ತುಳು ಭಾಷೆಯ ಅಧಿಕೃತ ಮಾನ್ಯತೆಗಾಗಿ ಟ್ವೀಟರ್‌ನಲ್ಲಿ ಆಗ್ರಹ ಅಭಿಯಾನ

#Tulu #TuluTo8thSchedule , #TuluOfficialinKA_KL ಹ್ಯಾಶ್‌ ಟ್ಯಾಗ್‌ ಮೂಲಕ ಟ್ವೀಟರ್‌ ನಲ್ಲಿ ಆಗ್ರಹದ ಅಭಿಯಾನ

Team Udayavani, Sep 8, 2019, 9:48 PM IST

Tulu-Culture-726

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮಂಗಳೂರು: ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಚೇದಕ್ಕೆ ಸೇರಿಸುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸಿ ಟ್ವೀಟರ್‌ ನಲ್ಲಿ ಅಭಿಯಾನ ಪ್ರಾರಂಭಗೊಂಡಿದೆ. ಈ ಹಿಂದೆಯೂ ಹಲವಾರು ಸಂದರ್ಭಗಳಲ್ಲಿ ಈ ರೀತಿಯ ಆಂದೋಲನಗಳು ನಡೆದಿತ್ತು. ಇದೀಗ ತುಳು ಭಾಷಿಕರ ಈ ಹೋರಾಟಕ್ಕೆ ರಾಜ್ಯದ ಇತರ ಕಡೆಯಿಂದಲೂ ಭಾರೀ ಬೆಂಬಲ ವ್ಯಕ್ತವಾಗಿದೆ.


ಈ ಹಿಂದಿನ ಎಲ್ಲಾ ಸರಕಾರಗಳು ತುಳುವನ್ನು ಕಡೆಗಣಿಸುತ್ತಲೇ ಬಂದಿದ್ದು, ಕಾಸರಗೋಡು, ದಕ್ಷಿಣ ಕನ್ನಡ ಮತ್ತು ಉಡುಪಿ ಜನರ ಮನವಿಗಳಿಗೆ ಬೆಂಬಲ ಲಭಿಸಿರಲಿಲ್ಲ. ಇದೀಗ ಮತ್ತೆ, ತುಳು ಭಾಷೆಯನ್ನು ಅಧಿಕೃತ ಭಾಷೆಯಾಗಿ ಪರಿಗಣಿಸಬೇಕೆಂಬ ತುಳುವರ  ಆಗ್ರಹಕ್ಕೆ ಇದೀಗ ಟ್ವೀಟರ್‌ ಅಭಿಯಾನದ ಮೂಲಕ ಸೋಷಿಯಲ್ ಮೀಡಿಯಾ ಹೋರಾಟದ ಸ್ಪರ್ಶ ದೊರೆತಂತಾಗಿದೆ


ತುಳು ಭಾಷಿಕರ ಹೋರಾಟಕ್ಕೆ ಜನಪ್ರತಿನಿಧಿಗಳು, ಚಿತ್ರ ನಟರ ಬೆಂಬಲ
ತುಳು ಭಾಷೆಯ ಅಧಿಕೃತ ಸ್ಥಾನಮಾನಕ್ಕಾಗಿ ಟ್ವೀಟರ್‌ನಲ್ಲಿ ನಡೆಯುತ್ತಿರುವ ಅಭಿಯಾನಕ್ಕೆ ಕನ್ನಡ ಮತ್ತು ತುಳು ಭಾಷೆಯ ಚಿತ್ರ ನಟರು ಹಾಗೂ ಜನಪ್ರತಿನಿಧಿಗಳು ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಚಿತ್ರನಟರಾಗಿರುವ ತುಳುನಾಡಿನವರೇ ಆಗಿರುವ ನಟ ರಕ್ಷಿತ್‌ ಶೆಟ್ಟಿ ಸೇರಿದಂತೆ ಕನ್ನಡದ ಜನಪ್ರಿಯ ನಟ  ಜಗ್ಗೇಶ್‌ ಅವರೂ ಸಹ ಈ ಅಭಿಯಾನಕ್ಕೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.

#ತುಳು ಸಹೋದರರೆ ಉಸಾರ್ ಉಲ್ಲೇರ!ಬೊಕ್ಕ ತುಳು ಭಾಷೆಯ ವಿಷಯ ಯಾನ್ ಲಾ ನಿಮ್ಮೊಟ್ಟಿಗೆ ಬರ್ಪೇ!


ಇನ್ನು ಈ ಅಭಿಯಾನಕ್ಕೆ ಕರಾವಳಿ ಭಾಗದ ಜನಪ್ರತಿನಿಧಿಗಳೂ ಸಹ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದು, ಅಭಿಯಾನವನ್ನು ಬೆಂಬಲಿಸಿ ತುಳು ಭಾಷೆಯಲ್ಲೇ ಟ್ವೀಟ್‌ ಮಾಡಿ ಗಮನ ಸೆಳೆದಿದ್ದಾರೆ. ಖ್ಯಾತ ವ್ಯಂಗ್ಯಚಿತ್ರಕಾರ ಕುಂದಾಪುರ ಮೂಲದ ಸತೀಶ್ ಆಚಾರ್ಯ ಅವರೂ ಸಹ ತಮ್ಮ ಈ ಹಿಂದಿನ ಕಂಬಳ ಸಂಬಂಧಿ ವ್ಯಂಗ್ಯಚಿತ್ರವೊಂದನ್ನು ಪೋಸ್ಟ್ ಮಾಡುವ ಮೂಲಕ ಈ ಅಭಿಯಾನಕ್ಕೆತಮ್ಮ ಬೆಂಬಲವನ್ನು ಸೂಚಿಸಿದ್ದಾರೆ.
Our culture our pride! #TuluOfficialinKA_KL @CMofKarnataka pic.twitter.com/6nplcn365z

Tulu is as much part of me, as much close to me as Kannada. Tulu is a culture, not just a language. Richly deserves the recognition both at state and national level. #TuluOfficialinKA_KL #TuluTo8thSchedule pic.twitter.com/vTeG5Rxay6


ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಬೇಕೆಂದು ಅಗ್ರಹಿಸಿ #Tulu #TuluTo8thSchedule , #TuluOfficialinKA_KL ಎಂಬೆಲ್ಲಾ ಹ್ಯಾಶ್‌ ಟ್ಯಾಗ್‌ ಮೂಲಕ ಟ್ವೀಟರ್‌ ನಲ್ಲಿ ಆಗ್ರಹದ ಅಭಿಯಾನ ನಡೆಯುತ್ತಿದೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.