ಬಿಡುಗಡೆಯಾಗದ ಅನುದಾನ: ಹೋರಾಟಕ್ಕೆ ನಿರ್ಧಾರ


Team Udayavani, Jul 14, 2017, 2:00 AM IST

1307svnr3ph.jpg

ಸವಣೂರು: ಬೆಳಂದೂರು ಜಿ.ಪಂ. ಹಾಗೂ ನೆಟ್ಟಣಿಗೆ ಮುಟ್ನೂರು ಜಿ.ಪಂ.ಕ್ಷೇತ್ರ ವ್ಯಾಪ್ತಿಗೆ ಸೇರಿದ ಸವಣೂರು-ಕುಮಾರಮಂಗಲ-ಮಾಡಾವು ರಸ್ತೆ ತೀರಾ ಹದಗೆಟ್ಟಿದ್ದು ಸಂಚಾರಕ್ಕೆ ಅಯೋಗ್ಯವಾಗಿದೆ.

ರಸ್ತೆ ಸರಿಪಡಿಸುವಂತೆ ಈ ಭಾಗದ ಜನಪ್ರತಿನಿಧಿಗಳಿಗೆ ಹಲವುಬಾರಿ ಮನವಿ ನೀಡಿದರೂ ಯಾವುದೇ ಪ್ರಯೋಜ ನವಾಗಿಲ್ಲ  ಎನ್ನುತ್ತಾರೆ ಇಲ್ಲಿನ ಜನರು. ಮುಖ್ಯ ರಸ್ತೆಗಳು ಅಭಿವೃದ್ಧಿ ಹೊಂದುತ್ತಿದ್ದರೂ ಈ ರಸ್ತೆ ಮಾತ್ರ 15 ವರ್ಷಗಳಿಂದ ಡಾಮರು ಕಂಡಿಲ್ಲ. ಸುತ್ತಮುತ್ತಲಿನ ರಸ್ತೆಗಳು ಅಗಲೀಕರಣ, ಡಾಮರೀಕರಣಗೊಂಡು ಅಭಿ ವೃದ್ಧಿಗೊಳ್ಳುತ್ತಿದ್ದರೂ ಸುಮಾರು 7 ಕಿ.ಮೀ ಉದ್ದದ ಈ ರಸ್ತೆ ಮಾತ್ರವಿನ್ನೂ ಅಭಿವೃದ್ಧಿಗೊಂಡಿಲ್ಲ. ಜಿ.ಪಂ. ರಸ್ತೆಯಾಗಿರುವ ಈ ರಸ್ತೆ, ಅರ್ಧ ಭಾಗ ಪುತ್ತೂರು ವಿಧಾನ ಸಭಾ ಕ್ಷೇತ್ರದ ನೆಟ್ಟಣಿಗೆ ಮುಟ್ನೂರು ಕ್ಷೇತ್ರಕ್ಕೆ ಒಳಪಟ್ಟರೆ, ಅರ್ಧಭಾಗ ಸುಳ್ಯ ವಿಧಾನಸಭಾ ಕ್ಷೇತ್ರದ ಬೆಳಂದೂರು ಕ್ಷೇತ್ರಕ್ಕೆ ಒಳಪಟ್ಟಿದೆ.

ಸವಣೂರಿನಿಂದ ಕುಚ್ಚೆಜಾಲು ಎಂಬಲ್ಲಿವರೆಗೆ ತೇಪೆ ಕಾರ್ಯ ನಡೆದಿದೆ. ಈ ರಸ್ತೆಯ ಮೂಲಕ ಮಾಡಾವು ಪುತ್ತೂರು, ಬೆಳ್ಳಾರೆ, ಪೆರ್ಲಂಪಾಡಿ ಅಮಿcನಡ್ಕ, ಮುಳ್ಳೇರಿಯ ಸಂಪರ್ಕಿಸಬಹುದಾಗಿದೆ. ರಸ್ತೆ ದುರಸ್ತಿ ಪಡಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಗ್ರಾಮ ಸಭೆಗಳಲ್ಲಿ ನಿರಂತರವಾಗಿ ಗ್ರಾಮಸ್ಥರು ಆಗ್ರಹಿ ಸುತ್ತಾ ಬಂದಿದ್ದರೂ ಇಲ್ಲಿ ತನಕ ಯಾವುದೇ ಸ್ಪಂದನೆ ದೊರೆತಿಲ್ಲ.

ಈ  ರಸ್ತೆಯಲ್ಲಿ  ಬೆಳಗ್ಗೆ  ಪುತ್ತೂರಿನಿಂದ ಹೊರಡುವ ಕೆಎಸ್‌ಆರ್‌ಟಿಸಿ ಬಸ್‌ ಮಾಡಾವು ಮೂಲಕ ಕುಮಾರಮಂಗಲ, ಸವಣೂರಾಗಿ ಮತ್ತೆ ಪುತ್ತೂರಿಗೆ ತಲುಪುತ್ತದೆ. ಸಂಜೆ  ಪುತ್ತೂರಿನಿಂದ ಹೊರಟು ಸವಣೂರು, ಕುಮಾರಮಂಗಲ ಮಾಡಾವು ಮಾರ್ಗವಾಗಿ ಬಸ್‌ ಪುನಃ ಪುತ್ತೂರಿಗೆ ಸಾಗುತ್ತದೆ. ಶಾಲಾ ಮಕ್ಕಳು ಸೇರಿದಂತೆ ಅನೇಕರು ಈ ರಸ್ತೆಯಲ್ಲಿ ಓಡಾಡುತ್ತಾರಾದರೂ ದುರಸ್ತಿ ಮಾಡದೇ ಇರುವುದು ಸಾರ್ವಜನಿಕರ ಅಸಮಾಧಾನಕ್ಕೆ  ಕಾರಣವಾಗಿದೆ.

ಹೋರಾಟಕ್ಕೆ ಸಿದ್ಧತೆ
ನಮ್ಮ  ಮನವಿಗೆ ಹಲವು ವರ್ಷಗಳಿಂದ ಯಾವುದೇ ಸ್ಪಂದನೆ ದೊರಕುತ್ತಿಲ್ಲ. ಹಲವು ಸಲ ನಾವು ಶ್ರಮ ದಾನದಿಂದ ರಸ್ತೆಯ ಹೊಂಡ ಮುಚ್ಚುವ,ಪೊದರು ಕಡಿಯುವ ಕೆಲಸವನ್ನು  ಶ್ರಮದಾನದ ಮೂಲಕ ಮಾಡುತ್ತಿದ್ದೆವು. ಈ ಬಾರಿ ನಾವು ಶ್ರಮದಾನ ಮಾಡದಿರಲು ತೀರ್ಮಾನಿಸಿದ್ದೇವೆ. ಹಲವು ಬಾರಿ ಗ್ರಾಮಸಭೆಗಳಲ್ಲಿ , ಸಾಮಾನ್ಯ ಸಭೆಗಳಲ್ಲಿ  ಈ ಕುರಿತು ನಿರ್ಣಯ ಕೈಗೊಂಡು ಸಂಬಂಧಿಸಿದವರಿಗೆ ಕಳುಹಿಸಲಾಗಿದೆ. ಆದರೂ ಯಾವುದೇ ಸೂಕ್ತ ಸ್ಪಂದನೆ ಸಿಕ್ಕಿಲ್ಲ. ಇನ್ನು ನಮಗಿರುವು ಹೋರಾಟದ ಹಾದಿ ಮಾತ್ರ. ನಾವು ಇನ್ನು  ರಸ್ತೆ ಡಾಮರೀಕರಣಕ್ಕಾಗಿ ಹೋರಾಟ ನಡೆಸುತ್ತೇವೆ ಎಂದು ಸವಣೂರು ಗ್ರಾ.ಪಂ. ಸದಸ್ಯ ಗಿರಿಶಂಕರ್‌ ಸುಲಾಯ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

1

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.