ಜಾನುವಾರುಗಳಿಗೂ ಲಸಿಕೆ


Team Udayavani, Jan 28, 2022, 6:48 AM IST

ಜಾನುವಾರುಗಳಿಗೂ ಲಸಿಕೆ

ಮಂಗಳೂರು: ಮನುಷ್ಯರಿಗೆ ನೀಡುವ ಕೊರೊನಾ ನಿರೋಧಕ ಲಸಿಕೆಯ ಅಭಿಯಾನ ಒಂದು ಕಡೆ ಮುಂದುವರಿಯುತ್ತಿದ್ದರೆ ಇದೀಗ ಜಾನುವಾರುಗಳಿಗೆ ಬರುವ ವಿವಿಧ ಕಾಯಿಲೆಗಳಿಗೆ ಲಸಿಕೆ ಹಾಕುವ ಅಭಿಯಾನ ಚಾಲ್ತಿಯಲ್ಲಿದೆ.

ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ದನ ಮತ್ತು ಎಮ್ಮೆಗಳಿಗೆ ಕಾಲು ಬಾಯಿ ಜ್ವರಕ್ಕೆ ಲಸಿಕೆ ಹಾಕುವ ಅಭಿಯಾನ ಮುಕ್ತಾಯಗೊಂಡಿದೆ. ಇದೀಗ ಮುಂದಿನ ಫೆಬ್ರವರಿಯಲ್ಲಿ ಹೆಣ್ಣು ಕರುಗಳಿಗೆ ಲಸಿಕೆ ಹಾಕುವ ಅಭಿಯಾನ ನಡೆಯಲಿದ್ದು, ಸಿದ್ಧತೆಗಳು ನಡೆಯುತ್ತಿವೆ.

2,40,659 ದನ, ಎಮ್ಮೆಗಳಿಗೆ ಲಸಿಕೆ

ದನ ಮತ್ತು ಎಮ್ಮೆಗಳಿಗೆ ಬರುವ ಕಾಲು ಬಾಯಿ ಜ್ವರ ರೋಗ ನಿಯಂತ್ರಿಸಲು 6 ತಿಂಗಳಿಗೊಮ್ಮೆ ಲಸಿಕೆ ನೀಡಲಾಗುತ್ತಿದೆ. ಅದರಂತೆ ಜಿಲ್ಲೆಯಲ್ಲಿ ಈ ವರ್ಷದ ಮೊದಲ ಸುತ್ತಿನ ಲಸಿಕೆ ನೀಡಿಕೆ ಈಗಾಗಲೇ ಪೂರ್ಣಗೊಂಡಿದೆ. ಒಟ್ಟು 2,39,714 ದನಗಳಿಗೆ ಮತ್ತು 936 ಎಮ್ಮೆಗಳಿಗೆ ನೀಡಲಾಗಿದೆ.

ಫೆ. 7- 15: ಕಂದು ರೋಗ  ನಿರೋಧಕ  ಲಸಿಕೆ

ಫೆಬ್ರವರಿ 7ರಿಂದ 15ರ ತನಕ ಬೂಸೆಲ್ಲೋಸಿಸ್‌ (ಕಂದು ರೋಗ ನಿರೋಧಕ) ಲಸಿಕೆಯನ್ನು 4ರಿಂದ 8 ತಿಂಗಳ ವಯೋಮಿತಿಯ ದನ ಮತ್ತು ಎಮ್ಮೆಗಳ ಹೆಣ್ಣು ಕರುಗಳಿಗೆ ನೀಡುವ ಅಭಿಯಾನ ಜಿಲ್ಲೆಯಲ್ಲಿ ನಡೆಯಲಿದೆ. ಪಶು ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ವೈದ್ಯಕೀಯ ಸಿಬಂದಿ ರೈತರ ಮನೆ  ಮನೆಗೆ ತೆರಳಿ ಉಚಿತವಾಗಿ ಈ ಲಸಿಕೆಯನ್ನು ನೀಡಲಿದ್ದಾರೆ.

ಲಸಿಕೆ ಏಕೆ?

ಹೆಣ್ಣು ಕರುಗಳು ಗರ್ಭ ಧಾರಣೆ ಮಾಡುವ ಸಂದರ್ಭದಲ್ಲಿ  ಬರುವ ರೋಗಗಳನ್ನು ನಿಯಂತ್ರಿಸಲು ಈ ಲಸಿಕೆಯನ್ನು ನೀಡಲಾಗುತ್ತದೆ. ಕಂದು ರೋಗ ತಗಲಿದರೆ  ಗರ್ಭ ಸ್ರಾವ, ಹಾಲು ಉತ್ಪತ್ತಿಯ ಮೇಲೆ ಪರಿಣಾಮ ಇತ್ಯಾದಿ ಸಮಸ್ಯೆಗಳು ಎದುರಾಗುತ್ತವೆ. ಕಂದು ರೋಗ ಪೀಡಿತ ದನ/ ಎಮ್ಮೆಗಳ ಹಾಲು ಸೇವನೆ ಮನುಷ್ಯನ  ಮೇಲೂ ಪರಿಣಾಮ ಬೀರುತ್ತದೆ. ಹಾಗಾಗಿ ಕಡ್ಡಾಯವಾಗಿ ಈ ಲಸಿಕೆಯನ್ನು ನೀಡಲಾಗುತ್ತದೆ. ಲಸಿಕೆಯು ಜೀವನ ಪರ್ಯಂತ ರೋಗ ನಿರೋಧಕ ಶಕ್ತಿಯನ್ನು ಹೊಂದಿರುತ್ತದೆ.

ಮನುಷ್ಯರು ರೋಗ ನಿರೋಧಕ ಲಸಿಕೆಯನ್ನು ಆಸ್ಪತ್ರೆಗಳಿಗೆ ಹೋಗಿ ತೆಗೆದುಕೊಳ್ಳುತ್ತಾರೆ. ಆದರೆ ಪ್ರಾಣಿಗಳಿಗೆ ಅವು ಇರುವಲ್ಲಿಗೆ ತೆರಳಿ ನೀಡಬೇಕಾಗುತ್ತದೆ. ಇಲಾಖೆಯಲ್ಲಿ ಸಿಬಂದಿ ಕೊರತೆ ಇದ್ದರೂ ದನ/ ಎಮ್ಮೆ/ ಕರು ಮತ್ತಿತರ ಅ ಲಸಿಕೆಯನ್ನು  ಕ್ಲಪ್ತ ಸಮಯದಲ್ಲಿ ಕೊಡಲಾಗುತ್ತದೆ. – ಡಾ| ಪ್ರಸನ್ನ ಕುಮಾರ್‌,  ಉಪ ನಿರ್ದೇಶಕರು, ಪಶು ವೈದ್ಕಕೀಯ ಇಲಾಖೆ, ಮಂಗಳೂರು

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.