ಕುಮಾರಧಾರೆ ತಟದಲ್ಲಿ ಸಾಲುಮರದ ತಿಮ್ಮಕ್ಕ ಟ್ರೀ ಪಾರ್ಕ್‌


Team Udayavani, Mar 27, 2018, 9:00 PM IST

Timmakka-Park-27-3.jpg

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇಗುಲ ಸಮೀಪ ಕುಮಾರಧಾರೆ ನದಿ ದಂಡೆ ಮೇಲಿನ ಮೀಸಲು ಅರಣ್ಯದಲ್ಲಿ ಸುಸಜ್ಜಿತ ವೃಕ್ಷೋದ್ಯಾನ ದೇಗುಲದ ಸಹಕಾರದಿಂದ ನಿರ್ಮಿಸಲು ಅರಣ್ಯ ಇಲಾಖೆ ನಿರ್ಧರಿಸಿದೆ. ಇದಕ್ಕೆ ಸಾಲು ಮರದ ತಿಮ್ಮಕ್ಕನ ಹೆಸರಿಡಲಾಗುತ್ತಿದೆ. ಆರಂಭಿಕ ಹಂತದ ಕೆಲಸಗಳಿಗೆ ಚಾಲನೆಯೂ ಸಿಕ್ಕಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಿಂದ 2 ಕಿ.ಮೀ. ದೂರದಲ್ಲಿ ರಾಜ್ಯ ಹೆದ್ದಾರಿ ಪಕ್ಕದಲ್ಲೇ ಇರುವ ಮೀಸಲು ಅರಣ್ಯ ಪ್ರದೇಶದ 25 ಎಕರೆ ಭೂಮಿಯಲ್ಲಿ ವೃಕ್ಷೋದ್ಯಾನವನ ನಿರ್ಮಾಣವಾಗುತ್ತಿದೆ. ಇಲ್ಲಿ ಪಶ್ಚಿಮ ಘಟ್ಟದ ಅಮೂಲ್ಯ ಸಸ್ಯಗಳನ್ನು ಬೆಳೆದು ಅಭಿವೃದ್ಧಿಗೊಳಿಸಲಾಗುತ್ತಿದೆ.

ಸರಕಾರ ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕ ಹೆಸರಲ್ಲಿ ಹಸಿರು ಬೆಳೆಯುವ,ಜನರಲ್ಲಿ ಸಸ್ಯ ಸಂಪತ್ತು ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ರಾಜ್ಯದ ವಿವಿಧೆಡೆ ಟ್ರೀಪಾರ್ಕ್‌ ನಿರ್ಮಿಸುತ್ತಿದ್ದು, ಅದಕ್ಕಿಂತ ತುಸು ವಿಶಿಷ್ಟವಾಗಿ, ಸುಸಜ್ಜಿತ ರೀತಿಯಲ್ಲಿ ಉದ್ಯಾನವನ ನಿರ್ಮಾಣ ಮಾಡಲಾಗುತ್ತಿದೆ. ಉದ್ಯಾನವನ ಪ್ರವೇಶಕ್ಕೆ ಆಕರ್ಷಕ ಮಹಾದ್ವಾರ ನಿರ್ಮಿಸಲಾಗುತ್ತಿದೆ. ಮಕ್ಕಳಿಗೆ ಆಟಿಕೆಗಳು, ಮರದಿಂದ ಮರಕ್ಕೆ ಜೋಡಿಸಿ ಸಂಚರಿಸಲು ಅನುಕೂಲವಾಗುವಂಥ ಪಥ, ಪಕ್ಷಿ ವೀಕ್ಷಣೆ ಪಥ, ನೈಸರ್ಗಿಕ ಪಥ, ನಕ್ಷತ್ರವನ, ಆಯುರ್ವೇದ ಸಸ್ಯವನ ಹೊಂದಲಾಗುತ್ತಿದೆ.

ಪುರುಷ, ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಪ್ರವಾಸಿಗರಿಗೆ ಕುಳಿತುಕೊಳ್ಳಲು ಬೆಂಚ್‌ಗಳು, ವಾಯು ವಿಹಾರದ ರಸ್ತೆ ನಿರ್ಮಾಣ ಹಾಗೂ ಅಲ್ಲಲ್ಲಿ ಕುಳಿತು ವಿಶ್ರಾಂತಿ ಪಡೆಯಲು ಅತ್ಯಂತ ಆಕರ್ಷಣೀಯ ಗೋಪುರ ಮಾದರಿಯ ಸಭಾಂಗಣ, ವೀಕ್ಷಣಾ ಗೋಪುರ, ಥಿಯೇಟರ್‌, ಮುಕ್ತ ಸಭಾಂಗಣ ಉದ್ಯಾನವನದ ಒಳಗಿರುತ್ತವೆ.

ಮಲೆನಾಡಿನಲ್ಲಿ ಬೆಳೆಯುವ ಅಪೂರ್ವ ಸಸ್ಯರಾಶಿಗಳನ್ನು ಹಾಗೂ 17 ಜಾತಿಯ ಬಿದಿರನ್ನು ಇಲ್ಲಿ ಬೆಳೆಸಲಾಗುತ್ತಿದೆ. ಬಣ್ಣ ಬಣ್ಣದ ಹೂವು ಹಾಗೂ ಪಶ್ಚಿಮ ಘಟ್ಟದ ಅಮೂಲ್ಯ ಮರಗಳನ್ನು ಬೆಳೆದು ಸುಂದರ ಉದ್ಯಾನವನ ಸ್ಥಾಪಿಸಲಾಗುತ್ತಿದೆ. ಮುಂದಿನ ಐದು ವರ್ಷಗಳ ಒಳಗೆ ಕ್ಷೇತ್ರದಲ್ಲಿ ಒಂದು ಸುಂದರ ವೃಕ್ಷೋದ್ಯಾನ ಸಿದ್ಧವಾಗುವ ನಿರೀಕ್ಷೆ ಇರಿಸಲಾಗಿದೆ.

ಎರಡು ವರ್ಷಗಳ ಹಿಂದೆಯೇ ಮಂಜೂರಾತಿ 
ಸರಕಾರ ಅರಣ್ಯ ಇಲಾಖೆ ಮೂಲಕ ಸಾಲು ಮರದ ತಿಮ್ಮಕ್ಕ ಹೆಸರಿನಲ್ಲಿ ಸಸ್ಯೋದ್ಯಾನ ನಿರ್ಮಿಸಲು ಎಲ್ಲ ತಾಲೂಕುಗಳಲ್ಲಿ ಯೋಜನೆಗಳನ್ನು ರೂಪಿಸಿದೆ. ಸುಳ್ಯ ತಾಲೂಕಿನ ಸೂಕ್ತ ಸ್ಥಳದಲ್ಲಿ ಉದ್ಯಾನವನ ನಿರ್ಮಿಸಲು ಅರಣ್ಯ ಇಲಾಖೆ ಎರಡು ವರ್ಷಗಳ ಹಿಂದೆಯೇ ಮಂಜೂರಾತಿ ನೀಡಿತ್ತು.

5 ಕೋಟಿ ವೆಚ್ಚ
ಮುಂದಿನ ಐದು ವರ್ಷಗಳಲ್ಲಿ ರೂ 5 ಕೋಟಿ ವೆಚ್ಚದಲ್ಲಿ ವೃಕ್ಷೋದ್ಯಾನ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ. ಮೀಸಲು ಅರಣ್ಯದಲ್ಲಿ ಸ್ಥಳ ಗಡಿ ಗುರುತು ನಡೆಸಿದೆ. ಕುಮಾರಧಾರೆ ಸ್ನಾನಘಟ್ಟದ ಮೂರು ಪಾರ್ಶ್ವಕ್ಕೆ ಹೊಂದಿಕೊಂಡು ಉದ್ಯಾನವನ ನಿರ್ಮಿಸಲಾಗುತ್ತಿದೆ. ಆರಂಭಿಕವಾಗಿ 1 ಕೋಟಿ ರೂ. ವೆಚ್ಚದಲ್ಲಿ ಇಲ್ಲಿ ವ್ಯವಸ್ಥೆಗಳನ್ನು ಅಳವಡಿಸಲಾಗುತ್ತದೆ. ಉದ್ಯಾನವನ ಪ್ರವೇಶಿಸುವಲ್ಲಿ ಕೌಂಟರ್‌ ತೆರೆಯಲಾಗುತ್ತದೆ. ನಿರ್ವಹಣೆಗಾಗಿ ನಿರ್ವಹಣ ಕಾವಲು ಸಮಿತಿ ರಚಿಸಲಾಗುತ್ತಿದೆ.

ಕುಮಾರಧಾರೆ ಸ್ನಾನ ಘಟ್ಟದಲ್ಲಿ ಪ್ರವಾಸಿಗರಿಗಾಗಿ ಬೋಟಿಂಗ್‌ ವ್ಯವಸ್ಥೆ ಯೂ ಇರುತ್ತದೆ, ವಿಶಾಲವಾದ ನೀರಿನ ಅಶ್ರಯದ ಜಾಗದಲ್ಲಿ ಬೋಟ್‌ ಮೂಲಕ ಯಾತ್ರಾರ್ಥಿಗಳು ಸಂಚರಿಸಿ ಖುಷಿ ಪಡಿಸಲು ವ್ಯವಸ್ಥೆ ಇದಾಗಿರುತ್ತದೆ. ಉದ್ಯಾನದ ಒಳಗೆ ಮಳಿಗೆಯೊಂದನ್ನು ಸ್ಥಾಪಿಸಿ, ಕ್ಷೇತ್ರದ ಮಹಿಮೆ ಹಾಗೂ ಇತಿಹಾಸ ತಿಳಿಸುವ ವ್ಯವಸ್ಥೆಯನ್ನೂ ಮಾಡಲಾಗುತ್ತದೆ.

ಪರಿಸರ ಪ್ರೇಮಿ ವಿಧಾನ
ಪರಿಸರ ಸ್ನೇಹಿಯಾಗಿ ಟ್ರೀ ಪಾರ್ಕ್‌ ಜಾರಿಗೊಳಿಸಲಾಗುತ್ತಿದೆ. ಮೀಸಲು ಅರಣ್ಯದ ಯಾವುದೇ ಗಿಡ-ಮರಗಳಿಗೆ ಹಾನಿ ಮಾಡದೆ ಸಸ್ಯ ರಾಶಿಗಳ ಮಧ್ಯೆ ಇತರೆ ವ್ಯವಸ್ಥೆಗಳಿರುತ್ತವೆ. ಸ್ವಚ್ಛತೆಗೆ ಆದ್ಯತೆ ನೀಡಲಾಗುತ್ತದೆ. ಯಾವುದೇ ಇತರೆ ಚಟುವಟಿಕೆಗೆ ಅವಕಾಶವಿಲ್ಲ. ನಿರ್ವಹಣೆಗೆ ಸಿಬಂದಿ ನೇಮಿಸಿ ಕಟ್ಟೆಚ್ಚರ ವಹಿಸಲಾಗುತ್ತಿದೆ. ಯಾತ್ರಾರ್ಥಿಗಳು ಅಧಿಕ ಸಂಖ್ಯೆಯಲ್ಲಿ ಬರುವ ಕ್ಷೇತ್ರದಲ್ಲಿ ಬಿಡುವಿನ ವೇಳೆಯನ್ನು ಕಳೆಯಲು ಯಾವುದೇ ಪ್ರೇಕ್ಷಣೀಯ ಸ್ಥಳ ಅಥವಾ ವಿಶ್ರಾಂತಿಧಾಮಗಳಿಲ್ಲ. ಕೊಠಡಿಗಳಲ್ಲಿ ಕಾಲ ಕಳೆಯುವ ಸ್ಥಿತಿ ತಪ್ಪಿಸಲು ಪ್ರವಾಸಿ ಕೇಂದ್ರ ತೆರೆಯುವ ಕನಸಿತ್ತು. ಅದೀಗ ನನಸಾಗುವ ಕಾಲ ಬಂದಿದೆ. ನಾಗರಿಕರೂ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.

ಆಡಳಿತ ಮಂಡಳಿ ಆಸಕ್ತಿ
ಮಂಜೂರಾತಿ ದೊರಕಿದ್ದರೂ ವೃಕ್ಷೋದ್ಯಾನ ನಿರ್ಮಾಣ ವಿಚಾರ ಅನುಷ್ಠಾನಕ್ಕೆ ಯಾರು ಆಸಕ್ತಿ ವಹಿಸದಿರುವುದನ್ನು ಮನಗಂಡ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಈಗಿನ ಆಡಳಿತ ಮಂಡಳಿ ಕ್ಷೇತ್ರದ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಲು ಉತ್ಸುಕತೆ ತೋರಿತ್ತು. ಅಧ್ಯಕ್ಷರು ಪ್ರಯತ್ನಿಸಿದ್ದರ ಫ‌ಲವಾಗಿ ಅರಣ್ಯ ಇಲಾಖೆ ಇಲ್ಲಿ ಉದ್ಯಾನವನ ನಿರ್ಮಾಣಕ್ಕೆ ಚಾಲನೆ ನೀಡಿದೆ.

ಶೀಘ್ರ ಉದ್ಘಾಟನೆ
ಅರಣ್ಯ ಇಲಾಖೆ ನೇತೃತ್ವದಲ್ಲಿ ಇಲ್ಲಿ ಟ್ರೀ ಪಾರ್ಕ್‌ ತೆರೆಯಲು ಕೆಲಸ ಆರಂಭಿಸಿದೆ. ದೇಗುಲದ ಸಂಪೂರ್ಣ ಸಹಕಾರ ದೊರಕಿದೆ. ಇದರ ಕಾರ್ಯಗಳು ವೇಗ ಪಡೆದು ಶೀಘ್ರ ಉದ್ಘಾಟನೆ ನಡೆಯಲಿದೆ. ಮುಂದಿನ ಐದು ವರ್ಷಗಳಲ್ಲಿ ಎಲ್ಲವೂ ಪೂರ್ಣವಾಗುವುದು.
– ತ್ಯಾಗರಾಜ್‌ ಆರ್‌ಎಫ್ಒ, ಸುಬ್ರಹ್ಮಣ್ಯ ವಲಯ

ಯಶಸ್ವಿಯಾಗುತ್ತದೆೆ
ಕ್ಷೇತ್ರಕ್ಕೆ ಆಗಮಿಸುವ ಭಕ್ತರು, ಯಾತ್ರಾರ್ಥಿಗಳು ಸೇವೆ ಬಳಿಕ ಬಿಡುವಿನ ಅವಧಿಯಲ್ಲಿ ವಿಶ್ರಾಂತಿ ಪಡೆಯಲು ವ್ಯವಸ್ಥೆ ಕಲ್ಪಿಸುವ ದೃಷ್ಟಿಯಿಂದ ಈ ಕುರಿತು ಆಸಕ್ತಿ ವಹಿಸಿ ಇದರ ಅನುಷ್ಠಾನಕ್ಕೆ ಸಹಕಾರ ನೀಡಿದ್ದೇವೆ. ಇದು ಯಶಸ್ವಿಯಾಗುತ್ತದೆ.
– ನಿತ್ಯಾನಂದ ಮುಂಡೋಡಿ, ಅಧ್ಯಕ್ಷರು, ವ್ಯವಸ್ಥಾಪನ ಸಮಿತಿ, ಕುಕ್ಕೆ ಸುಬ್ರಹ್ಮಣ್ಯ

— ಬಾಲಕೃಷ್ಣ  ಭೀಮಗುಳಿ

ಟಾಪ್ ನ್ಯೂಸ್

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.