![9-ullala](https://www.udayavani.com/wp-content/uploads/2024/12/9-ullala-415x249.jpg)
ರ್ಯಾಲಿ ಯಶಸ್ಸಿಗೆ ಮಾಧ್ಯಮ ಬಳಸಿ: ಸುರೇಶ್ಕುಮಾರ್
Team Udayavani, Nov 6, 2017, 10:43 AM IST
![6Nov–4.jpg](https://www.udayavani.com/wp-content/uploads/2017/11/6/6Nov--4.jpg)
ಮಹಾನಗರ: ಭಾರತೀಯ ಜನತಾ ಪಾರ್ಟಿಯ ದ.ಕ.ಜಿಲ್ಲಾ ಕಾರ್ಯಕರ್ತರಿಗೆ ಮಾಧ್ಯಮ ಕಾರ್ಯಾಗಾರ ಸಂಘನಿಕೇತನದಲ್ಲಿ ಇತ್ತೀಚೆಗೆ ಜರಗಿತು.
ರಾಜಕೀಯದಲ್ಲಿ ಮಾಧ್ಯಮಗಳ ಪಾತ್ರ ಪ್ರಬಲ
ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಪ್ರಸ್ತುತ ರಾಜಕೀಯ ಕ್ಷೇತ್ರದಲ್ಲಿ ಮಾಧ್ಯಮಗಳು ಅತ್ಯಂತ ಪ್ರಬಲವಾದ ಪಾತ್ರವನ್ನು ನಿರ್ವಹಿಸುತ್ತಿದ್ದು, ಈ ಸಾಧನವನ್ನು ಬಿಜೆಪಿಯ ಜಿಲ್ಲಾ ಮಾಧ್ಯಮ ವರ್ಗದವರು ಅತ್ಯಂತ ಪರಿಣಾಮಕಾರಿಯಾಗಿ ಬಳಸಬೇಕು. ಈ ಮಾಧ್ಯಮದ ಮುಖಾಂತರ ಕೇಂದ್ರ ಸರಕಾರದ ಸಾಧನೆಗಳನ್ನು ಮತ್ತು ರಾಜ್ಯ ಸರಕಾರದ ವೈಫಲ್ಯವನ್ನು ಜನತೆಗೆ ತಿಳಿಸಿ ಮುಂದಿನ ಚುನಾವಣೆಯನ್ನು ಎದುರಿಸಬೇಕು ಎಂದರು.
ರಾಜ್ಯ ವಕ್ತಾರರಾದ ಎಸ್. ಸುರೇಶ್ ಕುಮಾರ್ ಮಾತನಾಡಿ, ರಾಜ್ಯದಲ್ಲಿ ಈಗಾಗಲೇ ಚಾಲನೆ ನೀಡಿದ ನವ ಕರ್ನಾಟಕ ಪರಿವರ್ತನ ರ್ಯಾಲಿಯನ್ನು ಜಿಲ್ಲೆಯಲ್ಲಿ ಅತ್ಯಂತ ಯಶಸ್ವಿಗೊಳಿಸಲು ಮಾಧ್ಯಮ ಕ್ಷೇತ್ರವನ್ನು ಬಳಸಿಕೊಳ್ಳಬೇಕು ಎಂದರು. ಜಿಲ್ಲೆಯ ಕ್ಷೇತ್ರಗಳ ಪ್ರಕೋಷ್ಠಗಳ ಪ್ರಮುಖರು ಮಾಧ್ಯಮಗಳನ್ನು ಯಾವ ರೀತಿಯಾಗಿ ಬಳಸಿಕೊಳ್ಳಬೇಕೆಂಬ ಮಾಹಿತಿ ನೀಡಿದರು.
ರಾಜ್ಯ ಕಾರ್ಯಕಾರಿಣಿ ಸದಸ್ಯ ಮೋನಪ್ಪ ಭಂಡಾರಿ, ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ರಾಜ್ಯ ಸಹ ವಕ್ತಾರೆ ಸುಲೋಚನಾ ಭಟ್, ಜಿಲ್ಲಾ ವಕ್ತಾರ ಜಿತೇಂದ್ರ ಕೊಟ್ಟಾರಿ, ವಿಕಾಸ್ ಪುತ್ತೂರು, ಕೃಷ್ಣರಾಜ್ ಹೆಗಡೆ ಮತ್ತು ಜಿಲ್ಲಾ ಮಾಧ್ಯಮ ಪ್ರಮುಖ್ ರಾಜೇಶ್ ಕೊಟ್ಟಾರಿಯವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![9-ullala](https://www.udayavani.com/wp-content/uploads/2024/12/9-ullala-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![9-ullala](https://www.udayavani.com/wp-content/uploads/2024/12/9-ullala-150x90.jpg)
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
![BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ](https://www.udayavani.com/wp-content/uploads/2024/12/virat-150x87.jpg)
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
![6](https://www.udayavani.com/wp-content/uploads/2024/12/6-36-150x80.jpg)
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
![8-belthangady](https://www.udayavani.com/wp-content/uploads/2024/12/8-belthangady-150x90.jpg)
Belthangady: ಕ್ರಿಸ್ಮಸ್ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು
![5(1](https://www.udayavani.com/wp-content/uploads/2024/12/51-2-150x80.jpg)
Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.