ನವಜಾತ ಶಿಶು ಸಹಿತ 238 ಮಂದಿಗೆ ಚಿಕಿತ್ಸೆ, 121 ಸುರಕ್ಷಿತ ಹೆರಿಗೆ


Team Udayavani, May 7, 2021, 4:40 AM IST

ನವಜಾತ ಶಿಶು ಸಹಿತ 238 ಮಂದಿಗೆ ಚಿಕಿತ್ಸೆ, 121 ಸುರಕ್ಷಿತ ಹೆರಿಗೆ

ಮಹಾನಗರ: ಕೋವಿಡ್ ಸೋಂಕು ದೃಢಪಟ್ಟ ಗರ್ಭಿಣಿಯರು ಮತ್ತು ನವಜಾತ ಶಿಶುಗಳ ಚಿಕಿತ್ಸೆ, ಆರೈಕೆಗಾಗಿ ಮಂಗಳೂರಿನ ಸರಕಾರಿ ಲೇಡಿಗೋಶನ್‌ ಹೆರಿಗೆ ಆಸ್ಪತ್ರೆಯಲ್ಲಿಯೂ ಪ್ರತ್ಯೇಕ ವಾರ್ಡ್‌ವಿದ್ದು, ಇಲ್ಲಿ ಇದುವರೆಗೆ 238 ಮಂದಿಗೆ ಚಿಕಿತ್ಸೆ ನೀಡಲಾಗಿದೆ.

ಕೋವಿಡ್ ಮೊದಲ ಅಲೆಯ ಸಂದರ್ಭ ಕಳೆದ ವರ್ಷದ ಸೆಪ್ಟಂಬರ್‌ 10ರಂದು ಇಲ್ಲಿ ಕೋವಿಡ್‌ ವಾರ್ಡ್‌ನ್ನು ಆರಂಭಿಸಲಾಗಿತ್ತು. ಪ್ರಸ್ತುತ ಇಲ್ಲಿ 21 ಹಾಸಿಗೆಗಳ ಕೋವಿಡ್‌ ವಾರ್ಡ್‌ ಇದೆ. ಈ ಪೈಕಿ ಮೇ 6ರ ಮಧ್ಯಾಹ್ನ ವೇಳೆಗೆ 17 ಹಾಸಿಗೆಗಳು ಭರ್ತಿಯಾಗಿದ್ದವು. 21 ಬೆಡ್‌ಗಳ ಪೈಕಿ 15 ಆಕ್ಸಿಜನ್‌ ಹೊಂದಿರುವ ಬೆಡ್‌ಗಳು ಹಾಗೂ 5 ನಾರ್ಮಲ್‌ ಬೆಡ್‌, ಒಂದು ವೆಂಟಿಲೇಟರ್‌ ಹೊಂದಿರುವ ಬೆಡ್‌ ಇದೆ.

121 ಹೆರಿಗೆ :

ಕಳೆದ ವರ್ಷದ ಸೆಪ್ಟಂಬರ್‌ನಿಂದ ಈ ವರ್ಷದ ಮೇ 5ರ ವರೆಗೆ ಇಲ್ಲಿ 121 ಮಂದಿ ಕೊರೊನಾ ಸೋಂಕಿತ ಗರ್ಭಿಣಿಯರ ಹೆರಿಗೆಯಾಗಿದೆ. ಇದರಲ್ಲಿ 66 ಸಿಜೇರಿಯನ್‌ ಹಾಗೂ 55 ಸಹಜ ಹೆರಿಗೆ. ಎಲ್ಲರ ಹೆರಿಗೆ ಸುರಕ್ಷಿತವಾಗಿ ನಡೆದಿದೆ. ಸೆಪ್ಟಂಬರ್‌ನಲ್ಲಿ 36 ಮಂದಿ, ಅಕ್ಟೋಬರ್‌ನಲ್ಲಿ 33, ನವೆಂಬರ್‌ನಲ್ಲಿ 14, ಡಿಸೆಂಬರ್‌ನಲ್ಲಿ 10, ಜನವರಿಯಲ್ಲಿ 5, ಫೆಬ್ರವರಿಯಲ್ಲಿ 3, ಮಾರ್ಚ್‌ನಲ್ಲಿ 11, ಮೇಯಲ್ಲಿ (ಮೇ 5ರ ವರೆಗೆ) 6 ಮಂದಿ ಕೊರೊನಾ ಸೋಂಕಿತರ ಹೆರಿಗೆಯಾಗಿದೆ.

ಎಲ್ಲವೂ ಪ್ರತ್ಯೇಕ ವ್ಯವಸ್ಥೆ :

ಕೋವಿಡ್‌ ವಾರ್ಡ್‌ ಪ್ರತ್ಯೇಕವಾಗಿದ್ದು, ಅಲ್ಲಿ ಹೆರಿಗೆಗೆ ಪ್ರತ್ಯೇಕ ವ್ಯವಸ್ಥೆ ಇದೆ.  ಅಲ್ಲದೆ ಕೋವಿಡ್ ಸೋಂಕಿತರ ಚಿಕಿತ್ಸೆಗೂ ವ್ಯವಸ್ಥೆ ಇದೆ. ವೈದ್ಯರು, ದಾದಿಯರು, ಇತರ ಸಿಬಂದಿ ಕೂಡ ಕೋವಿಡ್‌ ವಾರ್ಡ್‌ಗೆ ಪ್ರತ್ಯೇಕವಾಗಿ ಇದ್ದಾರೆ. ಶಿಶುಗಳಿಗೂ ಪ್ರತ್ಯೇಕವಾದ ವಾರ್ಡ್‌ ಇದೆ. ಇದುವರೆಗೆ ಇಲ್ಲಿ ಒಂದು ನವಜಾತ ಶಿಶುವಿನಲ್ಲಿ ಮಾತ್ರ ಕೊರೊನಾ ದೃಢಪಟ್ಟಿದೆ. ಅದಕ್ಕೂ ಅಗತ್ಯ ಚಿಕಿತ್ಸೆ ನೀಡಲಾಗಿದೆ. ಇಲ್ಲಿ ತಿಂಗಳಿಗೆ ಸರಾಸರಿ 500ರಷ್ಟು ಹೆರಿಗೆಯಾಗುತ್ತದೆ. ಕಳೆದ ತಿಂಗಳು 750 ಹೆರಿಗೆಯಾಗಿದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ದಾಖಲೆಯ 800 ಹೆರಿಗೆಗಳಾಗಿವೆ. ಆಸ್ಪತ್ರೆಯಲ್ಲಿರುವ ಅಗತ್ಯ ಸೌಲಭ್ಯಗಳಿಂದಾಗಿ ಕೊರೊನಾ ಸಂದರ್ಭದಲ್ಲಿಯೂ ಸುರಕ್ಷಿತ ಹೆರಿಗೆ ಸಾಧ್ಯವಾಗುತ್ತಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

ಸರಕಾರಿ ಲೇಡಿಗೋಶನ್‌ ಆಸ್ಪತ್ರೆಯಲ್ಲಿ 21 ಬೆಡ್‌ಗಳ ಪ್ರತ್ಯೇಕ ಕೋವಿಡ್‌ ವಾರ್ಡ್‌ ಇದ್ದು ಇಲ್ಲಿ ಎಲ್ಲ ಅಗತ್ಯ ಸೌಲಭ್ಯಗಳಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚುವರಿ ಬೆಡ್‌ಗಳನ್ನು ಸಿದ್ಧಪಡಿಸಲು ನಿರ್ಧರಿಸಿದ್ದೇವೆ. ಗರ್ಭಿಣಿಯರು ಹಾಗೂ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಕೋವಿಡ್‌ ವಾರ್ಡ್‌ ಹೆರಿಗೆ ಆಸ್ಪತ್ರೆಯ ಇತರ ವಾರ್ಡ್‌ಗಳಿಂದ ಸಂಪೂರ್ಣವಾಗಿ ಪ್ರತ್ಯೇಕವಾಗಿಯೇ ಇದೆ.  -ಡಾ| ದುರ್ಗಾ ಪ್ರಸಾದ್‌ ಎಂ.ಆರ್‌., ವೈದ್ಯಕೀಯ ಅಧೀಕ್ಷಕರು, ಸರಕಾರಿ ಲೇಡಿಗೋಶನ್‌ ಆಸ್ಪತ್ರೆ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.