Tulu Cinema; ಕರಾವಳಿಯಾದ್ಯಂತ “ಅನರ್‌ಕಲಿ’ ತುಳು ಸಿನೆಮಾ ತೆರೆಗೆ


Team Udayavani, Aug 24, 2024, 12:18 AM IST

Tulu Cinema; ಕರಾವಳಿಯಾದ್ಯಂತ “ಅನರ್‌ಕಲಿ’ ತುಳು ಸಿನೆಮಾ ತೆರೆಗೆ

ಮಂಗಳೂರು: ತುಳು ಸಿನೆಮಾ ರಂಗಕ್ಕೆ ಹೊಸ ರೂಪ ನೀಡುವ ನೆಲೆಯಲ್ಲಿ ಮೂಡಿಬಂದ ಲಕುಮಿ ಸಿನಿ ಕ್ರಿಯೇಷನ್‌ ಮತ್ತು ಲೋ ಬಜೆಟ್‌ ಪ್ರೊಡಕ್ಷನ್‌ ನಿರ್ಮಾಣದ ಹರ್ಷಿತ್‌ ಸೋಮೇಶ್ವರ ನಿರ್ದೇಶನದ “ಅನರ್‌ಕಲಿ’ ತುಳು ಸಿನೆಮಾ ಶುಕ್ರವಾರ ಮಂಗಳೂರಿನಲ್ಲಿ ರೂಪವಾಣಿ, ಪಿವಿಆರ್‌, ಭಾರತ್‌ ಸಿನೆಮಾಸ್‌, ಸಿನೆಪೊಲಿಸ್‌, ಸುರತ್ಕಲ್‌ನಲ್ಲಿ ನಟರಾಜ್‌, ಸಿನೆಗ್ಯಾಲಕ್ಸಿ, ಪಡುಬಿದ್ರಿಯಲ್ಲಿ ಭಾರತ್‌ ಸಿನೆಮಾಸ್‌, ಉಡುಪಿಯಲ್ಲಿ ಭಾರತ್‌ ಸಿನೆಮಾಸ್‌, ಮಣಿಪಾಲದಲ್ಲಿ ಭಾರತ್‌ ಸಿನೆಮಾಸ್‌, ಕಾರ್ಕಳದಲ್ಲಿ ರಾಧಿಕಾ, ಬೆಳ್ತಂಗಡಿಯಲ್ಲಿ ಭಾರತ್‌, ಪುತ್ತೂರಿನಲ್ಲಿ ಭಾರತ್‌ ಸಿನೆಮಾಸ್‌ನಲ್ಲಿ ಬಿಡುಗಡೆಗೊಂಡಿತು.

ಮಂಗಳೂರಿನ ಭಾರತ್‌ ಸಿನೆಮಾಸ್‌ನಲ್ಲಿ ಚಿತ್ರ ಬಿಡುಗಡೆ ಕಾರ್ಯಕ್ರಮ ನಡೆಯಿತು. ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್‌ ಗಟ್ಟಿ ಕಾಪಿಕಾಡ್‌ ಅವರು, ತುಳು ಭಾಷೆಯ ಉಳಿವಿಗಾಗಿ ತುಳು ನಾಟಕ ಮತ್ತು ಸಿನೆಮಾಗಳ ಪಾತ್ರ ಹೆಚ್ಚಿನದ್ದು. ಅನರ್‌ಕಲಿ ಸಿನೆಮಾ ಚೆನ್ನಾಗಿದೆ ಎಂದು ಪ್ರೇಕ್ಷಕರು ಬೆನ್ನು ತಟ್ಟಿದಾರೆ. ಒಳ್ಳೆಯ ಪ್ರಯತ್ನವನ್ನು ತುಳುನಾಡಿನ ಪ್ರೇಕ್ಷಕರು ಖಂಡಿತ ಬೆಂಬಲಿಸುತ್ತಾರೆ. ಎಲ್ಲರೂ ಸಿನೆಮಾ ನೋಡಿ ಪ್ರೋತ್ಸಾಹಿಸಿ ಎಂದರು.

ಅರವಿಂದ್‌ ಬೋಳಾರ್‌ ಮಾತನಾಡಿ, ತುಳುವರು ಥಿಯೇಟರ್‌ಗೆ ಬಂದು ಸಿನೆಮಾ ನೋಡಿ ಗೆಲ್ಲಿಸಿದಲ್ಲಿ ನಿರ್ಮಾಪಕರ ಶ್ರಮ ಸಾರ್ಥಕವಾಗುತ್ತದೆ ಎಂದರು.

ಪ್ರಮುಖರಾದ ಕಿಶೋರ್‌ ಡಿ.ಶೆಟ್ಟಿ, ಪ್ರಕಾಶ್‌ ಪಾಂಡೇಶ್ವರ್‌, ನವನೀತ್‌ ಶೆಟ್ಟಿ, ಆರ್‌.ಧನರಾಜ್‌, ಭೋಜರಾಜ ವಾಮಂಜೂರು, ಚಂದ್ರಶೇಖರ ಶೆಟ್ಟಿ, ಚಂದ್ರಹಾಸ ಶೆಟ್ಟಿ, ಲಂಚುಲಾಲ್‌, ವಿಜಯ್‌ ಶೋಭರಾಜ್‌ ಪಾವೂರು, ಮಧುರಾ ಆರ್‌.ಜೆ., ಪುರುಷೋತ್ತಮ ಭಂಡಾರಿ ಅಡ್ಯಾರ್‌, ಪ್ರದೀಪ್‌ ಆಳ್ವ ಕದ್ರಿ, ಗಿರೀಶ್‌ ಎಂ. ಶೆಟ್ಟಿ ಕಟೀಲು, ದಿವಾಕರ ಶೆಟ್ಟಿ, ಮೋಹನ್‌ ಕೊಪ್ಪಲ, ಇಸ್ಮಾಯಿಲ್‌ ಮೂಡುಶೆಡ್ಡೆ, ತಾರಾನಾಥ್‌ ಶೆಟ್ಟಿ ಬೋಳಾರ್‌, ಬಾಳ ಜಗನ್ನಾಥ ಶೆಟ್ಟಿ ಬಾಳ, ಲೋಕಯ್ಯ ಶೆಟ್ಟಿ ಮುಂಚೂರು, ಯಶೋದಾ ಸಂಜೀವ ಕೋಟ್ಯಾನ್‌, ರಜನೀಶ್‌ ಕೋಟ್ಯಾನ್‌ ಮುಂತಾದವರು ಉಪಸ್ಥಿತರಿದ್ದರು. ಮಧುರಾ ಆರ್‌.ಜೆ. ನಿರೂಪಿಸಿದರು.

ಅನರ್‌ಕಲಿ ಸಂಪೂರ್ಣ ಹಾಸ್ಯಭರಿತ ಚಿತ್ರ. ಕಡಿಮೆ ಬಜೆಟ್‌ನಲ್ಲಿ ಮಾಡಿದ ದೊಡ್ಡ ಸಿನಿಮಾ. ನವೀನ್‌ ಡಿ. ಪಡೀಲ್‌, ಅರವಿಂದ ಬೋಳಾರ್‌, ದೀಪಕ್‌ ಪಾಣಾಜೆ, ರವಿ ರಾಮಕುಂಜ, ಪುಷ್ಪರಾಜ್‌ ಬೊಳ್ಳೂರು, ಸುಜಾತ ಶಕ್ತಿನಗರ, ನಮಿತಾ ಕುಳೂರು ಮುಖ್ಯ ಭೂಮಿಕೆಯಲ್ಲಿದ್ದು, ನಾಯಕ ನಟನಾಗಿ ವಿಜಯ್‌ ಶೋಭರಾಜ್‌ ಪಾವೂರು, ನಾಯಕಿಯಾಗಿ ಮಧುರಾ ಆರ್‌. ಜೆ. ಅಭಿನಯಿಸಿದ್ದಾರೆ.

ಟಾಪ್ ನ್ಯೂಸ್

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Mangaluru-BjP

Nagamangala Riots: ಕದ್ರಿ: ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

PROTEST

Udupi: ನಾಗಮಂಗಲ ಘಟನೆ ಖಂಡಿಸಿ ವಿವಿಧೆಡೆ ಪ್ರತಿಭಟನೆ

Tulunadu-utsava

Mangaluru: ತುಳುನಾಡ ಉತ್ಸವ ಪಿಲಿಕುಳ ಕಂಬಳ: ಬೆಂಗಳೂರಿನಲ್ಲಿ ಸಭೆ

police

Udupi: ನಾಪತ್ತೆಯಾಗಿದ್ದ ಬಾಲಕನ ರಕ್ಷಣೆ, ಮಕ್ಕಳ ರಕ್ಷಣ ಘಟಕಕ್ಕೆ ಹಸ್ತಾಂತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

Mangaluru-BjP

Nagamangala Riots: ಕದ್ರಿ: ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

Tulunadu-utsava

Mangaluru: ತುಳುನಾಡ ಉತ್ಸವ ಪಿಲಿಕುಳ ಕಂಬಳ: ಬೆಂಗಳೂರಿನಲ್ಲಿ ಸಭೆ

1-adasdsaddas

Mangaluru CCB Police: 8 ಕೆಜಿ ಗಾಂಜಾ ಸಹಿತ ಇಬ್ಬರ ಬಂಧನ

Mangaluru: ಜೆಸಿಬಿ ಯಿಂದ ಮನೆ ಕೆಡವುತ್ತಿದ್ದ ವೇಳೆ ಗೋಡೆ ಕುಸಿದು ಇಬ್ಬರು ಮೃತ್ಯು

Mangaluru: ಹಳೆ ಮನೆ ಕೆಡವುತ್ತಿದ್ದ ವೇಳೆ ಗೋಡೆ ಕುಸಿದು ಇಬ್ಬರು ಮೃತ್ಯು

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

congress

Haryana ಚುನಾವಣೆ: 89 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಕಣಕ್ಕೆ, ಸಿಪಿಎಂಗೆ 1 ಸ್ಥಾನ

suicide (2)

Kanpur:ಮಹಿಳೆಯ ಬೆತ್ತಲೆ, ರುಂಡವಿಲ್ಲದ ಮೃತದೇಹ ಪತ್ತೆ

1bbb

Baahubali; ನೆರೆ ನೀರಲ್ಲಿ ತಲೆ ಮೇಲೆ ಬೈಕ್‌ ಹೊತ್ತು ನಡೆದ ‘ಬಾಹುಬಲಿ’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.