Train ಮಡಗಾಂವ್‌-ಮಂಗಳೂರು ರೈಲು ಸಂಚಾರದಲ್ಲಿ ವ್ಯತ್ಯಯ

ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Team Udayavani, Oct 10, 2023, 11:19 PM IST

TRAINTrain ಮಡಗಾಂವ್‌-ಮಂಗಳೂರು ರೈಲು ಸಂಚಾರದಲ್ಲಿ ವ್ಯತ್ಯಯ

ಮಂಗಳೂರು: ಮಡಗಾಂವ್‌ ಹಾಗೂ ಕುಮಟಾ ನಡುವೆ ರೈಲ್ವೇ ಹಳಿಯ ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ಅ. 12ರಂದು ಕೆಲವು ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.

ಅ. 12ರಂದು ಮಂಗಳೂರು ಸೆಂಟ್ರಲ್‌ನಿಂದ ಹೊರಡುವ ರೈಲು ಸಂಖ್ಯೆ 06602 ಮಂಗಳೂರು ಸೆಂಟ್ರಲ್‌-ಮಡಗಾಂವ್‌ ವಿಶೇಷ ರೈಲು ಕುಮಟಾ ನಿಲ್ದಾಣದಲ್ಲಿ ಕೊನೆಯಾಗಲಿದೆ. ಕುಮಟಾ-ಮಡಗಾಂವ್‌ ನಡುವೆ ಸಂಚಾರ ಭಾಗಶಃ ರದ್ದುಗೊಳ್ಳಲಿದೆ.

ಅ. 12ರಂದು ಮಡಗಾಂವ್‌ನಿಂದ ಮಂಗಳೂರಿಗೆ ಹೊರಡಬೇಕಿದ್ದ ರೈಲು ಸಂಖ್ಯೆ 06601 ಮಡಗಾಂವ್‌-ಮಂಗಳೂರು ಸೆಂಟ್ರಲ್‌ ವಿಶೇಷ ರೈಲು ಸೇವೆಯು ಮಡಗಾಂವ್‌ ಬದಲು ಕುಮಟಾದಿಂದ ಪ್ರಾರಂಭಗೊಳ್ಳಲಿದೆ. ಮಡಗಾಂವ್‌-ಕುಮಟಾ ನಡುವೆ ಬಹುತೇಕ ಸಂಚಾರ ರದ್ದುಗೊಳ್ಳಲಿದೆ. ಸಂಜೆ 4.01 ಗಂಟೆಗೆ ಕುಮಟಾದಿಂದ ಮಂಗಳೂರಿನತ್ತ ಪ್ರಯಾಣಿಸಲಿದೆ ಎಂದು ರೈಲ್ವೇ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.

ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ
ಮಂಗಳೂರು: ದಕ್ಷಿಣ ರೈಲ್ವೇಯ ಪಾಲಕ್ಕಾಡ್‌ ವಿಭಾಗದ ಕೆಲವು ಸೆಕ್ಷನ್‌ಗಳಲ್ಲಿ ಎಂಜಿನಿಯರಿಂಗ್‌ ಕಾಮಗಾರಿ ಹಿನ್ನೆಲೆಯಲ್ಲಿ ಅ. 11ರಿಂದ 16ರ ವರೆಗೆ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ.

ಅ.11ರಂದು 22637 ಡಾ| ಎಂಜಿಆರ್‌ ಚೆನ್ನೈ ಸೆಂಟ್ರಲ್‌ – ಮಂಗಳೂರು ಸೆಂಟ್ರಲ್‌ ವೆಸ್ಟ್‌ಕೋಸ್ಟ್‌ ಎಕ್ಸ್‌ಪ್ರೆಸ್‌ನ ಸೇವೆಯನ್ನು ಒಂದೂವರೆ ಗಂಟೆ, 22638 ಮಂಗಳೂರು ಸೆಂಟ್ರಲ್‌ – ಡಾ| ಎಂಜಿಆರ್‌ ಚೆನ್ನೈ ಸೆಂಟ್ರಲ್‌ ವೆಸ್ಟ್‌ ಕೋಸ್ಟ್‌ ಎಕ್ಸ್‌ಪ್ರೆಸ್ಸನ್ನು 20 ನಿಮಿಷ, 12283 ಎರ್ನಾಕುಲಂ-ನಿಜಾಮುದ್ದೀನ್‌ ಸಾಪ್ತಾಹಿಕ ದುರಂತೋ ಎಕ್ಸ್‌ಪ್ರೆಸ್‌ನ್ನು ಅರ್ಧಗಂಟೆ, 16159 ಚೆನ್ನೈ ಎಗ್ಮೋರ್-ಮಂಗಳೂರು ಸೆಂಟ್ರಲ್‌ ಎಕ್ಸ್‌ಪ್ರೆಸ್ಸನ್ನು 1 ಗಂಟೆ 20 ನಿಮಿಷ, 16160 ಮಂಗಳೂರು ಸೆಂಟ್ರಲ್‌ – ಚೆನ್ನೈ ಎಗ್ಮೋರ್ ಎಕ್ಸ್‌ಪ್ರೆಸ್‌ನ ಸೇವೆಯನ್ನು 15 ನಿಮಿಷ ಕಾಲ ನಿಯಂತ್ರಿಸಲಾಗುತ್ತದೆ.

ಅ. 12, 13ರಂದು 22638 ಮಂಗಳೂರು ಸೆಂಟ್ರಲ್‌ ಎಂಜಿಆರ್‌ ಚೆನ್ನೈ ವೆಸ್ಟ್‌ಕೋಸ್ಟ್‌ ಎಕ್ಸ್‌ಪ್ರೆಸ್‌ 30 ನಿಮಿಷ ನಿಯಂತ್ರಿಸಲ್ಪಡುವುದು. 13ರಂದು 22637 ವೆಸ್ಟ್‌ಕೋಸ್ಟ್‌ 40 ನಿಮಿಷ ಕಾಲ ನಿಯಂತ್ರಿಸಲ್ಪಡುವುದು.

ಅ. 14ರಂದು 20910 ಪೋರಬಂದರ್‌ ಕೊಚ್ಚುವೇಲಿ ವೀಕ್ಲಿ ಸೂಪರ್‌ಫಾಸ್ಟ್‌ 30 ನಿಮಿಷ, 16649 ಮಂಗಳೂರು ಸೆಂಟ್ರಲ್‌ ನಾಗರಕೋವಿಲ್‌ ಜಂಕ್ಷನ್‌ ಪರಶುರಾಮ ಎಕ್ಸ್‌ಪ್ರೆಸ್‌ 20 ನಿಮಿಷ, 12678 ಎರ್ನಾಕುಳಂ ಕೆಎಸ್‌ಆರ್‌ ಬೆಂಗಳೂರು ರೈಲನ್ನು 30 ನಿಮಿಷ ಕಾಲ ನಿಯಂತ್ರಿಸಲಾಗುತ್ತದೆ.

ಅ.15ರಂದು 22638 ವೆಸ್ಟ್‌ ಕೋಸ್ಟ್‌ ಎಕ್ಸ್‌ಪ್ರೆಸ್ಸನ್ನು 1.40 ಗಂಟೆ, 12618 ನಿಜಾಮುದ್ದೀನ್‌-ಎರ್ನಾಕುಳಂ ಮಂಗಳಾ ಲಕ್ಷದ್ವೀಪ್‌ 1.10 ಗಂಟೆ, 12224 ಎರ್ನಾಕುಳಂ-ಲೋಕಮಾನ್ಯ ತಿಲಕ್‌ ವೀಕ್ಲಿ ಎಕ್ಸ್‌ಪ್ರೆಸ್‌ 2.35 ಗಂಟೆ, 22637 ವೆಸ್ಟ್‌ಕೋಸ್ಟ್‌ ಎಕ್ಸ್‌ಪ್ರೆಸ್ಸನ್ನು 1.40 ಗಂಟೆ ನಿಯಂತ್ರಿಸಲಾಗುವುದು.

ಅ. 16ರಂದು 22637 ವೆಸ್ಟ್‌ ಕೋಸ್ಟ್‌ ಎಕ್ಸ್‌ಪ್ರೆಸ್ಸನ್ನು 1.40 ಗಂಟೆ, ನಂ. 22638 ವೆಸ್ಟ್‌ಕೋಸ್ಟ್‌ ಎಕ್ಸ್‌ಪ್ರೆಸ್‌ 1.40 ಗಂಟೆ, 12618 ನಿಜಾಮುದ್ದೀನ್‌ ಎರ್ನಾಕುಳಂ ಮಂಗಳಾ ಎಕ್ಸ್‌ಪ್ರೆಸ್‌ 1.10 ಗಂಟೆ, 16603 ಮಂಗಳೂರು ಸೆಂಟ್ರಲ್‌ ತಿರುವನಂತಪುರ ಸೆಂಟ್ರಲ್‌ ಮಾವೇಲಿ ಎಕ್ಸ್‌ಪ್ರೆಸ್‌ 1.10 ಗಂಟೆ, 12484 ಅಮೃತಸರ – ಕೊಚ್ಚುವೇಲಿ ವೀಕ್ಲಿ ಎಕ್ಸ್‌ಪ್ರೆಸ್‌ 30 ನಿಮಿಷ, 11098 ಎರ್ನಾಕುಳಂ – ಪುಣೆ ಜಂಕ್ಷನ್‌ ಪೂರ್ಣ ಎಕ್ಸ್‌ಪ್ರೆಸ್ಸನ್ನು 45 ನಿಮಿಷ ಕಾಲ ನಿಯಂತ್ರಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.