ಉಜಿರೆ-ಧರ್ಮಸ್ಥಳ ರಸ್ತೆ: ಅಪಾಯಕಾರಿ ಮರಗಳ ತೆರವು
Team Udayavani, Apr 10, 2022, 9:55 AM IST
ಬೆಳ್ತಂಗಡಿ: ಉಜಿರೆಯಿಂದ ಧರ್ಮಸ್ಥಳಕ್ಕೆ ಸಾಗುವ ರಸ್ತೆಯಲ್ಲಿ ನೀರ ಚಿಲುಮೆಯಿಂದ ಕನ್ಯಾಡಿಯವರೆಗೆ ರಸ್ತೆ ಅಂಚಿನಲ್ಲಿ ವಾಲಿನಿಂತಿದ್ದ ಮರಗಳ ತೆರವಿಗೆ ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ.
ರಸ್ತೆ ಬದಿಯಲ್ಲಿ ಹಲವು ಅಪಾಯಕಾರಿ ಅಕೇಶಿಯ ಮರಗಳಿದ್ದವು. ಗಾಳಿ ಮಳೆ ಸಂದರ್ಭದಲ್ಲಿ ರಸ್ತೆಗೆ ಬಿದ್ದು ಸಂಚಾರ ವ್ಯತ್ಯಯ ಉಂಟಾಗುವ ಸಾಧ್ಯತೆ ಇತ್ತು. ಜತೆಗೆ ರಸ್ತೆಬದಿ ಹಾದು ಹೋಗಿರುವ ವಿದ್ಯುತ್ ತಂತಿಗೂ ಮರಗಳ ಕೊಂಬೆಗಳು ಬಿದ್ದು ತಂತಿ, ಕಂಬಗಳು ತುಂಡಾಗಿ ವಿದ್ಯುತ್ ಪೂರೈಕೆಗೆ ಸಮಸ್ಯೆ ಎದುರಾಗುವ ಸಾಧ್ಯತೆ ಇತ್ತು.
ಇದೀಗ ಈ ಭಾಗದಲ್ಲಿ ಆಗಾಗ ಮಳೆ ಸುರಿಯುವ ಕಾರಣ ಈ ಮರಗಳು ಇನ್ನಷ್ಟು ಅಪಾಯಕ್ಕೆ ಆಹ್ವಾನ ನೀಡುತ್ತಿತ್ತು. ಈ ಮರಗಳನ್ನು ಅರಣ್ಯ ಇಲಾಖೆ ತೆರವುಗೊಳಿಸುವ ಕಾರಣ ಮೆಸ್ಕಾಂಗು ನಷ್ಟದ ಪ್ರಮಾಣ ಕಡಿಮೆಯಾಗಲಿದೆ. ಕೆಲವು ವರ್ಷಗಳಿಂದ ಆಗಾಗ ಮರಗಳು ಉರುಳುವುದರಿಂದ ಮೆಸ್ಕಾಂ ಲಕ್ಷಾಂತರ ರೂ.ನಷ್ಟ ಅನುಭವಿಸುತ್ತಿತ್ತು. ಆದರೂ ಮೆಸ್ಕಾಂ ಮತ್ತು ಅರಣ್ಯ ಇಲಾಖೆ ನಡುವಿನ ಹೊಂದಾಣಿಕೆ ಕೊರತೆಯಿಂದ ಮರಗಳ ತೆರವಿಗೆ ಕ್ರಮ ಕೈಗೊಂಡಿರಲಿಲ್ಲ.
ಶನಿವಾರ ವಾಹನ ದಟ್ಟಣೆ ಇರುವ ಸಮಯದಲ್ಲೆ ಮರ ತೆರವಿಗೆ ಮುಂದಾಗಿದ್ದರಿಂದ ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಿತ್ತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bagheera Trailer: ʼರಕ್ತ ಕುಡಿಯುವ ರಾಕ್ಷಸʼ, ಜನರ ರಕ್ಷಕ.. ʼಬಘೀರʼ ಟ್ರೇಲರ್ ಔಟ್
INDvsNZ 2ನೇ ಪಂದ್ಯಕ್ಕೆ ಪಂತ್ ಅನುಮಾನ;ಕೋಚ್-ಕ್ಯಾಪ್ಟನ್ ಮೇಲೆ ಜವಾಬ್ದಾರಿ ಹಾಕಿದ ಬಿಸಿಸಿಐ
Chikkamagaluru: ಕಾಫಿನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ
BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು
Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.