ಧರ್ಮ, ಪರಂಪರೆಯನ್ನು ಸಂರಕ್ಷಿಸೋಣ: ಡಾ| ವೀಣಾ ಬನ್ನಂಜೆ

ಗುರುಪುರ ಗೋಳಿದಡಿ ಗುತ್ತಿನ "ಗುತ್ತುದ ವರ್ಸೊದ ಪರ್ಬೊ'

Team Udayavani, Jan 18, 2023, 5:50 AM IST

ಧರ್ಮ, ಪರಂಪರೆಯನ್ನು ಸಂರಕ್ಷಿಸೋಣ: ಡಾ| ವೀಣಾ ಬನ್ನಂಜೆ

ಮಂಗಳೂರು: ಗುತ್ತು, ಚಾವಡಿ ಸಹಿತ ನಮ್ಮ ಧರ್ಮ ಪರಂಪರೆಯನ್ನು ಗೌರವಿಸುತ್ತ ಅದರ ಸಂರಕ್ಷಣೆಯ ನೆಲೆಯಲ್ಲಿ ಸರ್ವರೂ ಕೈಜೋಡಿಸಬೇಕು. ಈ ನಿಟ್ಟಿನಲ್ಲಿ ಗುರುಪುರ ಗೋಳಿದಡಿಗುತ್ತಿನ ಧರ್ಮಕಾರ್ಯ ಅದ್ವಿತೀಯ ಎಂದು ಆಧ್ಯಾತ್ಮಿಕ ಚಿಂತಕರಾದ ಡಾ| ವೀಣಾ ಬನ್ನಂಜೆ ಅಭಿಪ್ರಾಯಪಟ್ಟರು.

ಗುರುಪುರ ಗೋಳಿದಡಿ ಗುತ್ತಿನ 12 ನೇ ವರ್ಷದ ಪರ್ವೋತ್ಸವ, ಗಡಿಪಟ್ಟ ಸ್ವೀಕಾರದ 12ನೇ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಜ. 19ರ ವರೆಗೆ ಗೋಳಿದಡಿಗುತ್ತು ಮನೆಯಲ್ಲಿ ಆಯೋಜಿಸಲಾಗಿರುವ “ಗುತ್ತುದ ವರ್ಸೊದ ಪರ್ಬೊ’ ಕಾರ್ಯಕ್ರಮದ ಮೊದಲ ದಿನವಾದ ಸೋಮವಾರ ನಡೆದ ಧಾರ್ಮಿಕ ಸಭೆಯಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು.

ಯಾವ ರಾಜಕೀಯದಿಂದಲೂ ಧರ್ಮ ಉದ್ಧಾರವಾಗುವುದಿಲ್ಲ. ಬದಲಾಗಿ ಧರ್ಮದಿಂದ ಮಾತ್ರ ರಾಜಕೀಯ ಉದ್ಧಾರವಾಗಬಹುದು. ಯಾಕೆಂದರೆ ರಾಜಕೀಯದಲ್ಲಿ ಫಲಾಪೇಕ್ಷೆ ಇದ್ದರೆ, ಧರ್ಮವು ಸಾತ್ವಿಕ ಗುಣ ಹೊಂದಿರುತ್ತದೆ. ಯಾವ ರಾಜಕೀಯದ ಬೆಂಬಲವಿಲ್ಲದೆ, ಓಲೈಕೆಯಿಲ್ಲದೆ ಧರ್ಮ ಸಂಸ್ಥಾಪನೆಯಲ್ಲಿ ನಾವು ತೊಡಗಬೇಕು ಎಂದರು.

ಶ್ಲಾಘನೀಯ ಕಾರ್ಯ
ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯ ವೇದ, ಆರೋಗ್ಯ ವಿಭಾಗದ ಸಲಹೆಗಾರರಾದ ಡಾ| ಡಿ.ವಿ. ಕುಮಾರಸ್ವಾಮಿ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾರಂಪರಿಕವಾದ ಹಲವು ವಿಶೇಷತೆಗಳಿವೆ. ಇದರ ಪುನರುಜ್ಜೀವನ ಕಾರ್ಯವು ವರ್ಧಮಾನ ದುರ್ಗಾಪ್ರಸಾದ್‌ ಶೆಟ್ಟಿ ಅವರ ಮೂಲಕ ನಡೆಯುತ್ತಿರುವುದು ಶ್ಲಾಘನೀಯ ಎಂದರು.

ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್‌ ಕುಮಾರ್‌ ರೈ ಮಾಲಾಡಿ ಅಧ್ಯಕ್ಷತೆ ವಹಿಸಿದ್ದರು. ತಿಂಗಳೆಬೀಡು ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ ಉದ್ಘಾಟಿಸಿದರು. ಗುಜರಾತ್‌ನ ರುದ್ರಂ ಡೈನಾಮಿಕ್ಸ್‌ನ ನಿರ್ದೇಶಕ ಕಾವೂರುಗುತ್ತು ಕೋನಾರ್ಕ್‌ ರೈ, ಕಾರಮೊಗರುಗುತ್ತು ಕೆ. ಭಾಗ್ಯರಾಜ ಆಳ್ವ, ಗುರುಪುರ ಗೋಳಿದಡಿ ಗುತ್ತಿನ ಗಡಿಕಾರರಾದ ವರ್ಧಮಾನ ದುರ್ಗಾಪ್ರಸಾದ ಶೆಟ್ಟಿ ಉಪಸ್ಥಿತರಿದ್ದರು.

ಗಡಿಕಾರರಾದ ವಸಂತ ಕುಮಾರ್‌, ರಘುರಾಮ ಮುದ್ಯ ಪೂವಣಿ, ಸದಾಶಿವ ಶೆಟ್ಟಿ ಯಾನೆ ಜಯ ಶೆಟ್ಟಿ, ಬಂಕಿ ನಾಯ್ಕರು, ರತ್ನಾಕರ ಶೆಟ್ಟಿ, ಗುಣಕರ ಆಳ್ವ ಯಾನೆ ರಾಮ ರೈ, ನಿತಿನ್‌ ಹೆಗ್ಡೆ ಯಾನೆ ತಿಮ್ಮ ಕಾವ, ಸದಾಶಿವ ಹೆಗ್ಡೆ, ವೇಣುಗೋಪಾಲ ಅರಸರು, ಗುರುಪ್ರಸಾದ್‌ ಮಾಡ, ಜಗದೀಶ ಶೆಟ್ಟಿ ಯಾನೆ ಇಂರ್ದಾಳ ಕೊರಗ ಶೆಟ್ಟಿ, ದೊಡ್ಡಣ್ಣ ಶೆಟ್ಟಿ ಹಾಜರಿದ್ದರು.
ಅಕ್ಷತಾ ನವೀನ್‌ ಶೆಟ್ಟಿ ಅವರು ಸ್ವಾಗತಿಸಿದರು. ದೀಪಾ ನವೀನ್‌ ಶೆಟ್ಟಿ ಅವರು ಪ್ರಸ್ತಾವನೈದರು. ನವೀನ್‌ ಶೆಟ್ಟಿ ಎಡೆ¾ಮಾರ್‌ ಅವರು ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.