ಇಂದಿನಿಂದ ವೀರರಾಣಿ ಅಬ್ಬಕ್ಕ ಉತ್ಸವ -2018
Team Udayavani, Feb 3, 2018, 10:22 AM IST
ಉಳ್ಳಾಲ: ದ.ಕ. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಅಬ್ಬಕ್ಕ ಉತ್ಸವಗಳ ಸಮಿತಿಗಳ ಆಶ್ರಯದಲ್ಲಿ ಕೊಲ್ಯ ನಾಗಮಂಡಲ ಮೈದಾನದಲ್ಲಿ ನಡೆ
ಯುವ ‘ವೀರರಾಣಿ ಅಬ್ಬಕ್ಕ ಉತ್ಸವ – 2018’ಕ್ಕೆ ಸೋಮೇಶ್ವರ ಗ್ರಾಮ ಸಂಪೂರ್ಣ ಸಿದ್ಧಗೊಂಡಿದ್ದು, ಫೆ. 3, 4ರಂದು ವಿಜೃಂಭಣೆಯಿಂದ ನಡೆಯಲಿದೆ.
ರಾ.ಹೆ. 66ರ ಬಳಿ ಇರುವ ವೇದಿಕೆಗೆ ಚಪ್ಪರ ನಿರ್ಮಾಣ ಕಾರ್ಯ ಶುಕ್ರವಾರ ಸಂಜೆ ವೇಳೆ ಮುಗಿದಿದೆ. ತಲಪಾಡಿ ಕಡೆಯಿಂದ ಕೆ.ಸಿ.ರೋಡ್ ಬಳಿ, ತೊಕ್ಕೊಟ್ಟು ಅಂಬಿಕಾ ರಸ್ತೆ ಸೇರಿದಂತೆ ಸುಮಾರು 7 ಕಡೆ ಸ್ವಾಗತ ಕಮಾನುಗಳನ್ನು ಹಾಕಲಾಗಿದೆ.
ವೇದಿಕೆ ಬಳಿ ಕುಸ್ತಿ ಪಂದ್ಯಾಟಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಿದ್ದು, ಒಂದು ಕಡೆ ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮ ನಡೆದರೆ ಇನ್ನೊಂದೆಡೆ ಕುಸ್ತಿ ಪಂದ್ಯಾಟ ನಡೆಯಲಿವೆ.
ವಿವಿಧ ಕಾರ್ಯಕ್ರಮ
ಜಾನಪದ ದಿಬ್ಬಣ, ಮಹಿಳಾ ವಿಚಾರ ಗೋಷ್ಠಿ, ಬ್ಯಾರಿ ಭಾಷಾ ಕಾರ್ಯಕ್ರಮ, ಹಾಸ್ಯರಂಜನೆ, ಕೊಂಕಣಿ ಸಾಂಸ್ಕೃತಿಕ ವೈವಿಧ್ಯ, ಬಹುಭಾಷಾ ಕವಿಗೋಷ್ಠಿ, ತುಳು ವೈಭವ, ಮಹಿಳಾ ಯಕ್ಷಗಾನ, ಯಕ್ಷರೂಪಕ, ಭರತ ನಾಟ್ಯ ಕಾರ್ಯಕ್ರಮಗಳೊಂದಿಗೆ ಕೊಳ್ನಾಡು ಮಂಚಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ವಿಶೇಷವಾಗಿ ಮಣ್ಣಿನ ಮಗಳು ಅಬ್ಬಕ್ಕ ನಾಟಕ ಗಮನ ಸೆಳೆಯಲಿದೆ.
2,500 ಆಸನ ವ್ಯವಸ್ಥೆ
ವೀರ ರಾಣಿ ಅಬ್ಬಕ್ಕ ಉತ್ಸವಕ್ಕೆ ಈ ಬಾರಿ 2,500 ಆಸನ ವ್ಯವಸ್ಥೆ ಮಾಡಲಾಗಿದೆ. ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಉತ್ಸವದ ಸ್ಥಳೀಯ ಉಸ್ತುವಾರಿ ವಹಿಸಿಕೊಂಡಿರುವ ಪದಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಮದ್ಯಸೇವಿಸಿ ತೂರಾಡುತ್ತಾ ಐಸಿಯುಗೆ ಬಂದ ಪಿಜಿ ವೈದ್ಯ!
Arkavathi: 25 ವರ್ಷಗಳ ಅಕ್ರಮ ಸುಪ್ರೀಂ ನ್ಯಾಯಮೂರ್ತಿಯವರಿಂದ ತನಿಖೆಯಾಗಲಿ: ಹರಿಪ್ರಸಾದ್
Bajpe; ಗಾಂಜಾ ಸೇವನೆ; ಮೂವರು ವಶಕ್ಕೆ
Multi level parking ಇನ್ನೆಷ್ಟು ವರ್ಷ ಬೇಕು? ಬರೀ ಪಾರ್ಕಿಂಗಲ್ಲ, ಶಾಪಿಂಗ್ ಮಾಲೂ ಇದೆ!
ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.