಲು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ.
ಕವಿತಾ ಸನಿಲ್, ಮೇಯರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕೌನ್ ಬನೇಗಾ ಕರೋಡ್ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ
Mangaluru: ಸೈಬರ್ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ
Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ
Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?
Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ
FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್ಐಆರ್ ಹಾಕಿದ ಗುರುಗ್ರಾಮ್ ಪೊಲೀಸರು
Mangaluru: ಕೌನ್ ಬನೇಗಾ ಕರೋಡ್ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.