![Lalu](https://www.udayavani.com/wp-content/uploads/2025/02/Lalu-2-415x282.jpg)
![Lalu](https://www.udayavani.com/wp-content/uploads/2025/02/Lalu-2-415x282.jpg)
Team Udayavani, Aug 9, 2024, 6:25 AM IST
ಮಂಗಳೂರು/ಉಡುಪಿ: ದಕ್ಷಿಣ ಭಾರತದ ಅತ್ಯಂತ ಪವಿತ್ರ ನಾಗಾರಾಧನಾ ಕ್ಷೇತ್ರಗಳಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರ, ಕುಡುಪು ಶ್ರೀ ಅನಂತಪದ್ಮನಾಭ ದೇವಸ್ಥಾನ ಸಹಿತ ಕರಾವಳಿಯ ವಿವಿಧ ನಾಗಾರಾಧನಾ ಕ್ಷೇತ್ರಗಳಲ್ಲಿ ಶುಕ್ರವಾರ ಶ್ರದ್ಧಾಭಕ್ತಿಯ ನಾಗರ ಪಂಚಮಿ ಆಚರಣೆ ನೆರವೇರಲಿದೆ.
ಕರಾವಳಿ ಭಾಗದ ವಿವಿಧ ನಾಗ ಸಾನ್ನಿಧ್ಯದ ಕ್ಷೇತ್ರಗಳಲ್ಲಿ ಶುಕ್ರವಾರ ಶ್ರದ್ಧಾಭಕ್ತಿಯ ನಾಗರ ಪಂಚಮಿ ಆಚರಣೆ ನೆರವೇರಲಿದೆ. ಜತೆಗೆ ಎರಡೂ ಜಿಲ್ಲೆಗಳ ವಿವಿಧ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಗಳು, ದೇವಾಲಯಗಳ ನಾಗಸನ್ನಿಧಿ, ಕುಟುಂಬದ ಮೂಲ ನಾಗಬನಗಳಲ್ಲಿ ನಾಗರಪಂಚಮಿ ಶ್ರದ್ಧಾಭಕ್ತಿಯಿಂದ ನೆರವೇರಲಿದೆ. ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ನಾಗರ ಪಂಚಮಿ ಅಂಗವಾಗಿ ಗುರುವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ಖರೀದಿ ಜೋರಾಗಿತ್ತು. ಕರಾವಳಿಯಲ್ಲಿ ಹಬ್ಬಗಳ ಆಚರಣೆಗೆ ತಿಲಕವಿಟ್ಟಂತೆ ಆರಂಭವಾಗುವುದು ನಾಗರಪಂಚಮಿ. ಇಲ್ಲಿಂದ ಅನಂತರ ಹಬ್ಬಗಳ ಸಾಲು. ಪತ್ತನಾಜೆಯ ಬಳಿಕ ಸ್ಥಗಿತಗೊಂಡ ಹಬ್ಬಗಳ ಪರ್ಯಟನೆ ಆರಂಭ. ನಾಗರಪಂಚಮಿ ಆದ ಬಳಿಕ ಕೃಷ್ಣ ಜನ್ಮಾಷ್ಟಮಿ, ಚೌತಿ ಸಹಿತ ಹಬ್ಬಗಳ ಸಂಭ್ರಮವಿರಲಿದೆ.
You seem to have an Ad Blocker on.
To continue reading, please turn it off or whitelist Udayavani.