ಸಿಎಂ ಕಾರ್ಯಾಲಯ ತಲುಪಿದ `ಕೊರತೆಗಳ ರೋಗ ಪೀಡಿತ ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರ’ ವರದಿ


Team Udayavani, Dec 24, 2023, 11:56 AM IST

ಸಿಎಂ ಕಾರ್ಯಾಲಯ ತಲುಪಿದ `ಕೊರತೆಗಳ ರೋಗ ಪೀಡಿತ ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರ’ ವರದಿ

ಮೂಡುಬಿದಿರೆ: `ಕೊರತೆಗಳ ರೋಗ ಪೀಡಿತ ಮೂಡುಬಿದಿರೆ  ಸಮುದಾಯ ಆರೋಗ್ಯ ಕೇಂದ್ರ’ ಶೀರ್ಷಿಕೆಯಡಿ ಉದಯವಾಣಿ ಸುದಿನದಲ್ಲಿ ಡಿ.22ರಂದು ಪ್ರಕಟವಾದ ಸಚಿತ್ರವರದಿಯ  ಪ್ರತಿಯನ್ನಿರಿಸಿಕೊಂಡು ಓದುಗರೋರ್ವರು (ಪುತ್ತೂರಿನ ಡಾ. ಎಸ್.ಎನ್. ಅಮೃತ ಮಲ್ಲ) ಅವರು ರಾಜ್ಯ ಮುಖ್ಯಮಂತ್ರಿಗಳ ಕಾರ್ಯಾಲಯಕ್ಕೆ ಮಿಂಚಂಚೆ ಮೂಲಕ ಶುಕ್ರವಾರವೇ ರವಾನಿಸಿದ್ದಾರೆ. ಕೂಡಲೇ ಮುಖ್ಯಮಂತ್ರಿಗಳ ಕಾರ್ಯದರ್ಶಿಯವರು ` ಮುಂದಿನ ಅಗತ್ಯ ಕ್ರಮಕ್ಕಾಗಿ ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೆ’ ಈ ವರದಿಯನ್ನು  ಫಾರ್ವರ್ಡ್ ಮಾಡಿರುವುದಾಗಿ ಇದೀಗ ತಿಳಿದುಬಂದಿದೆ.

ಈ ವರದಿಯ ಪ್ರತಿ ಮಿಂಚಂಚೆ ಮೂಲಕ ದ.ಕ. ಜಿಲ್ಲಾಧಿಕಾರಿ, ದ.ಕ. ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೂ ರವಾನೆಯಾಗಿರುವುದಾಗಿ ಅಧಿಕೃತ ಮಾಹಿತಿ ಲಭಿಸಿದೆ. ಆಡಳಿತ ವೈದ್ಯಾಧಿಕಾರಿ, ಹಿರಿಯ ವೈದ್ಯಾಧಿಕಾರಿ ಸಹಿತ ಇರುವ 53 ಹುದ್ದೆಗಳಲ್ಲಿ 31 ಹುದ್ದೆಗಳು ಖಾಲಿ ಇರುವುದೂ ಸೇರಿದಂತೆ ಆಸ್ಪತ್ರೆಯ ದುಸ್ಥಿತಿಯ ಬಗ್ಗೆ  ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮೂಡುಬಿದಿರೆಗೆ ಬಂದರೂ ಸರಕಾರಿ ಆಸ್ಪತ್ರೆಗೆ ಭೇಟಿ ನೀಡದ ಆರೋಗ್ಯ ಸಚಿವರು: ವ್ಯಾಪಕ ಟೀಕೆ

ಜಿಲ್ಲಾ ಉಸ್ತುವಾರಿ ಸಚಿವ, ಆರೋಗ್ಯ ಸಚಿವರಾಗಿ ಇದೇ ಮೊದಲ ಬಾರಿಗೆ ಮೂಡುಬಿದಿರೆಗೆ ಆಗಮಿಸಿದ್ದ ಸಚಿವ ದಿನೇಶ್ ಗುಂಡೂರಾವ್ ಅವರಿಗೆ  ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿರುವ ಸಿಬಂದಿ ಕೊರತೆ, ಮೂಲಸೌಲಭ್ಯ, ಸೌಕರ್ಯಗಳ ಕೊರತೆಗಳ ಕುರಿತಾಗಿ ಉದಯವಾಣಿ ಸುದಿನದಲ್ಲಿ  ಶುಕ್ರವಾರ ಪ್ರಕಟವಾಗಿದ್ದ  ವಿಶೇಷ ವರದಿಯ ಪ್ರತಿಗಳು ಶಾಸಕರೂ ಸೇರಿದಂತೆ ಹಲವರಿಂದ  ಸಲ್ಲಿಕೆಯಾಗಿದ್ದವು. ತಾಲೂಕು ಆಡಳಿತ ಸೌಧದಲ್ಲಿ  ನಡೆದ  ಹಕ್ಕುಪತ್ರ ವಿತರಣೆಯ ಕಾರ್ಯಕ್ರಮದ ಬಳಿಕ ಈ ವರದಿಯ ಬಗ್ಗೆ  ಸಚಿವರ ಪ್ರತಿಕ್ರಿಯೆ ಏನು ಎಂದು ಪತ್ರಕರ್ತರು ವಿಚಾರಿಸಿದಾಗ, `ಸಮುದಾಯ ಆರೋಗ್ಯಕೇಂದ್ರಕ್ಕೆ ಬರುತ್ತೇನಲ್ಲ , ಅಲ್ಲಿ ಹೇಳುತ್ತೇನೆ’ ಎಂದು ಉತ್ತರಿಸಿದರು.

ಪತ್ರಕರ್ತರು ನೇರ ಆಸ್ಪತ್ರೆಗೆ ಹೋಗಿ ಅಲ್ಲಿ ಶಾಸಕರು, ಪೊಲೀಸರೊಂದಿಗೆ ಸಚಿವರ ಬರೋಣವನ್ನು ನಿರೀಕ್ಷಿಸುತ್ತ ಕಾಯುತ್ತಿದ್ದಾಗ, ಸಚಿವ ದಿನೇಶ್ ಗುಂಡೂರಾವ್ ಖಾಸಗಿ ಶಿಕ್ಷಣಾಲಯವೊಂದರ ಕಾರ್ಯಕ್ರಮದಲ್ಲಿ  ಪಾಲ್ಗೊಳ್ಳಲು ತೆರಳಿದ್ದು  ಶಾಸಕ ಉಮಾನಾಥ ಕೋಟ್ಯಾನ್, ಪತ್ರಕರ್ತರು,  ಪೊಲೀಸರು, ಸಮುದಾಯ ಆರೋಗ್ಯ ಕೇಂದ್ರದ ಸಿಬಂದಿಗಳು, ಸಂದರ್ಶಕ ಸಮಿತಿಯವರು ಯಾರಿಗೂ ಗೊತ್ತೇ ಆಗಿರಲಿಲ್ಲ. ಸ.ಆ.ಕೇಂದ್ರದಲ್ಲಿ ಸಚಿವರಿಗೆ ಸ್ವಾಗತ ಕೋರುವ ಬ್ಯಾನರ್ ಹಾಕಿಕೊಂಡು, ಕುಂದು ಕೊರತೆಗಳ ಪಟ್ಟಿಯನ್ನು ಒಳಗೊಂಡ ಮನವಿ ಪತ್ರವನ್ನು ಹಿಡಿದುಕೊಂಡು ಸಿಬಂದಿಗಳು ಕಾದದ್ದೇ ಬಂದಿತು.  ಮತ್ತೆ ವಿಷಯ ತಿಳಿದು  ಪತ್ರಕರ್ತರು ನೇರ ಸಚಿವರು ಹೋದತ್ತ ಧಾವಿಸಿ, ವಿದ್ಯಾಸಂಸ್ಥೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು  ಮತ್ತೆ ಒಳದಾರಿಯಾಗಿ ಶೀಘ್ರವಾಗಿ ಸಮುದಾಯ ಆರೋಗ್ಯ ಕೇಂದ್ರ ತಲುಪಿದರು. ಅಲ್ಲಿ ಪೊಲೀಸರು, ಕೇಂದ್ರದ ಸಿಬಂದಿಗಳು ಕಾದು ಕುಳಿತಿದ್ದಂತೆಯೇ ಸೈರನ್ ಮೊಳಗಿಸಿಕೊಂಡು ಸಚಿವರ ಬೆಂಗಾವಲು ವಾಹನ ಸಾಗಿದ್ದನ್ನು  ಗಮನಿಸಲಾಯಿತು. ಅದಾಗಲೇ ಸಚಿವರು ಮಂಗಳೂರಿನತ್ತ ಧಾವಿಸಿಯಾಗಿತ್ತು.

ಅಂತೂ ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ `ಆರೋಗ್ಯ’ವಿಚಾರಿಸಲು ಬರುವೆನೆಂದಿದ್ದ  ಆರೋಗ್ಯ ಸಚಿವರು ಹಾಗೆ ಮಾಡದೆ ಬೇರೆ ಕಾರ್ಯಕ್ರಮಕ್ಕೆ ತೆರಳಿದ್ದು, ಮರಳಿ ಬರುವಾಗಲಾದರೂ ಆಸ್ಪತ್ರೆಗೆ ಬಂದು ಮನವಿ ಸ್ವೀಕರಿಸಿ ವಾಪಾಸು ಹೋಗಬಹುದಾಗಿತ್ತು, ಹಾಗೆ ಮಾಡದೆ, ಯಾರಿಗೂ ಮಾಹಿತಿ ಕೊಡದೆ ವಾಪಾಸು ಹೋಗಿರುವುದು  ಊರಿಗೆ ಬಂದರೂ ಕೇರಿಗೆ ಬರಲಿಲ್ಲ ಎಂಬಂತಾಗಿದೆ ಎಂದು ವ್ಯಾಪಕ ಟೀಕೆಗೊಳಗಾಗಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.