ಉದಯವಾಣಿ ಚಿತ್ರಕಲಾ ಸ್ಪರ್ಧೆ 2022: ಚಿಣ್ಣರ ಬಣ್ಣದಲ್ಲಿ ಮೇಳೈಸಿದ ವರ್ಣಗಳ ಚಿತ್ತಾರ

ತಾಲೂಕು ಮಟ್ಟದ ವಿಜೇತರಿಗೆ ಪ್ರಶಸ್ತಿ ಪ್ರದಾನ

Team Udayavani, Nov 6, 2022, 6:54 PM IST

ಉದಯವಾಣಿ ಚಿತ್ರಕಲಾ ಸ್ಪರ್ಧೆ 2022: ಚಿಣ್ಣರ ಬಣ್ಣದಲ್ಲಿ ಮೇಳೈಸಿದ ವರ್ಣಗಳ ಚಿತ್ತಾರ

ಮಹಾನಗರ: ಮಂಗಳೂರಿನ ಕೆನರಾ ಹೈಸ್ಕೂಲ್‌ನ ಭುವನೇಂದ್ರ ಸಭಾಭವನಲ್ಲಿ ರವಿವಾರ ನಡೆದ ಉದಯವಾಣಿ ಚಿತ್ರಕಲಾ ಸ್ಪರ್ಧೆ “ಚಿಣ್ಣರ ಬಣ್ಣ’ ವರ್ಣಗಳ ಕೌತುಕವನ್ನು ಅನಾವರಣಗೊಳಿಸಿತು. ಎಳೆಯ ಮನಸ್ಸುಗಳ ಕಲಾ ಪ್ರತಿಭೆ ಹಾಳೆಗಳಲ್ಲಿ ಅರಳಿ ಸೇರಿದವರ ಮನಸೂರೆಗೊಂಡಿತು.

ಉಡುಪಿಯ “ಆರ್ಟಿಸ್ಟ್‌ ಫೋರಂ’ನ ಸಹಯೋಗದೊಂದಿಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ 16 ತಾಲೂಕುಗಳಲ್ಲಿ ನಡೆದಿದ್ದ ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ಅತಿ ಕಿರಿಯ, ಕಿರಿಯ ಹಾಗೂ ಹಿರಿಯ ವಿಭಾಗದಲ್ಲಿ ವಿಜೇತರಾದ 144 ಮಕ್ಕಳು ಉಭಯ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಚಿಣ್ಣರ ಬಣ್ಣಕ್ಕೆ ಮೆರುಗು ತುಂಬಿದರು. ಸುಮಾರು2 ತಾಸುಗಳ ಕಾಲ ನಡೆದ ಸ್ಪರ್ಧೆಯಲ್ಲಿ ಅತಿಕಿರಿಯ ಹಾಗೂ ಕಿರಿಯ ವಿಭಾಗಗಳ ಮಕ್ಕಳು ಅವರ ಕಲ್ಪನೆಯ ವಸ್ತುಗಳಲ್ಲಿ ಚಿತ್ರ ಬಿಡಿಸುವ ಅವಕಾಶ ಪಡೆದರೆ ಹಿರಿಯ ವಿಭಾಗದ ಮಕ್ಕಳಿಗೆ “ಸಂಗೀತ ಕಚೇರಿ’, “ಖೋಖೋ ಪಂದ್ಯ’ ಮತ್ತು “ವೈಜ್ಞಾನಿಕ ಕೃಷಿ ಪದ್ದತಿ’, “ಸಿಡಿಮದ್ದು ಪ್ರದರ್ಶನ’ ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯವನ್ನು ಆರಿಸಿಕೊಂಡು ಚಿತ್ರಬಿಡಿಸುವ ಅವಕಾಶವನ್ನು ನೀಡಲಾಗಿತ್ತು.

ಚಿತ್ರಕಲೆ ವ್ಯಕ್ತಿತ್ವ ವಿಕಸನಕ್ಕೆ ಪೂರಕ : ಸಿ.ಎಸ್‌.ಭಂಡಾರಿ
ಚಿಣ್ಣರ ಬಣ್ಣ ಸ್ಪರ್ಧೆಯನ್ನು ಬ್ರಿಟಿಷ್‌ ಬಯೋಲಾಜಿಕಲ್‌ ಸಂಸ್ಥೆಯ ಪ್ರಾದೇಶಿಕ ಪ್ರಬಂಧಕ ಸಿ.ಎಸ್‌. ಭಂಡಾರಿಯವರು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಸ್ಪರ್ಧೆಯನ್ನು ಬೆಳಗ್ಗೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಕ್ಕಳಲ್ಲಿ ಕಲಾಸಕ್ತಿಯನ್ನು ಎಳೆಯ ಪ್ರಾಯದಿಂದಲೇ ಮೂಡಿಸುವುದು ಅವರ ಮುಂದಿನ ಭವಿಷ್ಯದಲ್ಲಿ ಬಹಳಷ್ಟು ನೆರವಾಗುತ್ತದೆ. ಅದರಲ್ಲೂ ಚಿತ್ರಕಲೆ ಅಭ್ಯಾಸ ಮುಂದಕ್ಕೆ ವೃತ್ತಿಶಿಕ್ಷಣಕ್ಕೆ ಪೂರಕವಾಗುತ್ತದೆ ಎಂದರು.

ಮಕ್ಕಳಲ್ಲಿ ಚಿತ್ರಕಲೆ ಆಸಕ್ತಿಯನ್ನು ಬೆಳೆಸುವಲ್ಲಿ ಮತ್ತು ಅವರ ಪ್ರತಿಭೆಗಳು ಪ್ರಕಾಶಿಸುವಲ್ಲಿ ಉದಯವಾಣಿ ಚಿಣ್ಣರ ಬಣ್ಣ ಉದಾತ್ತ ವೇದಿಕೆಯಾಗಿದೆ.ಈ ಸ್ಪರ್ಧೆಯನ್ನು ಉದಯವಾಣಿ ಕಳೆದ ಹಲವಾರು ವರ್ಷಗಳಿಂದ ಯಶಸ್ವಿಯಾಗಿ ಆಯೋಜಿಸಿಕೊಂಡು ಬರುತ್ತಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಅವರು ಅಭಿನಂದಿಸಿದರು.

ಉದಯವಾಣಿ ಉಪಾಧ್ಯಕ್ಷ ರಾಮಚಂದ್ರ ಮಿಜಾರ್‌ ಅವರು ಸ್ವಾಗತಿಸಿ ಉದಯವಾಣಿ ಚಿಣ್ಣರ ಬಣ್ಣರ ಸ್ಪರ್ಧೆ ಉಭಯ ಜಿಲ್ಲೆಗಳಲ್ಲಿ ಮಕ್ಕಳಿಗೆ ಅತ್ಯಂತ ಪ್ರಿಯವಾದ ಸ್ಪರ್ಧೆಯಾಗಿ ಮೂಡಿಬಂದಿದೆ ಎಂದು ವಿವರಿಸಿದರು.

ಉಡುಪಿ ಆರ್ಟಿಸ್ಟ್‌ ಫೋರಂ ಅಧ್ಯಕ್ಷ ರಮೇಶ್‌ ರಾವ್‌, ಹಿರಿಯ ಸದಸ್ಯ ಶಕು ಪಾಂಗಾಳ, ಉದಯವಾಣಿ ಮಂಗಳೂರು ವಲಯ ಪ್ರಬಂಧಕ ಸತೀಶ್‌ ಮಂಜೇಶ್ವರ ಉಪಸ್ಥಿತರಿದ್ದರು.

ತಾಲೂಕುಮಟ್ಟದ ವಿಜೇತರಿಗೆ ಪ್ರಶಸ್ತಿ ಪ್ರದಾನ
ಉಭಯ ಜಿಲ್ಲಾಮಟ್ಟದ ಸ್ಪರ್ಧೆಗೆ ಮುಂಚಿತವಾಗಿ ತಾಲೂಕುಮಟ್ಟದಲ್ಲಿ ಸಬ್‌ಜೂನಿಯರ್‌, ಜೂನಿಯರ್‌ ಹಾಗೂ ಸೀನಿಯರ್‌ ವಿಭಾಗಗಳಲ್ಲಿ ನಡೆದಿದ್ದ ಸ್ಪರ್ಧೆಗಳಲ್ಲಿ ಪ್ರಥಮ,ದ್ವಿತೀಯ ಹಾಗೂ ತೃತೀಯ ವಿಭಾಗಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಒಟ್ಟು 144 ವಿಜೇತ ವಿದ್ಯಾರ್ಥಿಗಳಿಗೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಉದಯವಾಣಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ವಿನೋದ್‌ ಕುಮಾರ್‌, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ, ಕೆನರಾ ಹೈಸ್ಕೂಲ್‌ ಅಸೋಸಿಯೇಶನ್‌ ಗೌರವ ಕಾರ್ಯದರ್ಶಿ ರಂಗನಾಥ ಭಟ್‌, ಮೊಡರ್ನ್ಕಿಚನ್‌ ಸಂಸ್ಥೆಯ ಮಹಾಪ್ರಬಂಧಕ ಸುಧೀಂದ್ರ ಕಾಮತ್‌, ಹ್ಯಾಂಗೋ ಸಂಸ್ಥೆಯ ಮೆನೇಜರ್‌ (ಅಪರೇಶನ್‌) ರಾಕೇಶ್‌ ಕಾಮತ್‌ ಹಾಗೂ ಆರ್ಟಿಸ್ಟ್‌ ಫೋರಂ ಉಡುಪಿ ಅಧ್ಯಕ್ಷ ರಮೇಶ್‌ ರಾವ್‌ ಅವರು ಬಹುಮಾನ ನೀಡಿ ಅಭಿನಂದಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.