
ಬಿಡುಗಡೆಯಾಗದ ಅನುದಾನ: ಹೋರಾಟಕ್ಕೆ ನಿರ್ಧಾರ
Team Udayavani, Jul 14, 2017, 2:00 AM IST

ಸವಣೂರು: ಬೆಳಂದೂರು ಜಿ.ಪಂ. ಹಾಗೂ ನೆಟ್ಟಣಿಗೆ ಮುಟ್ನೂರು ಜಿ.ಪಂ.ಕ್ಷೇತ್ರ ವ್ಯಾಪ್ತಿಗೆ ಸೇರಿದ ಸವಣೂರು-ಕುಮಾರಮಂಗಲ-ಮಾಡಾವು ರಸ್ತೆ ತೀರಾ ಹದಗೆಟ್ಟಿದ್ದು ಸಂಚಾರಕ್ಕೆ ಅಯೋಗ್ಯವಾಗಿದೆ.
ರಸ್ತೆ ಸರಿಪಡಿಸುವಂತೆ ಈ ಭಾಗದ ಜನಪ್ರತಿನಿಧಿಗಳಿಗೆ ಹಲವುಬಾರಿ ಮನವಿ ನೀಡಿದರೂ ಯಾವುದೇ ಪ್ರಯೋಜ ನವಾಗಿಲ್ಲ ಎನ್ನುತ್ತಾರೆ ಇಲ್ಲಿನ ಜನರು. ಮುಖ್ಯ ರಸ್ತೆಗಳು ಅಭಿವೃದ್ಧಿ ಹೊಂದುತ್ತಿದ್ದರೂ ಈ ರಸ್ತೆ ಮಾತ್ರ 15 ವರ್ಷಗಳಿಂದ ಡಾಮರು ಕಂಡಿಲ್ಲ. ಸುತ್ತಮುತ್ತಲಿನ ರಸ್ತೆಗಳು ಅಗಲೀಕರಣ, ಡಾಮರೀಕರಣಗೊಂಡು ಅಭಿ ವೃದ್ಧಿಗೊಳ್ಳುತ್ತಿದ್ದರೂ ಸುಮಾರು 7 ಕಿ.ಮೀ ಉದ್ದದ ಈ ರಸ್ತೆ ಮಾತ್ರವಿನ್ನೂ ಅಭಿವೃದ್ಧಿಗೊಂಡಿಲ್ಲ. ಜಿ.ಪಂ. ರಸ್ತೆಯಾಗಿರುವ ಈ ರಸ್ತೆ, ಅರ್ಧ ಭಾಗ ಪುತ್ತೂರು ವಿಧಾನ ಸಭಾ ಕ್ಷೇತ್ರದ ನೆಟ್ಟಣಿಗೆ ಮುಟ್ನೂರು ಕ್ಷೇತ್ರಕ್ಕೆ ಒಳಪಟ್ಟರೆ, ಅರ್ಧಭಾಗ ಸುಳ್ಯ ವಿಧಾನಸಭಾ ಕ್ಷೇತ್ರದ ಬೆಳಂದೂರು ಕ್ಷೇತ್ರಕ್ಕೆ ಒಳಪಟ್ಟಿದೆ.
ಸವಣೂರಿನಿಂದ ಕುಚ್ಚೆಜಾಲು ಎಂಬಲ್ಲಿವರೆಗೆ ತೇಪೆ ಕಾರ್ಯ ನಡೆದಿದೆ. ಈ ರಸ್ತೆಯ ಮೂಲಕ ಮಾಡಾವು ಪುತ್ತೂರು, ಬೆಳ್ಳಾರೆ, ಪೆರ್ಲಂಪಾಡಿ ಅಮಿcನಡ್ಕ, ಮುಳ್ಳೇರಿಯ ಸಂಪರ್ಕಿಸಬಹುದಾಗಿದೆ. ರಸ್ತೆ ದುರಸ್ತಿ ಪಡಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಗ್ರಾಮ ಸಭೆಗಳಲ್ಲಿ ನಿರಂತರವಾಗಿ ಗ್ರಾಮಸ್ಥರು ಆಗ್ರಹಿ ಸುತ್ತಾ ಬಂದಿದ್ದರೂ ಇಲ್ಲಿ ತನಕ ಯಾವುದೇ ಸ್ಪಂದನೆ ದೊರೆತಿಲ್ಲ.
ಈ ರಸ್ತೆಯಲ್ಲಿ ಬೆಳಗ್ಗೆ ಪುತ್ತೂರಿನಿಂದ ಹೊರಡುವ ಕೆಎಸ್ಆರ್ಟಿಸಿ ಬಸ್ ಮಾಡಾವು ಮೂಲಕ ಕುಮಾರಮಂಗಲ, ಸವಣೂರಾಗಿ ಮತ್ತೆ ಪುತ್ತೂರಿಗೆ ತಲುಪುತ್ತದೆ. ಸಂಜೆ ಪುತ್ತೂರಿನಿಂದ ಹೊರಟು ಸವಣೂರು, ಕುಮಾರಮಂಗಲ ಮಾಡಾವು ಮಾರ್ಗವಾಗಿ ಬಸ್ ಪುನಃ ಪುತ್ತೂರಿಗೆ ಸಾಗುತ್ತದೆ. ಶಾಲಾ ಮಕ್ಕಳು ಸೇರಿದಂತೆ ಅನೇಕರು ಈ ರಸ್ತೆಯಲ್ಲಿ ಓಡಾಡುತ್ತಾರಾದರೂ ದುರಸ್ತಿ ಮಾಡದೇ ಇರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.
ಹೋರಾಟಕ್ಕೆ ಸಿದ್ಧತೆ
ನಮ್ಮ ಮನವಿಗೆ ಹಲವು ವರ್ಷಗಳಿಂದ ಯಾವುದೇ ಸ್ಪಂದನೆ ದೊರಕುತ್ತಿಲ್ಲ. ಹಲವು ಸಲ ನಾವು ಶ್ರಮ ದಾನದಿಂದ ರಸ್ತೆಯ ಹೊಂಡ ಮುಚ್ಚುವ,ಪೊದರು ಕಡಿಯುವ ಕೆಲಸವನ್ನು ಶ್ರಮದಾನದ ಮೂಲಕ ಮಾಡುತ್ತಿದ್ದೆವು. ಈ ಬಾರಿ ನಾವು ಶ್ರಮದಾನ ಮಾಡದಿರಲು ತೀರ್ಮಾನಿಸಿದ್ದೇವೆ. ಹಲವು ಬಾರಿ ಗ್ರಾಮಸಭೆಗಳಲ್ಲಿ , ಸಾಮಾನ್ಯ ಸಭೆಗಳಲ್ಲಿ ಈ ಕುರಿತು ನಿರ್ಣಯ ಕೈಗೊಂಡು ಸಂಬಂಧಿಸಿದವರಿಗೆ ಕಳುಹಿಸಲಾಗಿದೆ. ಆದರೂ ಯಾವುದೇ ಸೂಕ್ತ ಸ್ಪಂದನೆ ಸಿಕ್ಕಿಲ್ಲ. ಇನ್ನು ನಮಗಿರುವು ಹೋರಾಟದ ಹಾದಿ ಮಾತ್ರ. ನಾವು ಇನ್ನು ರಸ್ತೆ ಡಾಮರೀಕರಣಕ್ಕಾಗಿ ಹೋರಾಟ ನಡೆಸುತ್ತೇವೆ ಎಂದು ಸವಣೂರು ಗ್ರಾ.ಪಂ. ಸದಸ್ಯ ಗಿರಿಶಂಕರ್ ಸುಲಾಯ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.