Urwa: ಪೊಲೀಸ್‌ ಕಾನ್‌ಸ್ಟೆಬಲ್‌ಗೆ ಜೀವಬೆದರಿಕೆ, ಕೊಲೆಗೆ ಯತ್ನ: ಪ್ರಕರಣ ದಾಖಲು


Team Udayavani, Oct 2, 2024, 6:40 AM IST

2

ಮಂಗಳೂರು: ಉರ್ವ ಠಾಣೆಯ ಕಾನ್‌ಸ್ಟೆಬಲ್‌ ವೆಂಕಟೇಶ್‌ ಅವರನ್ನು ಅವಾಚ್ಯವಾಗಿ ಬೈದು ಕರ್ತವ್ಯಕ್ಕೆ ಅಡ್ಡಿಪಡಿಸಿ ಜೀವ ಬೆದರಿಕೆಯನ್ನೊಡ್ಡಿ ಕೊಲೆ ಮಾಡಲು ಪ್ರಯತ್ನಿಸಲಾಗಿದ್ದು, ಈ ಬಗ್ಗೆ ಪ್ರಕರಣ ಉರ್ವ ಠಾಣೆಯಲ್ಲಿ ದಾಖಲಾಗಿದೆ.

ಸೆ. 29ರಂದು ವೆಂಕಟೇಶ್‌ ಉರ್ವ ಠಾಣೆಯಲ್ಲಿ ಕರ್ತವ್ಯದಲ್ಲಿದ್ದಾಗ ರಾತ್ರಿ ಸುಮಾರು 10.30ರ ವೇಳೆ ಹೆಡ್‌ ಕಾನ್‌ಸ್ಟೆಬಲ್‌ ಪುಷ್ಪರಾಜ್‌ ಅವರು ಕೊಟ್ಟಾರ ಚೌಕಿಯ ಬಳಿಯ ಪಿಜಿ ಒಂದರನ್ನು ಗಲಾಟೆ ನಡೆಯುತ್ತಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ವೆಂಕಟೇಶ್‌ ಅವರು ಬೀಟ್‌ ಕರ್ತವ್ಯ ಸಿಬಂದಿಯವಾದ ಬಾಳೆಗೌಡ ಮೊಕಾಶಿ ಮತ್ತು ಎಚ್‌.ಜಿ. ರೋಹಿದಾಸ್‌ ಅವರಿಗೆ ಈ ವಿಚಾರ ತಿಳಿಸಿ, ತಾನು ಬೈಕ್‌ನಲ್ಲಿ ಸ್ಥಳಕ್ಕೆ ಬರುವುದಾಗಿ ತಿಳಿಸಿದ್ದಾರೆ. 10.40ರ ವೇಳೆಗೆ ಸ್ಥಳಕ್ಕೆ ತಲುಪಿದಾಗ ಪಿಜಿಯ ಎದುರುಗಡೆ ಏಳೆಂಟು ಮಂದಿ ಯುವಕರು ಬೈದಾಡುತ್ತಾ ಪಿಜಿಯ ಕಿಟಕಿಯ ಗಾಜಿಗೆ ಕಲ್ಲು ಹೊಡೆಯುತ್ತಿದ್ದರು. ಸಮವಸ್ತ್ರದಲ್ಲಿದ್ದ ವೆಂಕಟೇಶ್‌ ಅವರು ಅಲ್ಲಿಗೆ ತಲುಪುತಿದ್ದಂತೆ ಆ ಯುವಕರ ಗುಂಪು ಅವರನ್ನು ನೋಡಿ ಅವಾಚ್ಯ ಶಬ್ಧಗಳಿಂದ ಬೈದು ಜೀವಂತ ವಾಪಸ್‌ ಹೋಗಲು ಬಿಡುವುದಿಲ್ಲ ಎಂದು ತುಳುವಿನಲ್ಲಿ ಜೀವ ಬೆದರಿಕೆ ಹಾಕಿದ್ದಾರೆ.

ವೆಂಕಟೇಶ್‌ ಅವರಿಗೆ ನೋಡಿ ಪರಿಚಯವಿದ್ದ ಯುವಕರ ಗುಂಪಿನಲ್ಲಿದ್ದ ಅವಿನಾಶ್‌ ಎಂಬಾತ ಕಲ್ಲೊಂದನ್ನು ಬಲವಾಗಿ ಬಿಸಾಡಿದ್ದು, ಒಮ್ಮೆಲೆ ತಲೆಯನ್ನು ಹಿಂದಕ್ಕೆ ಸರಿಸಿದ ಪರಿಣಾಮ ಕಲ್ಲು ವೆಂಕಟೇಶ್‌ ಅವರು ಬಲಗಣ್ಣಿನ ಹಣೆಯ ಬಳಿ ಬಿದ್ದು ರಕ್ತ ಗಾಯವಾಗಿದೆ. ಅಲ್ಲಿದ್ದ ಇನ್ನಿಬ್ಬರಾದ ಸುಮನ್‌ ಮತ್ತು ರೋಹನ್‌ ಅವರು ಕೂಡಾ ಕಲ್ಲು ಹೊಡೆದಿದ್ದು, ವೆಂಕಟೇಶ್‌ ಅವರು ಒಮ್ಮೆಲೆ ಬಗ್ಗಿ ನೆಲದಲ್ಲಿ ಕುಳಿತ ಪರಿಣಾಮ ಕಲ್ಲುಗಳು ಅವರ ತಲೆಯ ಮೇಲಿಂದ ಹಾದುಹೋಗಿದೆ. ಅಲ್ಲಿದ್ದ ಇತರರು ಕೂಡಾ ಅವಾಚ್ಯ ಶಬ್ದಗಳಿಂದ ಬೈದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಅದೇ ವೇಳೆ ಸ್ಥಳಕ್ಕೆ ಬಂದ ಬಾಳೆಗೌಡ ಮೊಕಾಶಿ ಮತ್ತು ಎಚ್‌.ಜಿ. ರೋಹಿದಾಸ್‌ ಹಾಗೂ ಸ್ಥಳೀಯರಾದ ಚಂದ್ರು ಅವರನ್ನು ಕಂಡು ಆರೋಪಿಗಳು ಸ್ಥಳದಿಂದ ಓಡಿಹೋಗಿದ್ದಾರೆ.

ಘಟನೆಗೆ ಸಂಬಂಧಿಸಿ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

BJP FLAG

Maharashtra; ಚುನಾವಣ ಅಖಾಡ ಸಿದ್ದ: ಬಿಜೆಪಿ ಪಾಲಿಗೆ ಈ ಬಾರಿ ಭಾರೀ ಸವಾಲಿನ ಸ್ಥಿತಿ!

muniratna

Munirathna ಮನೆಯಲ್ಲಿ ಸಿಕ್ಕ ಪೆನ್‌ಡ್ರೈವ್‌ನಲ್ಲಿ ಖಾಸಗಿ ವಿಡಿಯೋ ಪತ್ತೆ?

3-hunsur

Hunsur: ವಿಚಿತ್ರ ಕರು ಜನನ

1-reee

India-US;ಆ್ಯಂಟೋನಿ ಬ್ಲಿಂಕೆನ್ ಜತೆ ಜೈಶಂಕರ್ ಮಹತ್ವದ ಮಾತುಕತೆ

ಮಾಜಿ ಅಧ್ಯಕ್ಷ, ನೊಬೆಲ್‌ ಪ್ರಶಸ್ತಿ ಪುರಸ್ಕೃತ ಜಿಮ್ಮಿ ಕಾರ್ಟರ್‌ ಗೆ 100ನೇ ವರ್ಷದ ಸಂಭ್ರಮ

ಮಾಜಿ ಅಧ್ಯಕ್ಷ, ನೊಬೆಲ್‌ ಪ್ರಶಸ್ತಿ ಪುರಸ್ಕೃತ ಜಿಮ್ಮಿ ಕಾರ್ಟರ್‌ ಗೆ 100ನೇ ವರ್ಷದ ಸಂಭ್ರಮ

police

Renukaswamy ಪ್ರಕರಣ; ಜಾಮೀನು ಪಡೆದ ಮೂವರು ಜೈಲಿನಿಂದ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bus Ticket: ಸಾಲು ಸಾಲು ರಜೆ; ನವರಾತ್ರಿಗೆ ಬಸ್‌ ಟಿಕೆಟ್‌ ದರ ಬಲು ದುಬಾರಿ !

Bus Ticket: ಸಾಲು ಸಾಲು ರಜೆ; ನವರಾತ್ರಿಗೆ ಬಸ್‌ ಟಿಕೆಟ್‌ ದರ ಬಲು ದುಬಾರಿ !

Legislative Council: ಇಂದು ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಪ್ರಕಟ ?

Legislative Council: ಇಂದು ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಪ್ರಕಟ ?

Mangaluru: ಉಗ್ರರಂತೆ ಕಳ್ಳರಿಗೂ ತರಬೇತಿ ಕೇಂದ್ರ! ಚಡ್ಡಿ ಗ್ಯಾಂಗ್‌ಗೆ ದರೋಡೆಯೇ ದೇವರು

Mangaluru: ಉಗ್ರರಂತೆ ಕಳ್ಳರಿಗೂ ತರಬೇತಿ ಕೇಂದ್ರ! ಚಡ್ಡಿ ಗ್ಯಾಂಗ್‌ಗೆ ದರೋಡೆಯೇ ದೇವರು

Mangaluru: ಪಂಜದಲ್ಲೊಬ್ಬರು ಆಧುನಿಕ ಗಾಂಧಿ

Mangaluru: ಪಂಜದಲ್ಲೊಬ್ಬರು ಆಧುನಿಕ ಗಾಂಧಿ

Protest: ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಬಂದ್‌

Protest: ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಬಂದ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

Agriculture School: ಮೊದಲ ಕೃಷಿ ಶಾಲೆ ಜಾಗದಲ್ಲಿ ಪಾನೀಯ ನಿಗಮ

Agriculture School: ಮೊದಲ ಕೃಷಿ ಶಾಲೆ ಜಾಗದಲ್ಲಿ ಪಾನೀಯ ನಿಗಮ

4

Theft Case: ಕೆಲಸಕ್ಕಿದ್ದ ಕಚೇರಿಯಲ್ಲೇ 11 ಲಕ್ಷ ಕದ್ದ ಸೆಕ್ಯುರಿಟಿ

Theft: ಓಎಲ್‌ಎಕ್ಸ್ ನಲ್ಸಿ ಕದ್ದ ಬೈಕ್‌ ಮಾರಾಟ!

Theft: ಓಎಲ್‌ಎಕ್ಸ್ ನಲ್ಸಿ ಕದ್ದ ಬೈಕ್‌ ಮಾರಾಟ!

Theft: ಮಂತ್ರಾಲಯಕ್ಕೆ ಹೋಗಿದ್ದಾಗ 1 ಕೋಟಿ ಚಿನ್ನ ಕನ್ನ !

Theft: ಮಂತ್ರಾಲಯಕ್ಕೆ ಹೋಗಿದ್ದಾಗ 1 ಕೋಟಿ ಚಿನ್ನ ಕನ್ನ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.