ಚುನಾವಣೆ ನೀತಿ ಸಂಹಿತೆಯ ನೆಪದಲ್ಲಿ ದೌರ್ಜನ್ಯ : ಐವನ್‌


Team Udayavani, Apr 17, 2018, 11:56 AM IST

ivan.jpg

ಮಂಗಳೂರು: ಚುನಾವಣಾ ನೀತಿ ಸಂಹಿತೆಯ ನೆಪದಲ್ಲಿ ಅಧಿಕಾರಿಗಳು ನಿಯಮ ಮೀರಿ ವರ್ತಿಸುತ್ತಿದ್ದು ಖಾಸಗಿ, ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳಿಗೆ ತೊಂದರೆ ನೀಡುತ್ತಿದ್ದಾರೆ. ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು. ಈ ವಿಚಾರವನ್ನು ಡಿಸಿ ಗಮನಕ್ಕೂ ತರಲಾಗುವುದು ಎಂದು ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ ಹೇಳಿದರು.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ 35 ವರ್ಷಗಳಿಂದ ತಾನು ರಾಜಕೀಯದಲ್ಲಿ ಸಕ್ರಿಯವಾಗಿದ್ದು, ಅಧಿಕಾರಿಗಳ ಇಂತಹ ವರ್ತನೆ ಕಂಡಿಲ್ಲ. ಅಧಿಕಾರಿಗಳು ಪರಿಸ್ಥಿತಿಯ ಲಾಭ ಪಡೆಯುತ್ತಿದ್ದು, ತುರ್ತು ಪರಿಸ್ಥಿತಿಯನುಭವವಾಗುತ್ತಿದೆ. ಅನಗತ್ಯವಾಗಿ ವಿಪರೀತ ತಪಾಸಣೆಯ ಮೂಲಕ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದಾರೆ ಎಂದರು.

ಮೂಡಬಿದಿರೆಯಲ್ಲಿ ಸಂಘಟನೆಯೊಂದು ವೈದ್ಯರಿಂದ ತಪಾಸಣೆಗೊಳಪಟ್ಟ ಫಲಾನುಭವಿಗಳಿಗೆ ಕನ್ನಡಕ ವಿತರಿಸಲು ಮುಂದಾದಾಗ ಅದಕ್ಕೂ ತೊಂದರೆ ನೀಡಿದ್ದಾರೆ. ಮದುವೆ ಸಮಾರಂಭ, ಚಿನ್ನ ಖರೀದಿ, ಮನೆಯ ಖರ್ಚಿಗಾಗಿ ಹಣ ಸಾಗಿಸುತ್ತಿದ್ದರೂ ಕಿರಿಕಿರಿ ನೀಡುತ್ತಿದ್ದಾರೆ. ಖಾಸಗಿ ಸಮಾರಂಭದಲ್ಲಿ ಮದ್ಯ ವಿತರಿಸಲು ಪರವಾನಿಗೆ ಬೇಕು ಎನ್ನುತ್ತಾರೆ. ಆದರೆ ನೀಡಲು ಸತಾಯಿಸುವ ಸ್ಥಿತಿ ಇದೆ. ಹೀಗಾಗಿ ಆಯೋಗಕ್ಕೆ ದೂರು ನೀಡಲು ತೀರ್ಮಾನಿಸಿದ್ದೇವೆ ಎಂದರು.

ಅಸಮಾಧಾನ ಶೀಘ್ರ ಶಮನ
ಕಾಂಗ್ರೆಸ್‌ ಪಕ್ಷವು ಒಮ್ಮತದ ತೀರ್ಮಾನದೊಂದಿಗೆ 218 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಎಲ್ಲ ನಾಯಕರು ಜತೆ ಸೇರಿ ಚುನಾವಣೆಯನ್ನು ಎದುರಿಸಲಿ ದ್ದೇವೆ. ಈ ಬಾರಿಯ ಚುನಾವಣೆ ಸತ್ಯ-ಅಸತ್ಯ, ಸರ್ವಾಧಿ ಕಾರ -ಪ್ರಜಾಪ್ರಭುತ್ವ, ಕೆಟ್ಟ ಶ್ರೀಮಂತಿಕೆ- ಬಡತನದ ಮಧ್ಯೆ ನಡೆಯಲಿದೆ. ಆಕಾಂಕ್ಷಿಗಳಲ್ಲಿ ಕೆಲವೆಡೆ ಅಸಮಾಧಾನ ವಿದ್ದರೂ ಶೀಘ್ರವೇ ಶಮನವಾಗಲಿದೆ. 130ರಿಂದ 140 ಸ್ಥಾನಗಳನ್ನು ಗೆಲ್ಲುವ ಭರವಸೆ ಇದೆ ಎಂದರು.

ಪ್ರತೀ ಬ್ಲಾಕ್‌ನಲ್ಲಿ ಪ್ರತಿಭಟನೆ
ಕಥುವಾ ಅತ್ಯಾಚಾರ ಪ್ರಕರಣ ಖಂಡಿಸಿ ಎ. 17ರಂದು ದೇಶಾದ್ಯಂತ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಯಲಿದ್ದು, ಅಂದು ಬೆಳಗ್ಗೆ 10ಕ್ಕೆ ಜಿಲ್ಲೆಯ ಎಲ್ಲ ಬ್ಲಾಕ್‌ ಕಾಂಗ್ರೆಸ್‌ ಮಟ್ಟ ದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಅವರು ತಿಳಿಸಿದರು. 

ಪ್ರತಿಭಾ ಕುಳಾç, ಜೆಸಿಂತಾ ಆಲ್ಫೆ†ಡ್‌, ಲತಾ ಸಾಲಿಯಾನ್‌, ನಝೀರ್‌ ಬಜಾಲ್‌, ಶಕುಂತಳಾ ಕಾಮತ್‌, ಪುನೀತ್‌ ಶೆಟ್ಟಿ, ನಾಗೇಂದ್ರಕುಮಾರ್‌, ಭಾಸ್ಕರ ರಾವ್‌, ಎಂ.ಪಿ. ಮನುರಾಜ್‌, ಮುದಸ್ಸಿರ್‌ ಕುದ್ರೋಳಿ ಉಪಸ್ಥಿತರಿದ್ದರು. 

ಮೂಡಬಿದಿರೆ ಕ್ಷೇತ್ರದಲ್ಲಿ ತಾನು ಅರ್ಜಿ ಸಲ್ಲಿಸಿದ್ದು ನಿಜ. ಆದರೆ ಹಾಲಿ ಶಾಸಕರಿಗೆ ಅವಕಾಶ ನೀಡಲಾಗಿದ್ದು, ತಾನು ಅವರ ಗೆಲುವಿಗಾಗಿ ಪ್ರಯತ್ನಿಸಲಿದ್ದೇನೆ. ಈಗಾಗಲೇ ತಾನು ಅಲ್ಲಿ ಅನೇಕ ಜನಪರ ಕಾರ್ಯಗಳನ್ನು ಮಾಡಿದ್ದು, ಅದು ಕೆ. ಅಭಯಚಂದ್ರ ಜೈನ್‌ ಗೆಲುವಿಗೆ ಪೂರಕವಾಗಲಿದೆ. ಮೂಡಬಿದಿರೆ ಕ್ಷೇತ್ರದಲ್ಲಿ ಪೂರ್ಣ ಪ್ರಮಾಣದಲ್ಲಿ ಪ್ರಚಾರಕ್ಕೆ ಕರೆದರೆ ಹೋಗಲು ಸಿದ್ಧ. ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಪ್ರಚಾರ ಕಾರ್ಯ ನಡೆಸಲಿದ್ದೇನೆ.
 -ಐವನ್‌ ಡಿ’ಸೋಜಾ, ವಿಧಾನ ಪರಿಷತ್‌ ಸದಸ್ಯ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.