Udayavani Report; ತಾಯಿ-ಮಗಳ ಛಲಕ್ಕೆ ಫ‌ಲ: ಹಾಸ್ಟೆಲ್‌ ಪ್ರವೇಶಕ್ಕೆ ಆಹ್ವಾನ

ಉದಯವಾಣಿಯಲ್ಲಿ ವರದಿಗೆ ಸಹೃದಯರಿಂದಲೂ ಸ್ಪಂದನೆ

Team Udayavani, Jun 26, 2024, 6:40 AM IST

Udayavani Report; ತಾಯಿ-ಮಗಳ ಛಲಕ್ಕೆ ಫ‌ಲ: ಹಾಸ್ಟೆಲ್‌ ಪ್ರವೇಶಕ್ಕೆ ಆಹ್ವಾನ

 ಮಂಗಳೂರು: ಹಾಸ್ಟೆಲ್‌ಗಾಗಿ ಕೆಲವು ದಿನಗಳಿಂದ ಪ್ರಯತ್ನಿಸುತ್ತಿದ್ದ ಕಡಬದ ವಿದ್ಯಾರ್ಥಿನಿ ಮತ್ತು ಆಕೆಯ ತಾಯಿಯ ಪ್ರಯತ್ನಕ್ಕೆ ಫ‌ಲ ಸಿಕ್ಕಿದ್ದು ಮಂಗಳವಾರ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಕರೆ ಮಾಡಿ ಬುಧವಾರದಂದೇ ಹಾಸ್ಟೆಲ್‌ಗೆ ಸೇರ್ಪಡೆಯಾಗಬಹುದು ಎಂದು ತಿಳಿಸಿದ್ದಾರೆ.

ಪಿಯುಸಿ ವಿದ್ಯಾಭ್ಯಾಸಕ್ಕಾಗಿ ನಗರದ ಕಾಲೇಜಿಗೆ ಸೇರ್ಪಡೆಯಾಗಿದ್ದ ಕಡಬದ ವಿದ್ಯಾರ್ಥಿನಿಗೆ ಹಾಸ್ಟೆಲ್‌ ಸಿಗದ ಕಾರಣ ಅನಾರೋಗ್ಯಕ್ಕೀಡಾದ ಆಕೆಯ ತಾಯಿ ಕೂಡ ದೂರದ ಕಡಬದಿಂದ ಪ್ರತಿದಿನ ವಿದ್ಯಾರ್ಥಿನಿ ಜತೆಗೆ ಮಂಗಳೂರು ನಗರಕ್ಕೆ ಬಂದು ಸರಕಾರಿ ಕಚೇರಿಗಳ ಬಳಿ ಸಮಯ ಕಳೆದು ವಾಪಸಾಗುತ್ತಿದ್ದರು.

ಸಮಾಜ ಕಲ್ಯಾಣ ಇಲಾಖೆಯಲ್ಲಿ ವಿಚಾರಿಸಿದಾಗ ಹಾಸ್ಟೆಲ್‌ ಪ್ರವೇಶಕ್ಕೆ ಅರ್ಜಿ ಸ್ವೀಕರಿಸಲು ಸರ್ವರ್‌ ಸಮಸ್ಯೆ ಇರುವುದಾಗಿ ತಿಳಿಸಿದ್ದರು. ಸೋಮವಾರ ಸಂಜೆ ವಿಚಾರಿಸಿದಾಗ ಅರ್ಜಿ ಸ್ವೀಕರಿಸಿ ಹಾಸ್ಟೆಲ್‌ ಒದಗಿಸುವ ಭರವಸೆ ನೀಡಿದ್ದರು. ಆದಾಗ್ಯೂ ತಾಯಿ ಮತ್ತು ಮಗಳಿಗೆ ಹಾಸ್ಟೆಲ್‌ ಚಿಂತೆ ಕಾಡುತ್ತಿತ್ತು. ಈ ಬಗ್ಗೆ ಮಂಗಳವಾರ”ಉದಯವಾಣಿ’ಯಲ್ಲಿ ವರದಿ ಪ್ರಕಟವಾಗಿತ್ತು.

ಮಂಗಳವಾರ ವಿದ್ಯಾರ್ಥಿನಿಯ ತಾಯಿಗೆ ಕರೆ ಮಾಡಿದ ಅಧಿಕಾರಿಗಳು ಹಾಸ್ಟೆಲ್‌ಗೆ ಸೇರ್ಪಡೆಯಾಗುವಂತೆ ಹೇಳಿದ್ದಾರೆ. ಇದರಿಂದ ತಾಯಿ ಮತ್ತು ಮಗಳು ಖುಷಿಪಟ್ಟಿದ್ದಾರೆ. ಶೀಘ್ರ ಹಾಸ್ಟೆಲ್‌ಗೆ ಸೇರುವುದಾಗಿಯೂ ವಿದ್ಯಾರ್ಥಿನಿ ಹರ್ಷ ವ್ಯಕ್ತಪಡಿಸಿದ್ದಾಳೆ. “ಹಾಸ್ಟೆಲ್‌ನವರು ಕರೆ ಮಾಡಿದ್ದಾರೆ. ನಾಳೆಯೇ ಬಂದು ಸೇರಿಕೊಳ್ಳಬಹುದು ಎಂದಿದ್ದಾರೆ’ ಎಂದು ವಿದ್ಯಾರ್ಥಿನಿಯ ತಾಯಿ ಪ್ರತಿಕ್ರಿಯಿಸಿದ್ದಾರೆ.

ಸ್ಪಂದನೆ
ಹಾಸ್ಟೆಲ್‌ ಸಿಗದೆ ತೊಂದರೆಯಾಗಿರುವ ಕುರಿತಾದ ವರದಿ ಗಮನಿಸಿದ ಹಲವರು ವಿದ್ಯಾರ್ಥಿನಿಯ ನೆರವಿಗೆ ಮುಂದಾಗಿದ್ದಾರೆ. ಹಾಸ್ಟೆಲ್‌ ಸಿಗುವವರೆಗೆ ತಾಯಿ, ವಿದ್ಯಾರ್ಥಿನಿಗೆ ತಂಗಲು ನಗರದಲ್ಲಿ ವ್ಯವಸ್ಥೆ ಮಾಡಿಸಿಕೊಡುವುದಾಗಿ ಕೆಲವರು ಹೇಳಿದ್ದಾರೆ. ಕೆಲವು ಮಂದಿ ಪಿಜಿ ಮಾಲಕರು ವಿದ್ಯಾರ್ಥಿನಿಗೆ ಹಾಸ್ಟೆಲ್‌ ಸಿಗುವವರೆಗೆ ಉಚಿತವಾಗಿ ಉಳಿದುಕೊಳ್ಳಲು ಅವಕಾಶ ನೀಡುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.