ಹಳೆಯಂಗಡಿ-ಪಕ್ಷಿಕೆರೆ ರಸ್ತೆಯ ರೈಲ್ವೇಗೇಟ್‌ ಬಳಿ ಸಂಚಾರ ದುಸ್ತರ

ನಿತ್ಯ ಈ ರಸ್ತೆಯನ್ನೇ ಅವಲಂಬಿಸಿರುವ ನಮಗೆ ಇಲ್ಲಿ ಸಂಚರಿಸುವುದೇ ಕಷ್ಟವಾಗಿದೆ

Team Udayavani, Dec 31, 2022, 12:11 PM IST

ಹಳೆಯಂಗಡಿ-ಪಕ್ಷಿಕೆರೆ ರಸ್ತೆಯ ರೈಲ್ವೇಗೇಟ್‌ ಬಳಿ ಸಂಚಾರ ದುಸ್ತರ

ಹಳೆಯಂಗಡಿ: ಹಳೆಯಂಗಡಿಯ ಹೆದ್ದಾರಿಯಿಂದ ಪಕ್ಷಿಕೆರೆಯಾಗಿ ಪುನರೂರು ಎಸ್‌ಕೋಡಿ ವರೆಗಿನ ರಸ್ತೆಯ ಅಭಿವೃದ್ಧಿ ಕಾಮಗಾರಿಯೂ ನಿಧಾನಗತಿಯಿಂದ ನಡೆಯುತ್ತಿರುವ ಕಾರಣ ಹಳೆಯಂಗಡಿ ರೈಲ್ವೇ ಗೇಟ್‌ ನ ಬಳಿಯಲ್ಲಿ ಜನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ.

ಸುಮಾರು ಮೂರು ಕಿಲೋ ಮೀಟರ್‌ ಉದ್ದದ ಈ ರಸ್ತೆಯನ್ನು ಅಭಿವೃದ್ಧಿ ಪಡಿಸಲು ಕಳೆದ ನಾಲ್ಕು ತಿಂಗಳಿಗಳಿಂದ ಕಾಮಗಾರಿ ನಡೆಯುತ್ತಿದೆ. ಈ ನಡುವೆ ಕಳೆದ ಹತ್ತು ಹದಿನೈದು ದಿನಗಳ ಹಿಂದೆ ಲೈಟ್‌ಹೌಸ್‌ನ ಇಂದಿರಾನಗರದ ತಿರುವಿನಿಂದ ಹಳೆಯಂಗಡಿ ರೈಲ್ವೇ ಗೇಟ್‌ನವರೆಗೆ ಇದ್ದ ಸುಮಾರು 300 ಮೀ. ರಸ್ತೆಯ ಡಾಮರನ್ನು ತೆಗೆದು ಜಲ್ಲಿ ಹಾಕಿರುವುದರಿಂದ ಈ ರಸ್ತೆಯಲ್ಲಿ ದೊಡ್ಡ ದೊಡ್ಡ ಜಲ್ಲಿಕಲ್ಲು ಎದ್ದು ಬಂದು ವಾಹನಗಳ ಸಂಚಾರಕ್ಕೆ ಅಡಚಣೆಯಾಗಿದೆ.

ರಿಕ್ಷಾ ಹಾಗೂ ದ್ವಿಚಕ್ರ ವಾಹನಗಳಿಗೆ ಹೆಚ್ಚು ತೊಂದರೆ ಆಗುತ್ತಿದೆ ಎಂದು ವಾಹನಗಳ ಸವಾರರು ಆರೋಪಿಸುತ್ತಿದ್ದಾರೆ. ಈ ರಸ್ತೆಯ ಬೇರೆ ಬೇರೆ ಪ್ರದೇಶಗಳಲ್ಲಿ ವಿಸ್ತರಣೆ ಕಾಮಗಾರಿ ನಡೆಯು ತ್ತಿರುವಾಗಲೇ ರೈಲ್ವೇ ಗೇಟ್‌ ರಸ್ತೆಯನ್ನು ಅಗೆದು ಹಾಕಿರುವುದರಿಂದ ಟಯರ್‌ ಪಂಕ್ಚರ್‌ ಆಗುತ್ತಿದೆ. ಜತೆಗೆ ದೊಡ್ಡ ದೊಡ್ಡ ಜಲ್ಲಿ ಕಲ್ಲುಗಳು ಟಯರ್‌ ನಿಂದ ಸಿಡಿದು ಪಾದಚಾರಿಗಳಿಗೆ ಬೀಳುತ್ತಿದೆ ಇದರಿಂದ ವಾಹನಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಜಲ್ಲಿ ಹುಡಿಯ ರಸ್ತೆ ಧೂಳೆದ್ದು ಉಸಿ ರಾಡಲು ತೊಂದರೆಯಾಗುತ್ತಿದೆ. ನಿತ್ಯ ಸಾವಿರಾರು ವಾಹನಗಳು ಸಂಚರಿಸುವ ಈ ರಸ್ತೆಯನ್ನು ಕೂಡಲೇ ಡಾಮರು ನಡೆಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಈ ಬಗ್ಗೆ ಉದಯವಾಣಿ ಪ್ರತಿನಿಧಿ ಲೋಕೋಪಯೋಗಿ ಇಲಾಖೆಯ ಎಂಜಿನಿಯರನ್ನು ಸಂಪರ್ಕಿಸಲು ದೂರವಾಣಿ ಕರೆ ಮಾಡಿದರೂ ಅವರು ಕರೆಯನ್ನು ಸ್ವೀಕರಿಸಲಿಲ್ಲ.

ಸಂಚರಿಸಲು ಕಷ್ಟವಾಗುತ್ತಿದೆ
ನಿತ್ಯ ಈ ರಸ್ತೆಯನ್ನೇ ಅವಲಂಬಿಸಿರುವ ನಮಗೆ ಇಲ್ಲಿ ಸಂಚರಿಸುವುದೇ ಕಷ್ಟವಾಗಿದೆ. ವಾಹನಕ್ಕೂ ತೊಂದರೆಯಾಗುತ್ತದೆ. ಜಲ್ಲಿ ಕಲ್ಲುಗಳ ರಸ್ತೆಯನ್ನು ನಿರ್ಮಿಸಿ ಹದಿನೈದು ದಿನಗಳದರೂ ಸರಿಪಡಿಸಿಲ್ಲ, ಒಂದೆರಡು ದಿನವಾದರೇ ಹೇಗೂ ಸಂಚರಿಸಬಹುದು ಆದರೆ ಇಷ್ಟು ದಿನಗಳಿಂದ ಡಾಮರು ಹಾಕದೇ, ಕಾಮಗಾರಿಯನ್ನು ನಡೆಸದೇ ಯಾರೂ ಸ್ಪಂದಿಸದೇ ಇರುವುದರಿಂದ ಬಹಳ ಕಷ್ಟವಾಗಿದೆ.
-ದಿನೇಶ್‌, ರಿಕ್ಷಾ ಚಾಲಕ ಹಳೆಯಂಗಡಿ

ಇಲಾಖೆಗೆ ಪತ್ರ ಬರೆಯಲಾಗುವುದು ಸಾರ್ವಜನಿಕರು ಈ ಗಂಭೀರ ಸಮಸ್ಯೆಯ ಬಗ್ಗೆ ಗಮನ ತಂದಿದ್ದಾರೆ. ನಾನು ಸಹ ಸ್ವತಃ ನೋಡಿದ್ದೇನೆ, ಈ ಬಗ್ಗೆ ಒಂದೆರಡು ದಿನದಲ್ಲಿ ಡಾಮರು ಹಾಕಬಹುದೆಂದು ನಿರೀಕ್ಷಿಸಿದ್ದೇ, ಇದೀಗ ತತ್‌ಕ್ಷಣ ಸಂಬಂಧಿಸಿದ ಇಲಾಖೆಗೆ ಪತ್ರವನ್ನು ಬರೆದು ಇಲ್ಲಿನ ವಾಸ್ತವ ಸ್ಥಿತಿಗತಿಯ ಬಗ್ಗೆ ಗಮನ ಸೆಳೆಯಲಾಗುವುದು.
-ಮುತ್ತಪ್ಪ ಡವಲಗಿ,
ಪಿಡಿಒ, ಹಳೆಯಂಗಡಿ ಗ್ರಾಮ ಪಂಚಾಯತ್‌

*ನರೇಂದ್ರ ಕೆರೆಕಾಡು

ಟಾಪ್ ನ್ಯೂಸ್

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Lokayukta

Kinnigoli: ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ,ಜೂನಿಯರ್‌ ಇಂಜಿನಿಯರ್‌ ಲೋಕಾಯಕ್ತ ಬಲೆಗೆ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.