Veerappa Moily; “ಒಂದು ದೇಶ, ಒಂದು ಚುನಾವಣೆ’ಯ ಹಿಂದೆ ದುರುದ್ದೇಶ
Team Udayavani, Apr 22, 2024, 12:22 AM IST
ಮಂಗಳೂರು: “ಒಂದು ದೇಶ, ಒಂದು ಚುನಾವಣೆ’ ತೀರ್ಮಾನದ ಹಿಂದೆ ಪ್ರಧಾನಮಂತ್ರಿ ಮೋದಿಯವರ ದುರುದ್ದೇಶವಿದೆ ಎಂದು ಕೇಂದ್ರದ ಮಾಜಿ ಸಚಿವ ಡಾ| ಎಂ. ವೀರಪ್ಪ ಮೊಯ್ಲಿ ಆರೋಪಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದೆ ಲೋಕಸಭೆಯ ಜತೆಗೆ ವಿಧಾನಸಭೆ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸಲು ಮೋದಿಯವರು ತೀರ್ಮಾನಿಸಿದ್ದಾರೆ. ಎಲ್ಲ ಮತಗಳು ಅವರ ಪಕ್ಷಕ್ಕೆ ಸಿಗುವಂತಾಗಲಿ ಎಂಬುದು ಅವರ ಉದ್ದೇಶ. ಇದರಲ್ಲಿ ಏಕಚಕ್ರಾಧಿಪತ್ಯ ಸ್ಥಾಪಿಸುವ ಹುನ್ನಾರವಿದೆ. ಇದು ಸಂವಿಧಾನದ ಮೂಲ ಆಶಯವನ್ನು ಸದೆಬಡಿಯಲಿದೆ. ಒಂದು ವೇಳೆ “ಒಂದು ದೇಶ, ಒಂದು ಚುನಾವಣೆ’ ಜಾರಿಯಾದರೆ ಚುನಾವಣೆ ನಡೆಯಲು ಒಂದು ವರ್ಷ ಬೇಕಾಗಬಹುದುಎಂದರು.
ತಂತ್ರಜ್ಞಾನಗಳು ಬೆಳೆದಂತೆ ಚುನಾವಣೆಯ ಅವಧಿ ಕಡಿಮೆಯಾಗಬೇಕಿತ್ತು. ಆದರೆ ಅವಧಿ ಹೆಚ್ಚಾಗುತ್ತಿದೆ. ಈ ರೀತಿ ವಿಳಂಬವಾಗಿ ಚುನಾವಣೆ ನಡೆಸುವುದರಿಂದ ಅಕ್ರಮಗಳಿಗೆ ಅವಕಾಶ ನೀಡಿದಂತ ಆಗುತ್ತದೆ. ಈ ಬಗ್ಗೆ ಚುನಾವಣ ಆಯೋಗ ಮತ್ತು ಮೋದಿ ಉತ್ತರಿಸಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ
Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ
Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ
Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್ ಅಲರ್ಟ್’
Trekking: ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.