Ullal: ಶಾಲೆ, ಮನೆಗಳಿಗೆ ಹಾನಿ: ಕರಾವಳಿಯಾದ್ಯಂತ ಬಿರುಸಿನ ಗಾಳಿಯ ಅಬ್ಬರ
Team Udayavani, Jul 25, 2024, 12:45 AM IST
ಉಳ್ಳಾಲ: ಗಾಳಿ ಮಳೆಗೆ ಕಲ್ಲಾಪು ಪಟ್ಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಛಾವಣಿಗೆ ಹಾನಿಯಾಗಿ ಹಂಚು ಹಾರಿ ಹೋಗಿದ್ದು, ಘಟನೆ ಸಂದರ್ಭ ವಿದ್ಯಾರ್ಥಿಗಳು ಇಲ್ಲದ ಕಾರಣ ದೊಡ್ಡ ಅವಘಡ ವೊಂದು ತಪ್ಪಿದಂತಾಗಿದೆ.
ಇನ್ನೊಂದು ಘಟನೆಯಲ್ಲಿ ಪಜೀರು ಗ್ರಾಮದ ಸಂಬಾರ ತೋಟದಲ್ಲಿ ಗಾಳಿ ಮಳೆಯಿಂದ ವಿದ್ಯುತ್ ಕಂಬಕ್ಕೆ ಮರ ಬಿದ್ದು ಮೂರು ಮನೆಗಳು ಹಾನಿಗೀಡಾಗಿವೆ.
ಕಲ್ಲಾಪು ಪಟ್ಲದ ಶಾಲೆಯ ಮೇಲ್ಮಹಡಿಗೆ ಹಂಚು ಹಾಕಿದ್ದು, ಗಾಳಿ ಬೀಸಿದ ಪರಿಣಾಮ ಹಂಚು ಹಾರಿ ಹೋಗಿದೆ. ಸ್ಥಳಕ್ಕೆ ಸ್ಥಳೀಯ ಕೌನ್ಸಿಲರ್ ಬಾಝಿಲ್ ಡಿ’ ಸೋಜಾ ಮತ್ತು ಉಳ್ಳಾಲ ನಗರಸಭೆಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಕರಾವಳಿಯಾದ್ಯಂತ ಬಿರುಸಿನ ಗಾಳಿಯ ಅಬ್ಬರ
ಜಿಲ್ಲೆಯಲ್ಲಿ ಕಳೆದ ಎರಡು-ಮೂರು ದಿನಗಳಿಂದ ಗಾಳಿಯ ಅಬ್ಬರ ಜೋರಾಗಿದೆ. ಅದರಲ್ಲೂ ಅಲ್ಲಲ್ಲಿ ಏಕಾಏಕಿ ಸುಂಟರಗಾಳಿ ಬೀಸುತ್ತಿದ್ದು, ಇದರಿಂದ ಭಾರೀ ಹಾನಿ ಸಂಭವಿಸಿದೆ. ಹಲವು ಮರ, ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಇನ್ನೂ ಕೆಲವು ದಿನ ಆಗಾಗ್ಗೆ ರಭಸವಾಗಿ ಗಾಳಿ ಬೀಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.