Thinagalady: ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ
Team Udayavani, Oct 21, 2024, 1:19 AM IST
ಪುತ್ತೂರು: ತಿಂಗಳಾಡಿ ಜಂಕ್ಷನ್ನಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡನೋರ್ವನಿಗೆ ಇಬ್ಬರು ಹಲ್ಲೆ ನಡೆಸಿದ ಘಟನೆ ರವಿವಾರ ಸಂಜೆ ನಡೆದಿದೆ.
ಸ್ಥಳೀಯ ನಿವಾಸಿ, ಕಾಂಗ್ರೆಸ್ ಮುಖಂಡ ರಘುನಾಥ ರೈ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ತಿಂಗಳಾಡಿಯ ಅಂಗಡಿಯೊಂದರ ಬಳಿ ನಿಂತಿದ್ದಾಗ ಅಲ್ಲಿಗೆ ಬಂದ ಯುವಕರಿಬ್ಬರು ಮಾತಿಗೆ ಮಾತು ಬೆಳೆಸಿ ಹಲ್ಲೆ ನಡೆಸಿದ್ದಾರೆ. ತಲೆಯನ್ನು ಹಿಡಿದು ಗೋಡೆಗೆ ಜಜ್ಜಿದ್ದು, ಗಂಭೀರ ಗಾಯಗೊಂಡ ರಘುನಾಥ ರೈ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಮಾಹಿತಿ ತಿಳಿದ ಪುತ್ತೂರು ಗ್ರಾಮಾಂತರ ಸಂಪ್ಯ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಜಾಗದ ತಕರಾರಿಗೆ ಸಂಬಂಧಿಸಿ ಈ ಹಲ್ಲೆ ನಡೆದಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election: ಝಾರ್ಖಂಡ್ನಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದರೂ ವಿಪಕ್ಷಕ್ಕೆ ಬೆಂಬಲ: ಆರ್ಜೆಡಿ
Panaji: ಮುಟ್ಟಾದ ಮಹಿಳೆ ಮನೆಯಿಂದ ಹೊರಗೆ: ಸುಪ್ರೀಂ ನ್ಯಾಯಮೂರ್ತಿ ಕಳವಳ
Accident: ರಾಜಸ್ಥಾನದಲ್ಲಿ ಟೆಂಪೋ-ಬಸ್ ಡಿಕ್ಕಿ: 12 ಮಂದಿ ದುರ್ಮರಣ
Chhattisgarh: ಅಜ್ಜಿಯ ನರಬಲಿ ನಡೆಸಿ ಶಿವಲಿಂಗಕ್ಕೆ ರಕ್ತ ಅರ್ಪಣೆ!
Bihar: ಕಳ್ಳಭಟ್ಟಿ ದುರಂತ; ಇಬ್ಬರ ಅಮಾನತು, 21 ಮಂದಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.