Pension Scheme: ಉಭಯ ಜಿಲ್ಲೆಗಳಲ್ಲಿ 3.23 ಲಕ್ಷ ಫಲಾನುಭವಿಗಳು


Team Udayavani, Dec 16, 2023, 11:04 PM IST

ವಿವಿಧ ಪಿಂಚಣಿ ಯೋಜನೆ: ಉಭಯ ಜಿಲ್ಲೆಗಳಲ್ಲಿ 3.23 ಲಕ್ಷ ಫಲಾನುಭವಿಗಳು

ಮಂಗಳೂರು: ಸರಕಾರದ ವಿವಿಧ ಪಿಂಚಣಿ ಯೋಜನೆಗಳ ಮೂಲಕ ಪ್ರತಿ ತಿಂಗಳು ದಕ್ಷಿಣ ಕನ್ನಡ (1,77,026 ಮತ್ತು ಉಡುಪಿ (1,46,897) ಜಿಲ್ಲೆಯಲ್ಲಿ ಒಟ್ಟಾರೆ 3.23,923 ಫಲಾನುಭವಿಗಳು ಹಣಕಾಸು ನೆರವು ಪಡೆದು ಆರ್ಥಿಕ ಭದ್ರತೆ ಹೊಂದಿದ್ದಾರೆ.

ದುರ್ಬಲರಿಗೆ ಆಶಾಕಿರಣವಾಗಿರುವ ವಿವಿಧ ಪಿಂಚಣಿ ಯೋಜನೆಗಳಿಂದ ಬಹಳಷ್ಟು ಫಲಾನುಭವಿಗಳು ಪ್ರಯೋಜನ ಪಡೆಯುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರ ಹಿರಿಯ ನಾಗರಿಕರಿಗೆ, ವಿಧವೆಯರಿಗೆ, ವಿಕಲಚೇತನರಿಗೆ ಸೇರಿದಂತೆ ಸಮಾಜದ ವಿವಿಧ ದುರ್ಬಲರಿಗೆ ಆಸರೆಯಾಗುವ ಹಲವಾರು ಪಿಂಚಣಿ ಯೋಜನೆಗಳನ್ನು ಜಾರಿಗೆ ತಂದಿದೆ.

1534 ಮಂದಿ ಆಧಾರ್‌ ಜೋಡಣೆ ಬಾಕಿ
ದಕ್ಷಿಣ ಕನ್ನಡದಲ್ಲಿ ಎಲ್ಲ ಪಿಂಚಣಿ ಯೋಜನೆಗಳ ಮೊತ್ತವನ್ನು ಆಧಾರ್‌ ಸಂಯೋಜಿತ ಬ್ಯಾಂಕ್‌ ಖಾತೆಗೆ ಜಮಾ ಆಗುತ್ತದೆ. ಪಿಂಚಣಿ ದೊರಕಲು ಬ್ಯಾಂಕ್‌ ಖಾತೆಗೆ ಆಧಾರ್‌ ಜೋಡಣೆ ಕಡ್ಡಾಯವಾಗಿದೆ. ಆದರೆ ಜಿಲ್ಲೆಯಲ್ಲಿ 2023 ಜೂನ್‌ 1ರ ವರೆಗೆ ಸುಮಾರು 18577 ಮಂದಿ ಫಲಾನುಭವಿಗಳಿಗೆ ಬ್ಯಾಂಕ್‌ ಖಾತೆಗೆ ಆಧಾರ್‌ ಜೋಡಣೆ ಆಗದಿರುವುದು, ಬ್ಯಾಂಕ್‌ಗೆ ಕೆವೈಸಿ ನೀಡದಿರುವುದು ಮತ್ತಿತರ ಸಮಸ್ಯೆಗಳಿಂದಾಗಿ ಪಿಂಚಣಿ ಜಮೆಯಾಗಲು ತೊಂದರೆ ಆಗುತ್ತಿತ್ತು.

ಕಂದಾಯ ಇಲಾಖೆಯು ಈ ಸಮಸ್ಯೆಯನ್ನು ಅಭಿಯಾನದ ಮೂಲಕ ಸರಿಪಡಿಸುತ್ತಿದೆ. ಈ ನಿಟ್ಟಿನಲ್ಲಿ ಆಯಾ ಗ್ರಾಮಕರಣಿಕರು ಫಲಾನುಭವಿಗಳ ಮನೆ ಮನೆಗೆ ತೆರಳಿ ಅವರ ಬ್ಯಾಂಕ್‌ ಖಾತೆಗಳನ್ನು ಆಧಾರ್‌ಗೆ ಜೋಡಿಸಲು ಮತ್ತು ಕೆವೈಸಿ ಅಪ್‌ಡೇಟ್‌ ಮಾಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದರಿಂದ ಪಿಂಚಣಿ ಫಲಾನುಭವಿಗಳಿಗೆ ಸಕಾಲದಲ್ಲಿ ಪಿಂಚಣಿ ದೊರಕಲಿದ್ದು, ಪ್ರಸ್ತುತ 1,534 ಮಂದಿ ಆಧಾರ್‌ ಜೋಡಣೆ ಬಾಕಿ ಇದೆ ಶೀಘ್ರದಲ್ಲಿ ಇದು ಶೂನ್ಯಕ್ಕೆ ಬರಲಿದೆ.

ವಿವಿಧ ಯೋಜನೆ
ಸಾಮಾಜಿಕ ಭದ್ರತಾ ಯೋಜನೆಗಳು ಎಂದು ಕರೆಯಲ್ಪಡುವ ಈ ಪಿಂಚಣಿ ಯೋಜನೆಗಳ ಮೂಲಕ ಪ್ರತಿ ತಿಂಗಳು ನಿರ್ದಿಷ್ಟ ಮೊತ್ತದ ಹಣಕಾಸು ನೆರವು ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ಜಮಾ ಆಗುತ್ತದೆ. ವೃದ್ದಾಪ್ಯ ವೇತನದಡಿ ಜಿಲ್ಲೆಯಲ್ಲಿ 37,231 ಫಲಾನುಭವಿಗಳು ಪ್ರಯೋಜನ ಪಡೆಯುತ್ತಿದ್ದಾರೆ. ವಿಧವಾ ವೇತನವನ್ನು 49,062 ಫಲಾನುಭವಿಗಳು, ಅಂಗವಿಕಲ ವೇತನವನ್ನು 17,751 ಫಲಾನುಭವಿಗಳು ಇದರ ಪ್ರಯೋಜನ ಪಡೆಯುತ್ತಿದ್ದಾರೆ.

ಸಂಧ್ಯಾ ಸುರಕ್ಷಾ ವೇತನವನ್ನು ಜಿಲ್ಲೆಯಲ್ಲಿ 62,907 ಮಂದಿ, ಮನಸ್ವಿನಿ ವೇತನವನ್ನು 6,228 ಫಲಾನುಭವಿಗಳು, ಮೈತ್ರಿ ವೇತನವನ್ನು 10 ಫಲಾನುಭವಿಗಳು, ಎಂಡೋಸಲ್ಫಾನ್‌ ವೇತನ 3,808 ಮಂದಿ, ಮೃತ ರೈತರ ಪತ್ನಿಗೆ ವಿಧವಾ ವೇತನ 28 ಫಲಾನುಭವಿಗಳು ಆ್ಯಸಿಡ್‌ ದಾಳಿಗೆ ಒಳಗಾಗಿರುವ ಮಹಿಳೆಯರಿಗೆ ಮಾಸಾಶನವನ್ನು ಒಬ್ಬರು ಪಡೆಯುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಪ್ರಕಟನೆ ತಿಳಿಸಿದೆ.

ಉಡುಪಿ ಜಿಲ್ಲೆಯ ಅಂಕಿಅಂಶ
ಸಾಮಾಜಿಕ ಭದ್ರತ ಯೋಜನೆಯಡಿಯಲ್ಲಿ ವೃದ್ಧಾಪ್ಯ ವೇತನವನ್ನು 29,939, ಅಂಗವಿಕಲ ವೇತನವನ್ನು 14,009, ವಿಧವಾ ವೇತನ 35093, ಸಂಧ್ಯಾ ಸುರಕ್ಷಾ ವೇತನ 63,823, ಮನಸ್ವಿನಿ ವೇತನವನ್ನು 4005 ಹಾಗೂ ಮೈತ್ರಿ ವೇತನವನ್ನು 28 ಫ‌ಲಾನುಭವಿಗಳು ಸೇರಿದಂತೆ ಜಿಲ್ಲೆಯ 1,46,897 ಫ‌ಲಾನುಭವಿಗಳು ವಿವಿಧ ಪಿಂಚಣಿ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಬ್ಯಾಂಕ್‌ ಖಾತೆಗೆ ಆಧಾರ್‌ ಜೋಡಣೆ ಆಗದಿರುವುದು, ಬ್ಯಾಂಕ್‌ಗೆ ಕೆವೈಸಿ ನೀಡದಿರುವುದು ಮತ್ತಿತರ ಸಮಸ್ಯೆಗಳಿಂದಾಗಿ ಸುಮಾರು 4,000 ಫ‌ಲಾನುಭವಿಗಳು ಸೇವೆಯನ್ನು ಪಡೆಯಲು ಸಮಸ್ಯೆ ಎದುರಿಸುತ್ತಿದ್ದಾರೆ.

ಟಾಪ್ ನ್ಯೂಸ್

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.