![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Jan 14, 2021, 12:13 PM IST
ಬಂಟ್ವಾಳ: ಬಾರ್ ವೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ ನಗದು ಹಾಗೂ ಮದ್ಯದ ಬಾಟಲಿಗಳನ್ನು ಕಳವು ಮಾಡಿದ ಘಟನೆ ಮೆಲ್ಕಾರ್ ಸಮೀಪದ ಕಂದೂರು ಎಂಬಲ್ಲಿ ನಡೆದಿದೆ.
ಕಂದೂರುನಲ್ಲಿರುವ ಸುರಭಿ ಬಾರ್ ಗೆ ರಾತ್ರಿ ವೇಳೆ ಎದುರು ಭಾಗದ ಶಟರ್ ನ ಬೀಗ ಮುರಿದು ಒಳನುಗ್ಗಿದ ಕಳ್ಳರು ಕ್ಯಾಶ್ ಕೌಂಟರ್ ನಲ್ಲಿದ್ದ ಸುಮಾರು ಮೂರು ಲಕ್ಷ ರೂ. ನಗದು ದೋಚಿದ್ದಾರೆ.
ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್, ನಗರ ಠಾಣಾ ಎಸ್.ಐ. ಅವಿನಾಶ್, ಅಪರಾಧ ವಿಭಾಗದ ಎಸ್.ಐ ಕಲೈಮಾರ್ , ಎಚ್.ಸಿ.ಸುರೇಶ್ ಪಡಾರ್, ಸಿಬ್ಬಂದಿಗಳಾದ ಶ್ರೀಕಾಂತ್, ಉಸ್ಮಾನ್ , ಪ್ರಶಾಂತ್ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ:ಸಸಿಹಿತ್ಲು: ಇನ್ನೂ ಪತ್ತೆಯಾಗದ ಪ್ರವಾಸಿಗ, ಮುಳುಗು ತಜ್ಞರಿಂದಲೂ ಶೋಧ ಕಾರ್ಯ ವಿಫಲ
ಜೊತೆಗೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.