ವಿವೇಕಾನಂದರು ಭಾರತದ ಆತ್ಮ


Team Udayavani, Feb 13, 2017, 3:45 AM IST

12-LOC-13.jpg

ಮಂಗಳೂರು: ವಿವೇಕಾನಂದರು ಭಾರತದ ಆತ್ಮ ಇದ್ದಂತೆ. ದೇಶವನ್ನು ಸಾಂಸ್ಕೃತಿಕ, ಬೌದ್ಧಿಕ, ಆಧ್ಯಾತ್ಮಿಕವಾಗಿ ಮೇಲಕ್ಕೆತ್ತಿದ ಸಂತ ಸ್ವಾಮೀಜಿಯವರು ಎಂದು ಗುಜರಾತ್‌ನ ರಾಜಕೋಟ್‌ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಸರ್ವಸ್ಥಾನಂದಜೀ ಮಹಾರಾಜ್‌ ನುಡಿದರು.

ಯುವ ಬ್ರಿಗೇಡ್‌ ಮತ್ತು ಸೋದರಿ ನಿವೇದಿತಾ ಪ್ರತಿಷ್ಠಾನದ ಆಶ್ರಯಧಿದಲ್ಲಿ ನಗರದ ಕೇಂದ್ರ ಮೈದಾನದ ಗುಡ್ವಿನ್‌ ಮಂಟಪದಲ್ಲಿ ಎರಡು ದಿನಗಳ ಕಾಲ ನಡೆದ ಸ್ವಾಮಿ ವಿವೇಕಾನಂದ ಅಕ್ಕ ನಿವೇದಿತಾ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾಧಿರಂಭದಲ್ಲಿ ಅವರು ರವಿಧಿವಾರ ಮಾತನಾಡಿದರು. ವಿವೇಕಾನಂದರನ್ನು ಅರ್ಥೈಸಿಧಿಕೊಳ್ಳದೇ ಭಾರತವನ್ನು ಅರ್ಥೈಸಿಕೊಳ್ಳಲು ಸಾಧ್ಯವಿಲ್ಲ. ದೇಶದ ಶ್ರೇಷ್ಠ ಪರಂಪರೆ, ಆಧ್ಯಾತ್ಮಿಕ ಸಂಸ್ಕೃತಿಯನ್ನು ಜಗತ್ತಿಗೇ ಬೋಧಿಸಿದ ಮಹಾನ್‌ ಪ್ರೇರಕ ಶಕ್ತಿ ಅವರು. ಯುವಕರ ಮೇಲೆ ಅವರು ಇಟ್ಟ ನಂಬಿಕೆ ಅಪಾರ. ಸ್ವಾಮೀಜಿಯವರ ಕನಸಿನಂತೆ ಸದೃಢ ಭಾರತ ಕಟ್ಟುವಲ್ಲಿ ಯುವ ಸಮೂಹ ಶ್ರಮಿಸಬೇಕು. ಸಾಮಾಜಿಕ, ಆರ್ಥಿಕ, ರಾಜಕೀಯವಾಗಿ ಭಾರತವನ್ನು ಸಶಕ್ತವನ್ನಾಗಿಸಲು ಯುವಕರು ಮುಂದಾಗಬೇಕು ಎಂದು ಅವರು ಆಶಯ ವ್ಯಕ್ತಪಡಿಸಿದರು.

ಸಾಹಿತ್ಯ ಸಾರ್ವಕಾಲಿಕ
ಸಮ್ಮೇಳನಾಧ್ಯಕ್ಷತೆ ವಹಿಸಿದ್ದ ತಿರುವಣ್ಣಾಮಲೈ ಶ್ರೀ ಶಾರದಾ ಆಶ್ರಮದ ಮಾತಾಜಿ ಯತೀಶ್ವರಿ ಕೃಷ್ಣಪ್ರಿಯ ಅಂಬಾಜಿ ಅವರು ಮಾತನಾಡಿ, ಸ್ವಾಮೀಜಿ ಮತ್ತು ನಿವೇದಿತಾರ ಸಂದೇಶ, ಸಾಹಿತ್ಯಗಳು ಸಾರ್ವಕಾಲಿಕ. ಅವರ ಸಾಹಿತ್ಯಗಳಂತೆ ಬದುಕಿದರೆ ಜೀವನ ಸಾರ್ಥಕ್ಯ ಪಡೆಯುತ್ತದೆ. ಇಡೀ ವಿಶ್ವಕ್ಕೇ ಭಾರತೀಯ ಸಂಸ್ಕೃತಿಯ ಸಿರಿವಂತಿಕೆಯನ್ನು ಬೋಧಿಸಿದ ಅವರು ನಮ್ಮೆಲ್ಲರ ಆದರ್ಶವಾಗಬೇಕು ಎಂದು ಅಭಿಪ್ರಾಯಪಟ್ಟರು.

ವಿವೇಕಾನಂದ ಕೊಲಾಜ್‌ ವಿಶ್ವ ದಾಖಲೆಗೆ ಪ್ರವೇಶ
ಮೂಲ್ಕಿಯ ಪಂಜಿನಡ್ಕ ಕೆಪಿಎಸ್‌ಕೆ ಪ್ರೌಢಶಾಲೆಯ ಕಲಾ ಶಿಕ್ಷಕ ವೆಂಕಿ ಪಲಿಮಾರ್‌ ಮತ್ತು ವಿದ್ಯಾರ್ಥಿಗಳು ನಿರ್ಮಿಸಿದ 21×16 ಅಡಿ ಎತ್ತರದ ವಿವೇಕಾನಂದರ ಕೊಲಾಜ್‌ ಚಿತ್ರ ಮತ್ತು 10 ನಿಮಿಷದಲ್ಲಿ 108 ಸೂರ್ಯ ನಮಸ್ಕಾರ ಮಾಡಿದ ಯುವ ಬ್ರಿಗೇಡ್‌ ಕಾರ್ಯಕರ್ತ ನಿರಂಜನ್‌ ಶೆಟ್ಟಿ ಅವರ ಸಾಧನೆ ವಿಶ್ವ ದಾಖಲೆಗೆ ಪ್ರವೇಶ ಪಡೆದಿದೆ ಎಂದು ಚಕ್ರವರ್ತಿ ಸೂಲಿಬೆಲೆ ಅವರು ಈ ವೇಳೆ ಪ್ರಕಟಿಸಿದರು.

ವೇದಿಕೆಯಲ್ಲಿ ಕೆಲವೇ ನಿಮಿಷಗಳಲ್ಲಿ ವಿವೇಕಾನಂದರ ಚಿತ್ರ ರಚಿಸಿದ ಮತ್ತು ಸಮ್ಮೇಳನ ಪ್ರಚಾರಾರ್ಥವಾಗಿ ಪಣಂಬೂರು ಕಡಲ ಕಿನಾರೆಯಲ್ಲಿ ವಿವೇಕ, ನಿವೇದಿತಾರ ಚಿತ್ರವನ್ನು ಮರಳಿನಲ್ಲಿ ರಚಿಸಿದ ಕಲಾವಿದ ಮಹೇಂದ್ರ ಅವರನ್ನು ಈ ವೇಳೆ ಗೌರವಿಸಲಾಯಿತು.

ವಿವೇಕಾನಂದ, ನಿವೇದಿತಾರ ಸಾಹಿತ್ಯ ಪುಸ್ತಕಗಳನ್ನು ಪುತ್ತೂರು ವಿವೇಕಾನಂದ ತಾಂತ್ರಿಕ ಕಾಲೇಜಿನಲ್ಲಿರುವ ವಿವೇಕ, ನಿವೇದಿತಾರ ಸಾಹಿತ್ಯ ರ್ಯಾಕ್‌ಗೆ ನೀಡುವ ಸಲುವಾಗಿ ಸಾಂಕೇತಿಕವಾಗಿ ಯುವ ಬ್ರಿಗೇಡ್‌ ಮಂಗಳೂರು ವಿಭಾಗ ಸಂಚಾಲಕ ಮಂಜಯ್ಯ ನೇರಂಕಿ ಅವರಿಗೆ ಹಸ್ತಾಂತರಿಸಲಾಯಿತು. ವಿವೇಕಾನಂದರ ಲೋಗೋ ಹೊಂದಿರುವ ಟೀಶರ್ಟ್‌ಗಳನ್ನು ಈ ವೇಳೆ ಬಿಡುಗಡೆಗೊಳಿಸಲಾಯಿತು.

ಸಮ್ಮೇಳನದ ಸಂಚಾಲಕ ಗಿರಿಧರ ಶೆಟ್ಟಿ ಉಪಸ್ಥಿತರಿದ್ದರು. ಯುವ ಬ್ರಿಗೇಡ್‌ ರಾಜ್ಯ ಸಂಚಾಲಕ ನಿತ್ಯಾನಂದ ವಿವೇಕವಂಶಿ ಸ್ವಾಗತಿಸಿಧಿದರು. ಸೋದರಿ ನಿವೇದಿತಾ ಪ್ರತಿಧಿಷ್ಠಾನದ ಸ್ವಾತಿ ಮಂಗಳೂರು ನಿರೂಪಿಸಿದರು.

ಯುವ ಬ್ರಿಗೇಡ್‌ ನಿರ್ಣಯಗಳು
ಸೋದರಿ ನಿವೇದಿತಾ ಅವರ 150ನೇ ಜನ್ಮ ವರ್ಷಾಚರಣೆ ಪ್ರಯುಕ್ತ ರಾಜ್ಯಾದ್ಯಂತ 150 ಸಮ್ಮೇಳನಗಳ ಆಯೋಜನೆ ಮತ್ತು ಇದರ ಸಮಾರೋಪದ ಅಂಗವಾಗಿ ಸೆ. 11, 12ರಂದು ಬೆಳಗಾವಿಯಲ್ಲಿ  ಸಾಹಿತ್ಯ ಸಮ್ಮೇಳನ ಏರ್ಪಡಿಸುವುದು, ಫೆ. 14ರಂದು ಪೌರ ಕಾರ್ಮಿಕರ ಕಾಲನಿಗಳಿಗೆ ಅಥವಾ ವೃದ್ಧಾಶ್ರಮಗಳಿಗೆ ಭೇಟಿ ನೀಡುವ ನಿರ್ಣಯಗಳನ್ನು ಯುವ ಬ್ರಿಗೇಡ್‌ ಕೈಗೊಂಡಿದೆ.

ನಿರ್ಣಯ ಪ್ರಕಟಿಸಿದ ಯುವಬ್ರಿಗೇಡ್‌ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ಮಾತನಾಡಿ, ನಿವೇದಿತಾ 150ನೇ ವರ್ಷಾಚರಣೆ ಪ್ರಯುಕ್ತ ವಿವೇಕಾನಂದರ ಚಿಂತನೆಗಳನ್ನು ಮತ್ತು ನಿವೇದಿತಾ ಅವರ ಕಲ್ಪನೆಗಳನ್ನು ಸಮಾಜಕ್ಕೆ ಮುಟ್ಟಿಸುವ ಕಾರ್ಯಕ್ಕಾಗಿ ಸಮ್ಮೇಳನಗಳು ಮಹತ್ವ ಪಡೆಯಲಿವೆ ಎಂದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Rain ಕರಾವಳಿಯಲ್ಲಿ ಎಲ್ಲೋ ಅಲರ್ಟ್‌

Rain ಕರಾವಳಿಯಲ್ಲಿ ಎಲ್ಲೋ ಅಲರ್ಟ್‌

Campco ಸದಸ್ಯತ್ವ ಚೀಟಿ ದುರ್ಬಳಕೆ ಮಾಡಿ ಕಳಪೆ ಅಡಿಕೆ ಮಾರಾಟ ಯತ್ನ

Campco ಸದಸ್ಯತ್ವ ಚೀಟಿ ದುರ್ಬಳಕೆ ಮಾಡಿ ಕಳಪೆ ಅಡಿಕೆ ಮಾರಾಟ ಯತ್ನ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.