ನಿರುದ್ಯೋಗ ನಿವಾರಣೆ ಇಂದಿನ ತುರ್ತು :ದೇವನೂರು ಮಹಾದೇವ


Team Udayavani, Feb 4, 2018, 9:54 AM IST

255.jpg

ಮೂಡಬಿದಿರೆ: ಇಂದಿನ ಎಲ್ಲ ವಿಧ್ವಂಸಕತೆಯ ಮೂಲದಲ್ಲಿರುವ ನಿರುದ್ಯೋಗ ನಿವಾರಣೆ ಮಾಡಲು ರಾಜ್ಯ ಹಾಗೂ ಕೇಂದ್ರ ಸರಕಾರಗಳು ಮುಂದೆ ಬಂದು ತಮ್ಮ ಮಾತು ಉಳಿಸಿಕೊಡಬೇಕು ಎಂದು ಚಿಂತಕ, ಸಾಹಿತಿ ದೇವನೂರ ಮಹಾದೇವ ಕರೆ ನೀಡಿದರು.

ಮೂಡಬಿದಿರೆ ಶಿವರಾಮ ಕಾರಂತ ಪ್ರತಿಷ್ಠಾನ ಮತ್ತು ಮೂಡಬಿದಿರೆ ಕೋ – ಆಪರೇಟಿವ್‌ ಸರ್ವೀಸ್‌ ಬ್ಯಾಂಕ್‌ ಆಶ್ರಯದಲ್ಲಿ ಬ್ಯಾಂಕಿನ ಕಲ್ಪವೃಕ್ಷ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಶಿವರಾಮ ಕಾರಂತ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಉದ್ಯೋಗವಿಲ್ಲದೆ ಯುವಜನತೆ ದಿಕ್ಕುಕಾಣದೆ ಕುಪಿತರಾಗಿ ಮಚ್ಚು, ಬಂದೂಕು ಹಿಡಿಯುತ್ತಿ ದ್ದಾರೆ; ಅದಕ್ಕೆಲ್ಲ ಸರಕಾರಿ ಕೃಪೆಯೂ ಇರುವ ಹಾಗಿದೆ. ಆಳ್ವಿಕೆ ನಡೆಸುವವರು ಜಾತಿ, ಮತ, ಭಾಷೆ, ಗಡಿ ಮೊದಲಾದಭಾವನಾತ್ಮಕ ಭೂತಗಳನ್ನು ಕೆರಳಿಸಿ ದಿಕ್ಕು ತಪ್ಪಿಸಿ ನಿಜಕ್ಕೂನಮ್ಮನ್ನೆಲ್ಲ ಕಿತ್ತು ತಿನ್ನುವ ಅನೇಕ ಸಮಸ್ಯೆಗಳನ್ನು ಮರೆಸುತ್ತಾರೆ ಎಂಬ ಐತಿಹಾಸಿಕ ಮಾತುಗಳನ್ನು ಪುಷ್ಟೀಕರಿಸುವ ಸಂಗತಿಗಳೇ ನಡೆಯುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.

ಶಾಸ್ತ್ರಿ -ಮೋದಿ: ಹೋಲಿಕೆ ಸಲ್ಲದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ಮೋದಿ ಅವರನ್ನು ಮಾಜಿ ಪ್ರಧಾನಿ ಲಾಲ್‌ಬಹದ್ದೂರ್‌ ಶಾಸ್ತ್ರಿ ಅವರಿಗೆ ಹೋಲಿಸಲಾಗುತ್ತಿದೆ. ಶಾಸ್ತ್ರಿ ಇದ್ದಿದ್ದರೆ ಭಾರತದಲ್ಲಿ ಶೇ. 1ರಷ್ಟಿರುವ ಜನರ ಕೈಯಲ್ಲಿ ಶೇ. 73ರಷ್ಟು ಸಂಪತ್ತು ಇರುವಂತೆ ಆಗುತ್ತಿರಲಿಲ್ಲ. ಅವರ ಅಕ್ಕಪಕ್ಕ ಅಂಬಾನಿ ಸಹೋದರರು, ಅದಾನಿ ಇರುತ್ತಲೇ ಇರಲಿಲ್ಲ. ಈ ಮೂವರು ಮಹಾಶಯರು ಬ್ಯಾಂಕಿಗೆ ಮರುಪಾವತಿಸದ 3 ಲಕ್ಷ ಕೋ.ರೂ. ಸಾಲ ಮೊತ್ತವನ್ನು ಮನ್ನಾ ಮಾಡುತ್ತಲೇ ಇರಲಿಲ್ಲ ಎಂದು ದೇವನೂರು ಹೇಳಿದರು.

ಕಾರಂತ ಪುರಸ್ಕಾರ
“ದ್ವಾಪರ’ ಕೃತಿಗಾಗಿ ಕಂನಾಡಿಗ ನಾರಾಯಣ ಅವರಿಗೆ ಶಿವರಾಮ ಕಾರಂತ ಪುರಸ್ಕಾರ ಪ್ರದಾನ ಮಾಡಲಾಯಿತು. ಶಿವರಾಮ ಕಾರಂತ ಪ್ರತಿಷ್ಠಾನದ ಅಧ್ಯಕ್ಷ ಕೆ. ಅಮರನಾಥ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿ ಪ್ರಶಸ್ತಿ ಪ್ರದಾನಗೈದರು. ಅತಿಥಿಗಳಾಗಿ ಶಾಸಕ ಕೆ. ಅಭಯಚಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎನ್‌.ಆರ್‌. ವಿಶುಕುಮಾರ್‌, ದ.ಕ. ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ| ಜಿ. ಎಸ್‌. ಸಿದ್ದರಾಮಯ್ಯ ಭಾಗವಹಿಸಿದ್ದರು.

ತಮ್ಮ ಆಯ್ಕೆಯ ಕನ್ನಡ ಪುಸ್ತಕ ಓದು ಮತ್ತು ಅನಿಸಿಕೆ ವ್ಯಕ್ತಪಡಿಸುವ ವಿಶಿಷ್ಟ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ಅಮರನಾಥ ಶೆಟ್ಟಿ ವಿತರಿಸಿದರು. ಪ್ರತಿಷ್ಠಾನದ ಕೋಶಾಧಿಕಾರಿ ಕೆ. ಕೃಷ್ಣ ರಾಜ ಹೆಗ್ಡೆ ಸ್ವಾಗತಿಸಿದರು. ಪ್ರ. ಕಾರ್ಯದರ್ಶಿ ಡಾ| ಜಯಪ್ರಕಾಶ ಮಾವಿನಕುಳಿ ನಿರೂಪಿಸಿದರು. ಎಂಸಿಎಸ್‌ ಬ್ಯಾಂಕಿನ ಸಿಇಒ ಚಂದ್ರಶೇಖರ ಎಂ. ವಂದಿಸಿದರು.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.