ಗ್ರಾಮ ಗ್ರಾಮಗಳಲ್ಲಿ ಲಸಿಕೆ ಅಭಿಯಾನ ಯಶಸ್ಸಾಗಬೇಕು


Team Udayavani, Mar 26, 2021, 2:09 AM IST

ಗ್ರಾಮ ಗ್ರಾಮಗಳಲ್ಲಿ ಲಸಿಕೆ ಅಭಿಯಾನ ಯಶಸ್ಸಾಗಬೇಕು

ರೊನಾದ ಮೊದಲ ಅಲೆಯ ಅವಾಂತರವನ್ನು ನಾವು ಸಾಕಷ್ಟು ಅನುಭವಿಸಿದ್ದೇವೆ. ಎರಡನೇ ಅಲೆ ಈಗಾಗಲೇ ವಕ್ಕರಿಸಿದ್ದು, ಹಲವು ಮಂದಿಗೆ ಸೋಂಕು ತಗಲಿದೆ. ಈ ನಡುವೆ ಸರಕಾರ ಕೋವಿಡ್ ನಿರೋಧಕ ಲಸಿಕೆ ವಿತರಣೆಯ ವೇಗವನ್ನು ಹೆಚ್ಚಿಸಲು ಶತಪ್ರಯತ್ನ ನಡೆಸುತ್ತಿದೆ. ಎಲ್ಲೂ ಕೊರತೆಯಾಗದಂತೆಯೂ ನೋಡಿಕೊಳ್ಳುತ್ತಿದೆ. ಕರಾವಳಿಯ ಎಲ್ಲೆಡೆ ಲಸಿಕೆ ಲಭ್ಯವಿದ್ದು, ನಗರಗಳು ಮಾತ್ರವಲ್ಲ ಗ್ರಾಮ ಗ್ರಾಮಗಳಲ್ಲೂ ಇದು ಯಶಸ್ವಿಯಾಗಬೇಕು. ಇದರಲ್ಲಿ ನಮ್ಮ, ನಿಮ್ಮೆಲ್ಲರ ಪಾತ್ರವಿದೆ. ನಮ್ಮ-ನಿಮ್ಮ ಪರಿಸರದ ಎಲ್ಲ ಅರ್ಹರು ಬೇಗನೆ ಲಸಿಕೆ ತೆಗೆದುಕೊಳ್ಳುವಂತೆ ನೋಡಿದರೆ ಎರಡನೇ ಅಲೆಯನ್ನು ತಕ್ಕ ಮಟ್ಟಿಗೆ ಎದುರಿಸಿದಂತೆಯೇ ಸರಿ.

ಕೋವಿಡ್ ತಡೆಯಲು  ಕೋವಿಡ್‌ ಲಸಿಕೆಯನ್ನು ಪ್ರತಿಯೊಬ್ಬರು ಪಡೆಯಬೇಕು. ನಾನೂ  ಲಸಿಕೆ ಹಾಕಿಸಿಕೊಂಡಿದ್ದೇನೆ. ಯಾವುದೇ ತೆರನಾದ  ಆರೋಗ್ಯ ಸಂಬಂಧಿತ  ಅಡ್ಡಪರಿಣಾಮ ಆಗಿರುವುದಿಲ್ಲ. ಪ್ರಮುಖವಾಗಿ ಹಿರಿಯರು ಹಾಗೂ ಮಧ್ಯವಯಸ್ಕರು ಲಸಿಕೆಯನ್ನು ಹಾಕಿಸಿಕೊಳ್ಳಿ ಮತ್ತು ಬೇರೆಯವರು ಹಾಕಿಸಿಕೊಳ್ಳುವಂತೆ ಪ್ರೇರೇಪಿಸಿ. – ಸ್ವಾಮಿ ಜಿತಕಾಮಾನಂದಜಿ,-ಅಧ್ಯಕ್ಷರು, ರಾಮಕೃಷ್ಣ ಮಠ ಮಂಗಳೂರು

ನಾನು ಲಸಿಕೆ ತೆಗೆದುಕೊಂಡಿದ್ದೇನೆ. ಅದು ನನ್ನ ಮೇಲೆ ಯಾವುದೇ ರೀತಿಯ ಅಡ್ಡಪರಿಣಾಮ ಬೀರಿಲ್ಲ. ಎಲ್ಲ ಹಿರಿಯ ನಾಗರಿಕರು ಕಡ್ಡಾಯವಾಗಿ  ಲಸಿಕೆ ತೆಗೆದುಕೊಳ್ಳಿರಿ. ಇದರಿಂದಾಗಿ ಕೊರೊನಾ ಸೋಂಕು ಹರಡುವಿಕೆ ನಿಯಂತ್ರಣ ಸಾಧ್ಯ. ಮನೆಯೊಳಗೆ ಆತಂಕದಲ್ಲಿ ಕಾಲ ಕಳೆಯುವ ಬದಲು ಲಸಿಕೆ ಹಾಕಿಕೊಂಡು ಆತ್ಮವಿಶ್ವಾಸದಿಂದ ಬದುಕು ಸಾಗಿಸೋಣ. ಡಾ| ಬಿ.ಎ. ವಿವೇಕ ರೈ, ವಿಶ್ರಾಂತ ಕುಲಪತಿ ಕನ್ನಡ ವಿಶ್ವವಿದ್ಯಾನಿಲಯ, ಹಂಪಿ

 

ಕೋವಿಡ್ ರೋಗ ನಿಯಂತ್ರಣದ ನಿಟ್ಟಿನಲ್ಲಿ ಉದಯವಾಣಿ ಪತ್ರಿಕೆಯು “ಲಸಿಕೆಯೇ ಶ್ರೀರಕ್ಷೆ’ ಎಂಬ ಅಭಿಯಾನವನ್ನು ಹಮ್ಮಿಕೊಂಡಿದ್ದು, ಸಾರ್ವಜನಿಕರು ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಲಸಿಕೆ ಹಾಕಿಸಿಕೊಳ್ಳುವ ಕುರಿತಂತೆ ಸಾರ್ವಜನಿಕರಿಗೆ ಇರುವ ಕೆಲವೊಂದು ಪ್ರಶ್ನೆಗಳಿಗೆ ಮಂಗಳೂರು ತಾಲೂಕು ನೋಡಲ್‌ ಅಧಿಕಾರಿ ಡಾ| ನವೀನ್‌ಚಂದ್ರ ಕುಲಾಲ್‌ ಅವರು ಉತ್ತರಿಸಿದ್ದಾರೆ.

ಅಪಘಾತವಾದ, ಹೃದಯ ಸಂಬಂಧಿ ಕಾಯಿಲೆ, ಅಸ್ತಮಾ ಇರುವ 49 ವರ್ಷದ ನಾನು ಲಸಿಕೆ ತೆಗೆದುಕೊಳ್ಳಬಹುದೇ?- ಶ್ರೀಪತಿ, ಮಂಗಳೂರು

ಸದ್ಯ ಎರಡನೇ ಹಂತದ ಲಸಿಕೆ ಅಭಿಯಾನ ನಡೆಯುತ್ತಿದ್ದು, 45ರಿಂದ 60 ವರ್ಷದೊಳಗಿನ ಅನಾರೋಗ್ಯ ಹೊಂದಿದವರು (20 ಕಾಯಿಲೆ, ನಿಗದಿತ ನಮೂನೆ ಪ್ರಮಾಣಪತ್ರ ಅಗತ್ಯ) ಲಸಿಕೆ ಪಡೆಯಲು ಅವಕಾಶವಿದೆ. ಜ್ವರ ಹೊರತುಪಡಿಸಿ ಯಾವುದೇ ಕಾಯಿಲೆ ಇದ್ದವರು ಲಸಿಕೆ ಪಡೆಯಬಹುದು.

ಕೊವಿಶೀಲ್ಡ್‌ ಮತ್ತು ಕೊವ್ಯಾಕ್ಸಿನ್‌ ವ್ಯತ್ಯಾಸ ಏನು? ಯಾವ ಲಸಿಕೆ ತೆಗೆದುಕೊಂಡರೆ ಒಳ್ಳೆಯದು?- ಪದ್ಮಲತಾ, ಮಂಗಳೂರು

ಇವೆರಡೂ ಕೋವಿಡ್‌ ರೋಗ ನಿರೋಧಕ ಲಸಿಕೆಗಳೇ ಆಗಿವೆ. ತಯಾರಿಕಾ ಕಂಪೆನಿಗಳು ಮಾತ್ರ ಬೇರೆಬೇರೆ ವಿನಾ ಯಾವುದೇ ರೀತಿಯ ವ್ಯತ್ಯಾಸ ಇಲ್ಲ. ದ.ಕ. ಜಿಲ್ಲೆಯಲ್ಲಿ ಸದ್ಯ ಕೊವಿಶೀಲ್ಡ್‌ ಮತ್ತು ಕೊವ್ಯಾಕ್ಸಿನ್‌ ಎರಡೂ ಲಸಿಕೆಗಳನ್ನು ನೀಡಲಾಗುತ್ತಿದೆ. ಇದರಲ್ಲಿ ಆಯ್ಕೆ ಮಾಡಲು ಅವಕಾಶ ಇಲ್ಲ. ಮೊದಲ ಡೋಸ್‌ ಯಾವ ಔಷಧ ತೆಗೆದುಕೊಳ್ಳಲಾಗಿದೆಯೋ ಎರಡನೇ ಬಾರಿಯೂ ಅದನ್ನೇ ತೆಗೆದುಕೊಳ್ಳಬೇಕು.

ಲಸಿಕೆ ಹಾಕಿದ ಬಳಿಕ ಆ್ಯಂಟಿಬಯಾಟಿಕ್‌ ಅಥವಾ ಇನ್ಯಾವುದೇ ಔಷಧ ತೆಗೆದುಕೊಳ್ಳಬಹುದೇ?- ವಿಷ್ಣು ಪಾಟೀಲ್‌, ಮಂಗಳೂರು

ಇತರ ಕಾಯಿಲೆಗೆ ಆ್ಯಂಟಿಬಯಾಟಿಕ್‌ ಪಡೆದುಕೊಳ್ಳಲು ಯಾವುದೇ ನಿರ್ಬಂಧವಿಲ್ಲ. ಕೋವಿಡ್‌ ನಿರೋಧಕ ಲಸಿಕೆ ತೆಗೆದುಕೊಳ್ಳುವುದರೊಂದಿಗೇ ಆ್ಯಂಟಿಬಯಾಟಿಕ್‌ ಕೂಡ ಸೇವಿಸಬಹುದು.

ಮಂಗಳೂರಿನ ಲಸಿಕೆ ಎಲ್ಲಿ ಸಿಗುತ್ತದೆ?ರಮೇಶ್‌, ಪುತ್ತೂರು

ನಗರದಲ್ಲಿ 10 ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ವೆನ್ಲಾಕ್‌ ಜಿಲ್ಲಾಸ್ಪತ್ರೆ, ಸುಮಾರು 28 ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯಲು ಅವಕಾಶ ಇದೆ.

ಎಲ್ಲ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌ಗೆ ಲಸಿಕೆ ಲಭ್ಯವಿದೆಯೇ?ಕೃಷ್ಣ, ಉಪ್ಪಿನಂಗಡಿ

ಜಿಲ್ಲೆಯ 66 ಪ್ರಾಥಮಿಕ ಆರೋಗ್ಯ ಕೇಂದ್ರ, 12 ನಗರ ಪ್ರಾ.ಆ. ಕೇಂದ್ರ, 6 ಸಮುದಾಯ ಆರೋಗ್ಯ ಕೇಂದ್ರ 4 ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆ, ಸುಮಾರು 35 ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಅಭಿಯಾನ ನಡೆಯುತ್ತಿದೆ. ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ, ಖಾಸಗಿಯಲ್ಲಿ 250 ರೂ. ನೀಡಿ ಲಸಿಕೆ ಪಡೆಯಬಹುದು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.