ಶಸ್ತ್ರಾಸ್ತ್ರ  ತೋರಿಸಿ 1.28 ಕೋ.ರೂ. ಮೌಲ್ಯದ ಚಿನ್ನಾಭರಣ ದರೋಡೆ


Team Udayavani, Sep 19, 2017, 6:15 AM IST

Robbery.jpg

ಉಡುಪಿ: ಮುಂಬಯಿಯಿಂದ ತಿರುವನಂತಪುರಕ್ಕೆ ಸಂಚರಿಸುತ್ತಿದ್ದ ನೇತ್ರಾವತಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರೋರ್ವರಿಗೆ ಶಸ್ತ್ರಾಸ್ತ್ರ ತೋರಿಸಿದ ನಾಲ್ವರು ದರೋಡೆಕೋರರು 1.28 ಕೋ.ರೂ.ಗೂ ಅಧಿಕ ಮೌಲ್ಯದ ಚಿನ್ನಾಭರಣವನ್ನು ದರೋಡೆ ಮಾಡಿದ ಘಟನೆ ಸುರತ್ಕಲ್‌ ರೈಲು ನಿಲ್ದಾಣ ಸಮೀಪ ಸೋಮವಾರ ಮುಂಜಾನೆ 6.30ರ ಸುಮಾರಿಗೆ ಸಂಭವಿಸಿದೆ.

ಮುಂಬಯಿಯ ಜುವೆಲ್ಲರಿ ಕಂಪೆನಿಯ ನೌಕರ ನಾಗಿರುವ ರಾಜೇಂದ್ರ ಸಿಂಗ್‌ (38) ದರೋಡೆಗೆ ಒಳಗಾದವರು. ಅವರಲ್ಲಿದ್ದ 1.28 ಕೋ.ರೂ.ಗೂ ಅಧಿಕ ಮೌಲ್ಯದ ಚಿನ್ನದ ಬಳೆಗಳಿದ್ದ ಸೂಟ್‌ಕೇಸ್‌, ಮೊಬೈಲನ್ನು ದರೋಡೆಕೋರರು ದೋಚಿಕೊಂಡು ಹೋಗಿದ್ದಾರೆ.

ರಾಜೇಂದ್ರ ಸಿಂಗ್‌ ಅವರು ರೈಲಿನ ಸ್ಲಿàಪರ್‌  ಕ್ಲಾಸ್‌ನ ಎಸ್‌-7 ಬೋಗಿಯಲ್ಲಿ ಪ್ರಯಾಣಿಸು ತ್ತಿದ್ದಾಗ ನಾಲ್ವರು ದರೋಡೆಕೋರರು ಪಿಸ್ತೂಲ್‌ ಹಾಗೂ ಚೂರಿ ತೋರಿಸಿ ಬೆದರಿಸಿ ಅವರ ಬಳಿಯಿದ್ದ ಚಿನ್ನದ ಬಳೆ ಹೊಂದಿದ್ದ ಸೂಟ್‌ಕೇಸನ್ನು ದೋಚಿದ್ದು, ಬಳಿಕ ಸುರತ್ಕಲ್‌ ರೈಲು ನಿಲ್ದಾಣ ತಲುಪುತ್ತಿದ್ದಂತೆ ಇಳಿದು ಪರಾರಿಯಾಗಿದ್ದಾರೆ.

ಘಟನೆ ವಿವರ: ಪೊಲೀಸ್‌ ಮೂಲಗಳ ಪ್ರಕಾರ ಅಧಿಕೃತ ಚಿನ್ನ ಸಾಗಾಟಗಾರನಾಗಿರುವ ರಾಜೇಂದ್ರ ಸಿಂಗ್‌ ಅವರ ಹೆಸರಲ್ಲಿ ಮುಂಬಯಿಯಲ್ಲಿ ನೋಂದಾಯಿತ ಕಚೇರಿಯಿದ್ದು, ಅವರು ಪನ್ವೇಲ್‌ ನಿಂದ ತಿರುವನಂತಪುರಕ್ಕೆ 4.100 ಕೆ.ಜಿ. ಚಿನ್ನದ ಬಳೆಗಳನ್ನು ಸೂಟ್‌ಕೇಸ್‌ನಲ್ಲಿ ಕೊಂಡೊಯ್ಯುತ್ತಿದ್ದರು. ಅದನ್ನು ಚೈನ್‌ನಲ್ಲಿ ಲಾಕ್‌ ಮಾಡಿ ಮಲಗಿದ್ದರು. ಸೋಮವಾರ ಬೆಳಗ್ಗಿನ ಜಾವ ಸುರತ್ಕಲ್‌ ರೈಲು ನಿಲ್ದಾಣದ ಸಮೀಪ 6.35ರಿಂದ 6.40ರ ಮಧ್ಯಾವಧಿಯಲ್ಲಿ ಹಿಂದಿ ಮಾತನಾಡುತ್ತಿದ್ದ ದರೋಡೆಕೋರರು ಸಿಂಗ್‌ ಅವರನ್ನು ಬಡಿದು ಎಚ್ಚರಿಸಿ ಚಿನ್ನದ ಬಳೆಯಿದ್ದ ಸೂಟ್‌ಕೇಸ್‌ ಅನ್ನು ಸೆಳೆದುಕೊಂಡಿದ್ದಾರೆ.

ಸೂಟ್‌ಕೇಸ್‌ ಎಳೆದ ಅನಂತರ ಮೊದಲಿಗೆ ಇಬ್ಬರು ರೈಲಿನ ಕಂಪಾರ್ಟ್‌ಮೆಂಟ್‌ನ ಬಾಗಿಲಿ ನತ್ತ ಓಡಿದರೆ, ಮತ್ತಿಬ್ಬರು ರಾಜೇಂದ್ರ ಅವರಿಗೆ ಪಿಸ್ತೂಲ್‌ ಹಾಗೂ ಚೂರಿ ಹಿಡಿದು ಬೊಬ್ಬೆ ಹಾಕ ದಂತೆ ನೋಡಿಕೊಂಡಿದ್ದು, ಸುರತ್ಕಲ್‌ ನಿಲ್ದಾಣ ಬರುತ್ತಿದ್ದಂತೆ ರೈಲಿನಿಂದ ಇಳಿದು ಪರಾರಿ ಯಾಗಿದ್ದಾರೆ. ಘಟನೆಯಿಂದ ದಂಗಾಗಿದ್ದ ರಾಜೇಂದ್ರ ಅವರು ಮಂಗಳೂರಿನ ನಿಲ್ದಾಣದಲ್ಲಿ ಇಳಿದು ರೈಲ್ವೇ ಪೊಲೀಸರಿಗೆ ತಿಳಿಸಿದ್ದು, ಬಳಿಕ ಪಡುಬಿದ್ರಿ ಠಾಣೆಗೆ ಬಂದು ದೂರು ನೀಡಿದ್ದಾರೆ. ಎಳೆದಾಡುವ ಭರದಲ್ಲಿ ರಾಜೇಂದ್ರ ಸಿಂಗ್‌ ಅವರಿಗೆ ಗಾಯಗಳಾಗಿದ್ದು, ಚೇತರಿಸಿಕೊಂಡಿದ್ದಾರೆ. 

3 ತನಿಖಾ ತಂಡ
ದರೋಡೆ ಪ್ರಕರಣ ಸಂಬಂಧ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆಗಾಗಿ ಕಾರ್ಕಳ ಉಪವಿಭಾಗದ ಎಎಸ್‌ಪಿ ರಿಷಿಕೇಶ್‌ ಸೋನಾವನೆ ಅವರ ನೇತೃತ್ವದಲ್ಲಿ 3 ತನಿಖಾ ತಂಡಗಳನ್ನು ರಚಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಸಂಜೀವ್‌ ಎಂ. ಪಾಟೀಲ್‌ ಅವರು ತಿಳಿಸಿದ್ದಾರೆ. 

ತಿಳಿದವರಿಂದ ಕೃತ್ಯ?
ಇತ್ತೀಚಿನ ದಿನಗಳಲ್ಲಿ ರೈಲಿನಲ್ಲಿ ಸಂಚರಿಸುತ್ತಿರುವ ಪ್ರಯಾಣಿಕರಿಂದ ಭಾರೀ ನಗ, ನಗದು ಕಳವುಗೈದು ಪರಾರಿಯಾಗುವ ಘಟನೆಗಳು ಹೆಚ್ಚುತ್ತಿವೆ. ಈ ಪ್ರಕರಣ ದಲ್ಲಿನ ಆರೋಪಿಗಳು ಹಿಂದಿಯಲ್ಲಿಯೇ ವ್ಯವಹರಿಸು ತ್ತಿದ್ದರು ಎಂದು ದೂರುದಾರರು ಹೇಳಿದ್ದಾರೆ. ಹಾಗಾಗಿ ದರೋಡೆಕೋರರು ಮುಂಬಯಿಯಿಂದಲೇ ಆ ವ್ಯಕ್ತಿ ಯನ್ನು ಬೆನ್ನತ್ತಿಕೊಂಡು ಬಂದಿರುವ ಸಾಧ್ಯತೆಯಿದೆ. ಇದರ ಹಿಂದೆ ವ್ಯವಸ್ಥಿತ ಜಾಲದ ಸಂಚು ಇರುವ ಕುರಿತು ಅನುಮಾನ ವ್ಯಕ್ತವಾಗಿವೆ. ಅದಲ್ಲದೆ ರಾಜೇಂದ್ರ ಸಿಂಗ್‌ ಅವರ ವ್ಯವಹಾರದ ಬಗ್ಗೆ ತಿಳಿದವರೇ ಕೃತ್ಯ ಮಾಡಿರಬಹುದಾದ ಸಂದೇಹವೂ ಹೆಚ್ಚಿದೆ ಎಂದು ಪೊಲೀಸ್‌ ಮೂಲಗಳು ಹೇಳಿವೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.