![Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !](https://www.udayavani.com/wp-content/uploads/2024/07/azaz-415x241.jpg)
Theft Case ಕೆಎಸ್ಆರ್ಟಿಸಿ ಬಸ್ನಲ್ಲಿ 67.75 ಲ.ರೂ. ಮೌಲ್ಯದ ಚಿನ್ನಾಭರಣ ಕಳವು
Team Udayavani, Jul 2, 2024, 1:32 AM IST
![Theft Case ಕೆಎಸ್ಆರ್ಟಿಸಿ ಬಸ್ನಲ್ಲಿ 67.75 ಲ.ರೂ. ಮೌಲ್ಯದ ಚಿನ್ನಾಭರಣ ಕಳವು](https://www.udayavani.com/wp-content/uploads/2024/07/gold-s-620x413.jpg)
ಮಂಗಳೂರು: ಕೆಎಸ್ಆರ್ಟಿಸಿ ಬಸ್ನಲ್ಲಿ ಸುಮಾರು 67.75 ಲ.ರೂ. ಮೌಲ್ಯದ ಚಿನ್ನಾಭರಣವಿದ್ದ ಹ್ಯಾಂಡ್ಬ್ಯಾಗ್ ಕಳವಾಗಿದೆ.
ಮಹಿಳೆಯೋರ್ವರು ನಗರದ ಬ್ಯಾಂಕ್ನ ಲಾಕರ್ನಲ್ಲಿದ್ದ 110 ಗ್ರಾಂ ತೂಕದ ವಜ್ರದ ಹರಳುಗಳಿರುವ ವಿವಿಧ ನಮೂನೆಯ ಚಿನ್ನದ ಒಡವೆಗಳನ್ನು ಕೌಟುಂಬಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮನೆಗೆ ತಂದು ಹ್ಯಾಂಡ್ಬ್ಯಾಗ್ನಲ್ಲಿ ಹಾಕಿ ಜೂ.19ರಂದು ಬೆಳಗ್ಗೆ 7 ಗಂಟೆಗೆ ಮಂಗಳೂರಿನಿಂದ ಕೆಎಸ್ಆರ್ಟಿಸಿ ಐರಾವತ ಬಸ್ನಲ್ಲಿ ಇತರ ಲಗೇಜ್ ಜತೆ ತೆಗೆದುಕೊಂಡು ಬೆಂಗಳೂರಿಗೆ ಪ್ರಯಾಣಿಸಿದ್ದರು.
ಹಾಸನ ತಲುಪಿದಾಗ ಅವರ ಹ್ಯಾಂಡ್ಬ್ಯಾಗ್ ಪರಿಶೀಲಿಸಿದಾಗ ಚಿನ್ನಾಭರಣಗಳು ಕಳವಾಗಿದ್ದವು. ಮಂಗಳೂರು – ಹಾಸನ ನಡುವೆ ಅವರ ಪಕ್ಕದಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ನಡು ವಯಸ್ಸಿನ ಮಹಿಳೆ ಕಳವು ಮಾಡಿರಬಹುದೆಂದು ಉರ್ವ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
![Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !](https://www.udayavani.com/wp-content/uploads/2024/07/azaz-415x241.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.