ನಗರದಲ್ಲಿದ್ದರೂ ಅಭಿವೃದ್ಧಿಯಾಗದ ಅಂಗನವಾಡಿ ಕೇಂದ್ರ 


Team Udayavani, Dec 30, 2017, 4:01 PM IST

30-Dec-16.jpg

ಪುಂಜಾಲಕಟ್ಟೆ: ಮಕ್ಕಳಿಗೆ ರೂಪಿಸುವ ಹೊಣೆ ಹೊತ್ತಿರುವ ಅಂಗನವಾಡಿ ಕೇಂದ್ರವೇ ಸಮಸ್ಯೆಯಿಂದ ಬಳಲುತ್ತಿದೆ. ಇದೀಗ ಮಕ್ಕಳಿಗೆ ಮಾರಕವಾಗಿ ಪರಿಣಮಿಸುವ ಅಪಾಯವಿರುವುದೇ ಎಂಬುದು ಹೆತ್ತವರ ಆತಂಕ. ಆದರೆ ಇದರ ಬಗ್ಗೆ ಸಂಬಂಧಪಟ್ಟ ಇಲಾಖೆಯವರ್ಯಾರೂ ಗಮನಿಸುತ್ತಿಲ್ಲ ಎಂಬ ಬೇಸರ ಹೆತ್ತವರದ್ದು.

ಬಂಟ್ವಾಳ ಪುರಸಭೆಯ ಅವರಣದೊಳಗಿರುವ ಅಂಗನವಾಡಿ ಕೇಂದ್ರದ ಕಟ್ಟಡ ತೀರಾ ದುಃಸ್ಥಿತಿಯಲ್ಲಿದೆ. ಯಾವುದೇ ಕ್ಷಣದಲ್ಲಿ ಕುಸಿಯುವ ಭೀತಿಯಲ್ಲಿದೆ. ಇದರಿಂದ ಮಕ್ಕಳ ಜೀವಕ್ಕೆ ಅಪಾಯವಿದೆ. ಈಗಾಗಲೇ ಕಟ್ಟಡ ಕುಸಿಯುವ ಹಂತದಲ್ಲಿದೆ. ಹಂಚುಗಳು ಕಳಚಿ ಬಿದ್ದಿವೆ. ಆದ್ದರಿಂದ ಬಿಸಿಲಿಗೆ ಬಸವಳಿಯುವಂತಿದೆ. ಅನಿರೀಕ್ಷಿತವಾಗಿ ಸಣ್ಣ ಮಳೆ ಬಂದರೂ ಇಡೀ ಕೇಂದ್ರ ಈಜುಕೊಳವಾಗಲಿದೆ. ಆದರೂ ಈ ಕಷ್ಟ ಯಾರಿಗೂ ತಿಳಿಯುತ್ತಿಲ್ಲ.

ನಗರದಲ್ಲೇ ಈ ಸ್ಥಿತಿ
ಈ ಕೇಂದ್ರ ಇರುವುದು ಯಾವುದೋ ಗುಡ್ಡಗಾಡು ಪ್ರದೇಶದಲ್ಲಿಲ್ಲ. ಬಂಟ್ವಾಳ ಪುರಸಭೆಯ ಹೃದಯ ಭಾಗದಲ್ಲಿದೆ.
ಪುರಸಭೆ ಕಚೇರಿಯ ಹಿಂಭಾಗದಲ್ಲಿ ಈ ಕೇಂದ್ರವಿದೆ. ಈ ಹಿಂದೆ ಇಲ್ಲಿ 32 ಮಕ್ಕಳು ನಲಿದಾಡುತ್ತಿದ್ದರು. ಕೇಂದ್ರದ ದುಃಸ್ಥಿತಿಯಿಂದ ಮಕ್ಕಳ ಸಂಖ್ಯೆ 10ಕ್ಕೆ ಇಳಿದಿದೆ. ಕೇವಲ ಕಟ್ಟಡದ ದುಃಸ್ಥಿತಿಯಲ್ಲಷ್ಟೇ ಅಲ್ಲ, ಮೂಲ ಸೌಕರ್ಯಗಳ ಕೊರತೆ ಇದೆ. ಇದೇ ಕಾರಣದಿಂದ ಹೆತ್ತವರೂ ತಮ್ಮ ಮಕ್ಕಳನ್ನು ಇಲ್ಲಿಗೆ ಕಳುಹಿಸಲು ಹಿಂಜರಿಯುತ್ತಿದ್ದಾರೆ.

ಆಟದ ಸಾಮಗ್ರಿ ಇಲ್ಲ
ಸಾಮಾನ್ಯವಾಗಿ ಅಂಗನವಾಡಿ ಕೇಂದ್ರವೆಂದರೆ ಸ್ವಲ್ಪ ಹೊತ್ತು ಕಲಿ, ಹೆಚ್ಚು ಹೊತ್ತು ನಲಿ ಎಂಬ ಮಾತಿದೆ. ಕಲಿಸಲಿಕ್ಕೇನೋ ಜನ ಇರಬಹುದು. ಆದರೆ ಮಕ್ಕಳು ನಲಿಯಲಿಕ್ಕೆ ಆಟದ ಸಾಮಗ್ರಿ ಬೇಕು. ಆದರೆ ಈ ಕೇಂದ್ರದಲ್ಲಿ ಸಾಕಷ್ಟು ಆಟದ ಸಾಮಗ್ರಿಗಳಿಲ್ಲ.ಆದ ಕಾರಣ ಮಕ್ಕಳು ಮೂಲೆ ಹಿಡಿದು ಕುಳಿತುಕೊಳ್ಳುವುದು ಬಿಟ್ಟರೆ ಬೇರೇನೂ ಮಾಡುವಂತಿಲ್ಲ.

ಮಕ್ಕಳ ಸಂಖ್ಯೆಯ ಕೊರತೆಯನ್ನು ಮುಂದಿಟ್ಟುಕೊಂಡು ಈ ಕೇಂದ್ರವನ್ನು ಮುಚ್ಚಲು ಬಂಟ್ವಾಳ ಶಿಶು ಅಭಿವೃದ್ದಿ ಇಲಾಖೆ ಪುರಸಭೆಯ ಮುಂದೆ ಪ್ರಸ್ತಾಪವಿಟ್ಟಿತ್ತು. ಆದರೆ ಸದಸ್ಯರ ಆಕ್ಷೇಪದಿಂದ ಈ ಪ್ರಸ್ತಾಪವನ್ನು ಕೈ ಬಿಡಲಾಯಿತು. ಇದರ ಹಿನ್ನೆಲೆಯೇನೋ ಇಲಾಖೆಯೂ ಕೇಂದ್ರದ ಅಭಿವೃದ್ಧಿಗೆ ಆಸಕ್ತಿ ತಳೆದಂತೆ ತೋರುತ್ತಿಲ್ಲ ಎಂಬುದು ಸ್ಥಳೀಯರ ದೂರು.

ಪುಣ್ಯಭೂಮಿ ತುಳುನಾಡ ಸೇವಾ ಫೌಂಡೇಶನ್‌ ಇತ್ತೀಚೆಗಷ್ಟೇ ಕೇಂದ್ರಕ್ಕೆ ವತಿಯಿಂದ ಈ ಅಂಗನವಾಡಿ ಕೇಂದ್ರಕ್ಕೆ ಮಿಕ್ಸಿ ಹಾಗೂ ಆಟಿಕೆ ಒದಗಿಸಿದೆ. ಕೇಂದ್ರದ ಅಭಿವೃದ್ಧಿಗೆ ಸಂಬಂಧಪಟ್ಟ ಇಲಾಖೆಗೆ ಮನವಿ ಮಾಡಿದ್ದಾರೆ.

ಪುರಸಭೆಯ ಆಸಕ್ತಿಯೂ ಕಡಿಮೆ
ಕೇಂದ್ರ ಶಿಶು ಅಭಿವೃದ್ದಿ ಇಲಾಖೆಯ ಅಧೀನದಲ್ಲಿ ಈ ಕೇಂದ್ರವಿದ್ದರೂ ಕಟ್ಟಡದ ನಿರ್ವಹಣೆ ಪುರಸಭೆ ಸೇರಿದ್ದಾಗಿದೆ. ಎರಡು ಬಾರಿ ಕಟ್ಟಡದ ದುರಸ್ತಿಗೆ ಪುರಸಭೆಯನ್ನು ಲಿಖಿತವಾಗಿ ಗಮನ ಸೆಳೆದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪುರಸಭೆಯ ಕಾಳಜಿಯೂ ಪ್ರಶ್ನೆಗೀಡಾಗಿದೆ.

ಈ ಅಂಗನವಾಡಿ ಕೇಂದ್ರದ ಕಟ್ಟಡ ನಿರ್ವಹಣೆ ಬಂಟ್ವಾಳ ಪುರಸಭೆಗೆ ಸಂಬಂಧಿಸಿದೆ. ಮಕ್ಕಳ ಸಂಖ್ಯೆ ಇಳಿಮುಖವಾದುದರಿಂದ ಕೇಂದ್ರವನ್ನು ಮುಚ್ಚಲು ಸೂಚಿಸಲಾಗಿತ್ತು. ಪ್ರಸ್ತುತ ಹೊಸ ಕಟ್ಟಡ ನಿರ್ಮಾಣಕ್ಕೆ ಪುರಸಭೆ ಮುಖ್ಯಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಗಿದ್ದು, ನಿರ್ಮಿಸಿ ಕೊಡುವ ಭರವಸೆ ನೀಡಿದ್ದಾರೆ.
ಹಿರಿಯ ಮೇಲ್ವಿಚಾರಕಿ,
   ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಬಂಟ್ವಾಳ

 ರತ್ನದೇವ್‌ ಪುಂಜಾಲಕಟ್ಟೆ

ಟಾಪ್ ನ್ಯೂಸ್

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಉಲ್ಲೇಖೀಸಿದ ಪೋಸ್ಟ್‌: ದೂರು

Sullia: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಉಲ್ಲೇಖೀಸಿದ ಪೋಸ್ಟ್‌: ದೂರು

085

Puttur: ಕಾಂಗ್ರೆಸ್‌ ಕಾರ್ಯಕರ್ತನದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್‌

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

05856

Sullia: ಮರ್ಕಂಜ; ಕಾಣೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.