Mangaluru ಎಲ್‌ಪಿಜಿ ಭೂಗತ ಸಂಗ್ರಹಾಗಾರ

ಕರಾವಳಿಯ 3ನೇ ಭೂಗತ ಪೆಟ್ರೋಲಿಯಂ ಉತ್ಪನ್ನ ಸಂಗ್ರಹಾಗಾರ

Team Udayavani, Oct 31, 2023, 12:34 AM IST

lpgMangaluru ಎಲ್‌ಪಿಜಿ ಭೂಗತ ಸಂಗ್ರಹಾಗಾರ

ಮಂಗಳೂರು: ಉಡುಪಿಯ ಪಾದೂರು ಹಾಗೂ ಮಂಗಳೂರಿನ ಪೆರ್ಮುದೆಯಲ್ಲಿ ಕಚ್ಚಾ ತೈಲದ ಭೂಗತ ಸಂಗ್ರಹಾಗಾರ ನಿರ್ಮಾಣಗೊಂಡಿರುವ ಸ್ವರೂಪದಲ್ಲಿಯೇ ಮೂರನೇ ಭೂಗತ ಪೆಟ್ರೋಲಿಯಂ ಉತ್ಪನ್ನ ಸಂಗ್ರಹಾಗಾರವೊಂದು ಮಂಗಳೂರಿ ನಲ್ಲಿ ನಿರ್ಮಾಣ ಗೊಳ್ಳುತ್ತಿದೆ. ಇದು ದೇಶದ ಅತೀ ದೊಡ್ಡ ಎಲ್‌ಪಿಜಿ ಅನಿಲ (ಲಿಕ್ವಿಡ್‌ ಪೆಟ್ರೋಲಿಯಂ ಗ್ಯಾಸ್‌)ಸಂಗ್ರಹಾಗಾರ ಎನಿಸಿಕೊಳ್ಳಲಿದೆ.

ಕೇಂದ್ರ ಸರಕಾರ ಸ್ವಾಮ್ಯದ ಹಿಂದೂಸ್ಥಾನ್‌ ಪೆಟ್ರೋಲಿಯಂ ಕಾರ್ಪೊರೇಶನ್‌ ಲಿ. (ಎಚ್‌ಪಿಸಿಎಲ್‌) ಆಂಧ್ರಪ್ರದೇಶದ ವಿಶಾಖಪಟ್ಟಣದ ಬಳಿಕ ಈಗ ಮಂಗಳೂರಿನಲ್ಲಿ ಭೂಗತ ಗ್ಯಾಸ್‌ ಸಂಗ್ರಹಾಗಾರ ನಿರ್ಮಿಸುತ್ತಿದೆ. ದೇಶದ ರಕ್ಷಣಾತ್ಮಕ ದೃಷ್ಟಿಯಿಂದ ತುರ್ತು ಸಂದರ್ಭದಲ್ಲಿ ಗ್ಯಾಸ್‌ ಪೂರೈಕೆಗೆ ನೆರವಾಗಲು ಕೇಂದ್ರ ಸರಕಾರ ಈ ಅನಿಲ ಸಂಗ್ರಹಾಗಾರ ಸ್ಥಾಪಿಸುತ್ತಿದ್ದು, ಡಿಸೆಂಬರ್‌ ಅಂತ್ಯಕ್ಕೆ ಲೋಕಾರ್ಪಣೆ ಗೊಳ್ಳುವ ನಿರೀಕ್ಷೆಯಿದೆ.

ಮಂಗಳೂರಿನ ವಿಶೇಷ ಆರ್ಥಿಕ ವಲಯ (ಎಂಎಸ್‌ಇಝಡ್‌) ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಈ ಸಂಗ್ರಹಾಗಾರದ ಸಾಮರ್ಥ್ಯ 80 ಸಾವಿರ ಮೆಟ್ರಿಕ್‌ ಟನ್‌. ಯೋಜನೆ ಪೂರ್ಣವಾದ ಬಳಿಕ ನವಮಂಗಳೂರು ಬಂದರು ಸನಿಹದಿಂದ ಎಲ್‌ಪಿಜಿ ಗ್ಯಾಸ್‌ನ್ನು ದೊಡ್ಡ ಹಡಗುಗಳಿಂದ ಪಡೆದು ಪೈಪ್‌ಲೈನ್‌ ಮೂಲಕ ಭೂಗತ ಸಂಗ್ರಹಾಗಾರಕ್ಕೆ ಸರಬರಾಜು ಮಾಡ ಲಾಗುತ್ತದೆ. ಸುರಂಗ ನಿರ್ಮಾಣ ಡಿಸೆಂಬರ್‌ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆಯಿದೆ.

3ನೇ ಭೂಗತ ಸಂಗ್ರಹಾಗಾರ
ಮಂಗಳೂರಿನ ಪೆರ್ಮುದೆ ಮತ್ತು ಉಡುಪಿಯ ಪಾದೂರಿನಲ್ಲಿ ಈಗಾಗಲೇ ಭೂಗತ ತೈಲ ಸಂಗ್ರಹಾಗಾರಗಳಿವೆ. ಇದನ್ನು ದೇಶದಲ್ಲಿ ತುರ್ತು ಸನ್ನಿವೇಶಕ್ಕೆ ಬಳಕೆಗಾಗಿ ಮೀಸಲಿಡಲಾಗಿದೆ. ಪೆರ್ಮುದೆಯ ಸಂಗ್ರಹಾಗಾರದ ಸಾಮರ್ಥ್ಯ 1.5 ಮಿಲಿಯ ಮೆ.ಟನ್‌ ಆಗಿದ್ದು, 1,227 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದು 2016ರಲ್ಲಿ ಕಾರ್ಯಾರಂಭಿಸಿದೆ. ಪಾದೂರಿನ ತೈಲ ಸಂಗ್ರಹಾಗಾರ 2.50 ಮಿ.ಮೆ. ಟನ್‌ ಸಾಮರ್ಥ್ಯ ಹೊಂದಿದ್ದು, 1,693 ಕೋಟಿ ರೂ.ಗಳಲ್ಲಿ ನಿರ್ಮಿಸಿದ್ದು 2018ರಲ್ಲಿ ಕಾರ್ಯಾರಂಭಿಸಿದೆ.

ಶೇ. 85ರಷ್ಟು ಪೂರ್ಣ
ಎಲ್‌ಪಿಜಿ ಭೂಗತ ಸಂಗ್ರಾಹಾಗಾರ ನಿರ್ಮಾಣಕ್ಕೆ 2018ರಲ್ಲಿ ಕೇಂದ್ರ ಒಪ್ಪಿಗೆ ನೀಡಿದ್ದು, ಬಳಿಕ ಒಂದು ವರ್ಷದಲ್ಲಿ ಕಾಮಗಾರಿ ಆರಂಭವಾಗಿದೆ. ಸಮುದ್ರ ಮಧ್ಯದಿಂದ ಭೂಗತ ಸಂಗ್ರಹಾಗಾರಕ್ಕೆ ಗ್ಯಾಸ್‌ ಪೂರೈಕೆಗೆ ಪೈಪ್‌ಲೈನ್‌ ಅಳವಡಿಕೆ ಪೂರ್ಣಗೊಂಡಿದೆ. ಭೂಗತ ಸಂಗ್ರಹಾಗಾರದಲ್ಲಿ ಅಗತ್ಯ ಕಟ್ಟಡ ನಿರ್ಮಾಣವೂ ಆಗಿದೆ. ಬೃಹತ್‌ ಬಂಡೆಕಲ್ಲನ್ನು ಕೊರೆದು ಸುರಂಗ ನಿರ್ಮಿಸಿ 500 ಮೀಟರ್‌ ಆಳದಲ್ಲಿ ಎಲ್‌ಪಿಜಿ ಸಂಗ್ರಹಾಗಾರ ನಿರ್ಮಿಸಲಾಗಿದ್ದು, ಈಗಾಗಲೇ ಶೇ. 85ರಷ್ಟು ಕಾಮಗಾರಿ ಪೂರ್ಣಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ಎಚ್‌ಪಿಸಿಎಲ್‌ ವತಿಯಿಂದ ಮಂಗಳೂರಲ್ಲಿ ದೇಶದಲ್ಲೇ ಅತೀ ದೊಡ್ಡದಾದ ಭೂಗತ ಗ್ಯಾಸ್‌ ಸಂಗ್ರಹಾಗಾರ ಯೋಜನೆಯನ್ನು ಕೈಗೊಳ್ಳಲಾಗಿದೆ. ದೇಶಕ್ಕೆ ಆಪತ್ಕಾಲದಲ್ಲಿ ನೆರವಾಗುವ ದೃಷ್ಟಿಯಿಂದ ಕೇಂದ್ರ ಸರಕಾರ ಮಂಗಳೂರಿನಲ್ಲಿ ಇದನ್ನು ನಿರ್ಮಿಸುತ್ತಿದೆ.
 -ನಳಿನ್‌ ಕುಮಾರ್‌ ಕಟೀಲು, ಸಂಸದರು ದ.ಕ.

ಟಾಪ್ ನ್ಯೂಸ್

8-ptr-bus-campaign

Udayavani Campaign: 14 ಹೊಸ ಬಸ್‌ ಓಡಾಟಕ್ಕೆ ಕೆಎಸ್‌ಆರ್‌ಟಿಸಿ ಸಿದ್ಧ

ವಿಜಯೇಂದ್ರ

Shimoga; ಸಿಎಂ ಗಮನಕ್ಕೆ ಬಾರದೆ ವಾಲ್ಮೀಕಿ ನಿಗಮ ಹಣ ಲೂಟಿ ಸಾಧ್ಯವಿಲ್ಲ: ವಿಜಯೇಂದ್ರ ಆರೋಪ

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

Postponed UGC NET, CSIR NET exam date announced

NTA; ಮುಂದೂಡಲಾಗಿದ್ದ UGC NET, CSIR NET ಪರೀಕ್ಷಾ ದಿನಾಂಕ ಪ್ರಕಟ

7-thirthahalli

Thirthahalli: ಕಳ್ಳತನಕ್ಕೆ ಬಂದವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು !

1

Renukaswamy: ಕಿರುತೆರೆಯ ಕ್ರೈಮ್‌ ಶೋನಲ್ಲಿ ಪ್ರಸಾರವಾಗಲಿದೆ ರೇಣುಕಾಸ್ವಾಮಿ ಪ್ರಕರಣದ ಕಥೆ?

ಮಮತಾ ಬ್ಯಾನರ್ಜಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ

Defamation Case: ಮಮತಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ ಬೋಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್‌ಟಿಯೂ ಅಗತ್ಯ

Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್‌ಟಿಯೂ ಅಗತ್ಯ

Google ಭಾಷಾಂತರಕ್ಕೆ ತುಳು ಸೇರ್ಪಡೆ: ಸದ್ಯ ಭಾಷಾಂತರ ಸೇವೆ ವೆಬ್‌ನಲ್ಲಿ ಮಾತ್ರವೇ ಲಭ್ಯ

Google ಭಾಷಾಂತರಕ್ಕೆ ತುಳು ಸೇರ್ಪಡೆ: ಸದ್ಯ ಭಾಷಾಂತರ ಸೇವೆ ವೆಬ್‌ನಲ್ಲಿ ಮಾತ್ರವೇ ಲಭ್ಯ

Rain ದ.ಕ.ದಲ್ಲಿ ಮಳೆ ಇಳಿಮುಖ: 3 ದಿನ “ಎಲ್ಲೋ ಅಲರ್ಟ್‌’

Rain ದ.ಕ.ದಲ್ಲಿ ಮಳೆ ಇಳಿಮುಖ: 3 ದಿನ “ಎಲ್ಲೋ ಅಲರ್ಟ್‌’

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

8-ptr-bus-campaign

Udayavani Campaign: 14 ಹೊಸ ಬಸ್‌ ಓಡಾಟಕ್ಕೆ ಕೆಎಸ್‌ಆರ್‌ಟಿಸಿ ಸಿದ್ಧ

NEET Paper Leak case: ಸಿಬಿಐನಿಂದ ಜಾರ್ಖಂಡ್‌ ಕಾಲೇಜಿನ ಪ್ರಾಂಶುಪಾಲರ ಬಂಧನ

NEET Paper Leak case: ಸಿಬಿಐನಿಂದ ಜಾರ್ಖಂಡ್‌ ಕಾಲೇಜಿನ ಪ್ರಾಂಶುಪಾಲರ ಬಂಧನ

ವಿಜಯೇಂದ್ರ

Shimoga; ಸಿಎಂ ಗಮನಕ್ಕೆ ಬಾರದೆ ವಾಲ್ಮೀಕಿ ನಿಗಮ ಹಣ ಲೂಟಿ ಸಾಧ್ಯವಿಲ್ಲ: ವಿಜಯೇಂದ್ರ ಆರೋಪ

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

Postponed UGC NET, CSIR NET exam date announced

NTA; ಮುಂದೂಡಲಾಗಿದ್ದ UGC NET, CSIR NET ಪರೀಕ್ಷಾ ದಿನಾಂಕ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.