![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 16, 2021, 10:55 AM IST
ಬಂಟ್ವಾಳ: ಮನೆಮಂದಿಯೆಲ್ಲಾ ನಾಟಕ ಪ್ರದರ್ಶನ ನೋಡಲು ಹೋಗಿದ್ದ ಸಮಯದಲ್ಲಿ ಬಾಗಿಲು ಮುರಿದು ನಗದು ಕಳ್ಳತನ ಮಾಡಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆಯಲ್ಲಿ ಗುರುವಾರ ರಾತ್ರಿ ನಡೆದಿದೆ.
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಮಜಿ ಎಂಬಲ್ಲಿನ ನಾಲ್ಕು ಮನೆಗಳಿಗೆ ಕಳ್ಳರು ನುಗ್ಗಿದ್ದು, ಒಂದು ಮನೆಯಕಪಾಟಿನಲ್ಲಿರಿಸಿದ್ದ 8 ಸಾವಿರ ನಗದು ದೋಚಿದ್ದಾರೆ. ಮಜಿ ನಿವಾಸಿ ಮನೋಜ್ ಕೊಟ್ಟಾರಿ ಎಂಬವರ ಮನೆಯ ಹಿಂಬಾಗಿಲ ಚಿಲಕ ಮುರಿದು ಮನೆಯೊಳಗೆ ನುಗ್ಗಿದ ಕಳ್ಳರು ಕಪಾಟಿನಲ್ಲಿದ್ದ ಎಂಟು ಸಾವಿರ ರೂ ನಗದನ್ನು ಕಳ್ಳರು ಕಳವು ಮಾಡಿದ್ದಾರೆ.
ಇದನ್ನೂ ಓದಿ:ರಾಜ್ಯಾದ್ಯಂತ ಸೆ.144; ಶಾಲೆ-ಕಾಲೇಜು, ಚಿತ್ರಮಂದಿರ, ಬಾರ್- ಪಬ್ ಬಂದ್?
ಉಳಿದ ಮೂರು ಮನೆಗಳಿಗೆ ಮನೆಗೆ ನುಗ್ಗಿದ ಕಳ್ಳರು ಸಂಪೂರ್ಣ ಮನೆಯನ್ನು ಜಾಲಾಡಿದ್ದು ಯಾವುದೇ ವಸ್ತುಗಳು ಕೈಗೆ ಸಿಗದೆ ಬರಿ ಕೈಯಲ್ಲಿ ವಾಪಾಸು ಆಗಿದ್ದಾರೆ.
ತುಂಬೆ ಸಮೀಪದ ಮಜಿ ಎಂಬಲ್ಲಿ “ಶಿವಧೂತೆ ಗುಳಿಗೆ” ಎಂಬ ನಾಟಕ ಪ್ರದರ್ಶನ ನಡೆಯುತ್ತಿರುವ ಕಾರಣ ಈ ಪರಿಸರದ ಬಹುತೇಕ ಮನೆಯವರು ನಾಟಕ ವೀಕ್ಷಿಸಲು ಮನೆಗೆ ಬೀಗ ಹಾಕಿ ತೆರಳಿದ್ದರು. ಆದರೆ ನಾಟಕ ವೀಕ್ಷಿಸಿ ವಾಪಾಸು ಮನೆಗೆ ತೆರಳಿ ನೋಡಿದಾಗ ಮನೆಯ ಬೀಗ ಮುರಿದು ಮನೆಗೆ ಅಕ್ರಮ ಪ್ರವೇಶ ಮಾಡಿರುವುದು ಗಮನಕ್ಕೆ ಬಂದಿದೆ.
ಇದನ್ನೂ ಓದಿ:ಉಡುಪಿ: ದೇವಸ್ಥಾನದ ಹುಂಡಿ ಕಳವಿಗೆ ವಿಫಲ ಯತ್ನ, ಕಾರು ಬಿಟ್ಟು ಓಡಿ ಹೋದ ಕಳ್ಳರು
ಸ್ಥಳಕ್ಕೆ ಬಂಟ್ವಾಳಎಸ್.ಐ ಪ್ರಸನ್ನ, ಅಪರಾಧ ವಿಭಾಗದ ಎಸ್.ಐ.ಸಂಜೀವ, ಎಚ್.ಸಿ.ಸುರೇಶ್, ಹಾಗೂ ಬೆರಳಚ್ಚು ತಜ್ಞರು, ಶ್ವಾನ ದಳ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.