ಅನಧಿಕೃತ ಮೀನು ಕಾರ್ಖಾನೆ : ಕುಡಿಯುವ ನೀರಿಗೆ ತತ್ವಾರ


Team Udayavani, Mar 28, 2018, 4:46 PM IST

28-March-16.jpg

ಹೊಸಂಗಡಿ: ಮಂಜೇಶ್ವರ ಕಣ್ವತೀರ್ಥ ಪರಿಸರದಲ್ಲಿ ಎಲ್ಲ ನಿಯಮಗಳನ್ನೂ ಗಾಳಿಗೆ ತೂರಿ ನಿರ್ಮಾಣಗೊಂಡಿರುವ ಯುನೈಟೆಡ್‌ ಸೀ ಫುಡ್‌ ಮೀನು ಸಂಸ್ಕರಣ ಕಾರ್ಖಾನೆಯಿಂದ ಹೊರ ಬರುವ ರಕ್ತ ಮಿಶ್ರಿತ ತ್ಯಾಜ್ಯವನ್ನು ಅದೇ ಪರಿಸರದಲ್ಲಿ ಬಿಡುತ್ತಿರುವ ಪರಿಣಾಮವಾಗಿ ಸಮೀಪದ ಆರು ಮನೆಗಳ ಬಾವಿಯ ನೀರು ಮಲಿನಗೊಂಡಿದೆ. ಮಾತ್ರವಲ್ಲದೆ ದುರ್ಗಂಧ ಬೀರುತ್ತಿದೆ ಮತ್ತು ಸ್ಥಳೀಯ ಮಕ್ಕಳಲ್ಲಿ ತುರಿಕೆ, ಚರ್ಮರೋಗದಂತ ವಿಚಿತ್ರ ರೋಗ ಲಕ್ಷಣಗಳು ಕಂಡು ಬಂದಿವೆ ಎಂದು ಕಣ್ವತೀರ್ಥ ನಾಗರಿಕರ ಹಿತರಕ್ಷಣಾ ಸಮಿತಿ ಆರೋಪಿಸಿದೆ.

ಈ ವಿಚಾರವಾಗಿ ಈಗಾಗಲೇ ಕಾರ್ಖಾನೆಗೆ ನಾಗರಿಕರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಜಿಲ್ಲಾಧಿಕಾರಿ, ಪಂಚಾಯತ್‌ ಕಾರ್ಯದರ್ಶಿ, ಆರೋಗ್ಯ ಇಲಾಖೆ ಹಾಗು ಪರಿಸರ ಇಲಾಖೆಗಳಿಗೆ ದೂರು ನೀಡಿದ್ದಾರೆ. ಆದರೆ ಈ ವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಈ ವಿಚಾರವಾಗಿ ನೇತೃತ್ವ ವಹಿಸಿದ್ದ ಕಣ್ವತೀರ್ಥ ವಾರ್ಡ್‌ನ ಸದಸ್ಯರ ಮೇಲೆ ಈ ಹಿಂದೆ ಪಂಚಾಯತ್‌ ಆವರಣದಲ್ಲೇ ಹಲ್ಲೆ ನಡೆದಿತ್ತು. 

ಈ ಬಗ್ಗೆ ಸಭೆ ಸೇರಿದ ಹಿತರಕ್ಷಣಾ ಸಮಿತಿ ನೂತನ ಸಮಿತಿಗೆ ಚಾಲನೆ ನೀಡಿದ್ದು ಅಧ್ಯಕ್ಷರಾಗಿ ವಿಜಯ್‌ ಕುಮಾರ್‌,
ಉಪಾಧ್ಯಕ್ಷರಾಗಿ ಮಧು ಸೂದನ್‌ ಆಚಾರ್ಯ, ವಿನಯ ಭಾಸ್ಕರ್‌, ವೀಣಾ ದಯಾನಂದ, ಕಾರ್ಯದರ್ಶಿಯಾಗಿ
ಪ್ರವೀಣ್‌ ಕೆ., ಪ್ರವಿತ್‌ ಮಂತೆರೋ, ಕೋಶಾಧಿಕಾರಿಯಾಗಿ ಸೋಮಪ್ಪ ದೇವಾಡಿಗ ಹಾಗೂ 39 ಜನರ ಕಾರ್ಯ
ಕಾರಿಣಿ ಸಮಿತಿಯನ್ನು ರಚಿಸಲಾಯಿತು. ಮುಖಂಡರಾದ ತಾರಾನಾಥ, ರಾಜೇಶ್‌, ಭಗವಾನ್‌ದಾಸ್‌, ಬಾಲಕೃಷ್ಣ,
ಬಾಬು ಮಾಸ್ಟರ್‌ ಮೊದಲಾದವರು ಉಪಸ್ಥಿತರಿದ್ದರು.ಪಂಚಾಯತ್‌ ಆಡಳಿತಕ್ಕೆ ಮತ್ತೆ ದೂರು ನೀಡಿ ಸ್ಪಂದನೆ ಇಲ್ಲದಿದ್ದಲ್ಲಿ ಪಂಚಾಯತ್‌ ಕಚೇರಿಗೆ ಮುತ್ತಿಗೆ ನಡೆಸಲು ತೀರ್ಮಾನಿಸಲಾಯಿತು.

ಗೂಂಡಾಗಳಿಂದ ಬೆದರಿಕೆ
ಪಂಚಾಯತ್‌ ಆಡಳಿತ ಸಮಿತಿ ಅನಧಿಕೃತವಾಗಿ ಮೀನು ಕಾರ್ಖಾನೆಗೆ ಕಾನೂನು ಮೀರಿ ಬಹಿರಂಗ ಬೆಂಬಲ ನೀಡುತ್ತಿದ್ದು, ಕಾರ್ಖಾನೆ ಮಾಲಕರು ಗೂಂಡಾಗಳನ್ನು ಬಳಸಿ ಪ್ರತಿಭಟನಕಾರರಿಗೆ ಬೆದರಿಕೆ ನೀಡುತ್ತಿದ್ದಾರೆ. ಕೈಗಾರಿಕಾ ಅನುಮತಿ ಪತ್ರ ಇಲ್ಲ, ಆರೋಗ್ಯ ಇಲಾಖೆ, ವಿದ್ಯುತ್‌ ಇಲಾಖೆಯ ಅನುಮತಿ ಪತ್ರ ಇಲ್ಲದ ಕಾರ್ಖಾನೆ
ಪಂಚಾಯತ್‌ ವ್ಯಾಪ್ತಿಯಲ್ಲೂ ಇರುವಾಗ ಪಂಚಾಯತ್‌ ಆಡಳಿತ ಹಾಗು ರಾಜ್ಯ ಸರಕಾರ ಜನತೆಯನ್ನು ವಂಚಿಸುತ್ತಿದೆ ಎಂದು ಹಿತರಕ್ಷಣಾ ಸಮಿತಿ ಆರೋಪಿಸಿದೆ.

ಟಾಪ್ ನ್ಯೂಸ್

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.