ನೆಟ್ಟಣಿಗೆ ಮುಟ್ನೂರು ಗ್ರಾ.ಪಂ.ಗೆ ಪ್ರತಾಪಚಂದ್ರ ಭೇಟಿ


Team Udayavani, Jul 14, 2017, 2:40 AM IST

1307IRL1.jpg

ನೆಟ್ಟಣಿಗೆ ಮುಟ್ನೂರು : ಇಲ್ಲಿನ ಗ್ರಾಮ ಪಂಚಾಯತ್‌ಗೆ ವಿಧಾನಪರಿಷತ್‌ ಸದಸ್ಯ ಕೆ. ಪ್ರತಾಪಚಂದ್ರ ಶೆಟ್ಟಿ ಅವರು ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿದರು.

ವಿಧಾನಪರಿಷತ್‌ ಸದಸ್ಯ ಕೆ. ಪ್ರತಾಪ ಚಂದ್ರ ಶೆಟ್ಟಿ ಮಾತನಾಡಿ, ಜನಪರ ಯೋಜನೆಗಳನ್ನು ಸರಕಾರ ಜಾರಿಗೊಳಿಸಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತದೆ. ಕೆಲವು ತಾಂತ್ರಿಕ ಸಮಸ್ಯೆಗಳಿಂದ ಜನರಿಗೆ ತೊಂದರೆಯಾಗುತ್ತಿದೆ. ಅದಕ್ಕೆ ಪರಿಹಾರಗಳು ಇವೆ. 94ಸಿ ಮನೆಯ ಹಕ್ಕುಪತ್ರವನ್ನು ಕಂದಾಯ ಇಲಾಖೆ ನೀಡುವಾಗ ಅದರ ಜತೆಯಲ್ಲಿ ಪಹಣಿ ಪತ್ರ ನೀಡಿದಾಗ ಪಹಣಿ ಪತ್ರದ ಸಮಸ್ಯೆಗೆ ಪರಿಹಾರ ಸಿಗುತ್ತದೆ. ರಾಜ್ಯ ಗಡಿಭಾಗದ ಜನರ ಸಮಸ್ಯೆಗಳಿಗೆ ಗಡಿಭಾಗದ ಜನ ರನ್ನು ಸೇರಿಸಿ ಸಭೆ ನಡೆಸುವಂತೆ ಸಚಿವ ಎಚ್‌.ಕೆ. ಪಾಟೀಲ ಅವರಲ್ಲಿ ಹೇಳಿದ್ದೇನೆ. ಪಂಚಾಯತ್‌ಗಳಿಗೆ ಬರುವ ಅನುದಾನ ಕಡಿಮೆ ಇದೆ ಇದರ ಬಗ್ಗೆ ಸರಕಾರದ ಗಮನ ತರುವುದಾಗಿ ಹೇಳಿದರು.

ತಪ್ಪು ಕಲ್ಪನೆ 
ಶಾಸಕಿ ಶಕುಂತಳಾ ಶೆಟ್ಟಿ ಮಾತನಾಡಿ, ವಿಧಾನ ಪರಿಷತ್ತ್ ಸದಸ್ಯರು 5 ವರ್ಷಗಳಿಗೊಮ್ಮೆ ಮಾತ್ರ ಬರುತ್ತಾರೆ ಎಂಬ ತಪ್ಪು ಕಲ್ಪನೆ ಮತದಾರರಲ್ಲಿ ಇದೆ. ಪ್ರತಾಪಚಂದ್ರರು ಈಗಾಗಲೇ ಹಲವು ಪಂಚಾಯತ್‌ ಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿ ಸರಕಾರದ ಗಮನಕ್ಕೆ ತಂದಿದ್ದಾರೆ. ಸರಕಾರದಿಂದ ಬರುವ ಅನುದಾನವನ್ನು 13 ವಿಧಾನಸಭಾ ಕ್ಷೇತ್ರ ಗಳಿಗೆ ಹಂಚಬೇಕು ಎಂದರು.

ನೆಟ್ಟಣಿಗೆಮುಟ್ನೂರು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡಿದ್ದೇನೆ. ಹೆಚ್ಚಿನ ಎಲ್ಲ ರಸ್ತೆ ಅಭಿವೃದ್ಧಿಯಾಗಿದೆ. ಈಶ್ವರಮಂಗಲ ಪೊಲೀಸ್‌ ಹೊರಠಾಣೆಗೆ ಹೊಸ ಕಟ್ಟಡಕ್ಕೆ ಅನುದಾನ ಮುಂದಿನ ದಿನಗಳಲ್ಲಿ ನೀಡಲಾಗುತ್ತದೆ. ನೆರೆಯ ಗ್ರಾಮದ ಮುಡಿಪಿನಡ್ಕ -ಬಡಗನ್ನೂರು- ಸುಳ್ಯಪದವು – ಈಶ್ವರಮಂಗಲ – ಪಂಚೋಡಿ – ಗಾಳಿಮುಖ ರಸ್ತೆಯನ್ನು ಮುಖ್ಯ ಜಿಲ್ಲಾ ರಸ್ತೆಯಾಗಿ ಮಾಡುವಂತೆ ಒತ್ತಾಯಿಸಿದ್ದೇನೆ. 94ಸಿಯಲ್ಲಿ ಸುಮಾರು 5,100 ಮನೆಗಳನ್ನು ಫಲಾನುಭಗಳಿಗೆ ನೀಡಿದ್ದೇನೆ ಎಂದು ಹೇಳಿದರು.

ನೆಟ್ಟಣಿಗೆ ಮುಟ್ನೂರು ಗ್ರಾಮ ಪಂಚಾಯತ್‌ ಅಧ್ಯಕ್ಷೆ ಶಂಕರಿ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ ಮಾತನಾಡಿ, ಪ್ರತಾಪಚಂದ್ರ ಶೆಟ್ಟಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಸ್ಥಳೀಯ ಸಂಸ್ಥೆಯ ಸದಸ್ಯರ ಗೌರವಧನ ಹೆಚ್ಚಾಗಲು ಕಾರಣ ರಾಗಿದ್ದಾರೆ. ಜಿಲ್ಲಾ ಪಂಚಾಯತ್‌ಗೆ ಹೆಚ್ಚು ಅನುದಾನ ನೀಡುವಂತೆ ಸರಕಾರದ ಮೇಲೆ ಒತ್ತಡ ಹೇರುವಂತೆ ಆಗ್ರಸಿದರು.

ಪಂ. ಅಭಿವೃದ್ಧಿ ಅಧಿಕಾರಿ ಎಚ್‌.ಟಿ. ಸುನೀಲ್‌, ಪಂ. ಉಪಾಧ್ಯಕ್ಷ ಶ್ರೀರಾಮ ಪಕ್ಕಳ, ಸದಸ್ಯರಾದ ಅಬ್ದುಲ್‌ ಖಾದರ್‌, ಇಬ್ರಾಹಿಂ ಕೆ., ಕೆ.ಎಂ. ಮಹಮ್ಮದ್‌, ಗ್ರಾಮಸ್ಥರಾದ ಅಬ್ದುಲ್‌ ರಮಾನ್‌, ಅಬ್ದುಲ್‌ ಕುಂಞಿ ಮೇಲ್ಮನೆ ಸದಸ್ಯರೊಂದಿಗೆ ಚರ್ಚಿಸಿದರು. ತಾ.ಪಂ. ಸದಸ್ಯೆ ಫೌಝೀಯಾ ಇಬ್ರಾಹಿಂ ಮಾತನಾಡಿದರು.  ಮಾಯಿಲನಾಥ ಶೆಟ್ಟಿ, ಪಂಚಾಯತ್‌ ಸದಸ್ಯರಾದ ಲೀಲಾವತಿ, ಆಯಿಷಾ, ಇಂದಿರಾ ಅವರು ಅತಿಥಿಗಳನ್ನು ಗೌರವಿಸಿದರು.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

05856

Sullia: ಮರ್ಕಂಜ; ಕಾಣೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Puttur: ಬ್ಯಾಂಕ್‌ ಸಿಬಂದಿ ವಿರುದ್ಧ ಮಾನಭಂಗಕ್ಕೆ ಯತ್ನದ ಪ್ರತಿದೂರು; ಎಸ್‌ಪಿ ಭೇಟಿ

Puttur: ಬ್ಯಾಂಕ್‌ ಸಿಬಂದಿ ವಿರುದ್ಧ ಮಾನಭಂಗಕ್ಕೆ ಯತ್ನದ ಪ್ರತಿದೂರು; ಎಸ್‌ಪಿ ಭೇಟಿ

Puttur: ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನ: ದೂರು ದಾಖಲು

Puttur: ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನ: ದೂರು ದಾಖಲು

Aranthodu: ಮಿತ್ತಡ್ಕದ ಮಹಿಳೆ ನಾಪತ್ತೆ; ಬಾವಿಯಲ್ಲಿ ಹುಡುಕಾಟ

Aranthodu: ಮಿತ್ತಡ್ಕದ ಮಹಿಳೆ ನಾಪತ್ತೆ; ಬಾವಿಯಲ್ಲಿ ಹುಡುಕಾಟ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.