ಸ್ವೀಪ್‌ನಿಂದ ಮತದಾನ ಜಾಗೃತಿ

ಮಾ. 31: ಜಿಲ್ಲಾ ಮಟ್ಟದ ಮ್ಯಾರಥಾನ್‌ ಸ್ಪರ್ಧೆ

Team Udayavani, Mar 27, 2019, 6:30 AM IST

Sveep-Logo

ಮಂಗಳೂರು: ಮತದಾನದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ದ.ಕ. ಜಿಲ್ಲಾ ಸ್ವೀಪ್‌ ಸಮಿತಿ ವತಿಯಿಂದ ಜಿಲ್ಲಾಡಳಿತ, ಜಿ.ಪಂ., ಮಂಗಳೂರು ಮಹಾನಗರ ಪಾಲಿಕೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಮಾ. 31ರಂದು 18 ಕಿ.ಮೀ. ಮ್ಯಾರಥಾನ್‌ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಬೆಳಗ್ಗೆ 7 ಗಂಟೆಗೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಿಂದ ಮ್ಯಾರಥಾನ್‌ ಪ್ರಾರಂಭವಾಗಲಿದೆ. 16 ವರ್ಷಕ್ಕಿಂತ ಕೆಳಗಿನವರಿಗೆ 6 ಕಿ.ಮೀ. ಹಾಗೂ 16 ವರ್ಷಕ್ಕಿಂತ ಮೇಲ್ಪಟ್ಟವರಿಗೆ 18 ಕಿ.ಮೀ. ಮ್ಯಾರಥಾನ್‌ ನಡೆಯಲಿದೆ. ಹಿರಿಯ ನಾಗರಿಗೆ ಮತ್ತು ಸಾರ್ವಜನಿಕರಿಗೆ ಮತದಾನದ ಕಡೆಗೆ ನಮ್ಮ ನಡಿಗೆ ಕೂಡ ಆಯೋಜಿಸಲಾಗಿದೆ. ಇದರಲ್ಲಿ ಜಿಲ್ಲಾ ವ್ಯಾಪ್ತಿಯ ಎಲ್ಲ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳು, ಸ್ವಯಂಸೇವಾ ಸಂಸ್ಥೆಗಳು ಹಾಗೂ ಸಾರ್ವಜನಿಕರು ಭಾಗವಹಿಸುವಂತೆ ಕೋರಲಾಗಿದೆ ಎಂದು ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷ ಹಾಗೂ ಜಿ.ಪಂ. ಸಿಇಒ ಡಾ| ಆರ್‌. ಸೆಲ್ವಮಣಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಮ್ಯಾರಥಾನ್‌ ದಾರಿ…
ಮನಪಾ ಆಯಕ್ತ ಮಹಮ್ಮದ್‌ ನಜೀರ್‌ ಮಾತನಾಡಿ, 16ರ ವಯೋಮಿತಿಯ ಒಳಗಿನ ಬಾಲಕ ಬಾಲಕಿಯರಿಗೆ ಮಂಗಳಾ ಕ್ರೀಡಾಂಗಣದಿಂದ ಮಣ್ಣಗುಡ್ಡೆ ರಸ್ತೆ, ನ್ಯೂಚಿತ್ರಾ, ರಥಬೀದಿ, ಮಂಗಳೂರು ಸೆಂಟ್ರಲ್‌ ಮಾರ್ಕೆಟ್‌, ಹಂಪನಕಟ್ಟೆ ರಸ್ತೆ ಮೂಲಕ ಸಾಗಿ ಪಿವಿಎಸ್‌ ವೃತ್ತ, ಬಲ್ಲಾಳ್‌ಬಾಗ್‌, ಲಾಲ್‌ಬಾಗ್‌, ದಿವ್ಯದೀಪ ಟವರ್‌ ಮುಂಭಾಗದಲ್ಲಿ ತಿರುಗಿ ಕ್ರೀಡಾಂಗಣದಲ್ಲಿ ಸಮಾಪನ ಗೊಳ್ಳಲಿದೆ ಎಂದರು.

16 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಂಗಳಾ ಕ್ರೀಡಾಂಗಣದಿಂದ ಮಣ್ಣಗುಡ್ಡೆ ರಸ್ತೆ, ನ್ಯೂಚಿತ್ರಾ, ರಥಬೀದಿ, ಶರವು ದೇವಸ್ಥಾನ, ಕಾರ್ನಾಡ್‌ ಸದಾಶಿವ ರಾವ್‌ ರಸ್ತೆ, ನವಭಾರತ ವೃತ್ತ, ಪಿವಿಎಸ್‌ ವೃತ್ತ, ಸೆಲ್ಮಾ ಆರ್ಕೆಡ್‌, ಕದ್ರಿ ದೇವಸ್ಥಾನ ರಸ್ತೆ, ಬಿಜೈ, ಲಾಲ್‌ಬಾಗ್‌ ವೃತ್ತದಿಂದ ಯೂಟರ್ನ್ ಪಡೆದು ಪಂಚಮಿ ಕಾಂಪ್ಲೆಕ್ಸ್‌, ಕಾಪಿಕಾಡ್‌, ದಡ್ಡಲ ಕಾಡು, ಉರ್ವಾಸ್ಟೋರ್‌, ಆಶೋಕನಗರ, ಉರ್ವಾ ಮಾರ್ಕೆಟ್‌, ಲೇಡಿಹಿಲ್‌ ಮೂಲಕ ಮಂಗಳಾ ಕ್ರೀಡಾಂಗಣ ತಲುಪಲಿದೆ. ಮತದಾನದ ಕಡೆಗೆ ನಮ್ಮ ನಡಿಗೆ ಮಂಗಳಾ ಕ್ರೀಡಾಂಗಣದಿಂದ ಮಣ್ಣಗುಡ್ಡೆ, ಬಲ್ಲಾಳ್‌ಬಾಗ್‌, ಲಾಲ್‌ಬಾಗ್‌, ಲೇಡಿಹಿಲ್‌ ಮೂಲಕ ಮಂಗಳಾಕ್ರೀಡಾಂಗಣ ಸೇರಲಿರುವುದು. ವಿಜೇತರಿಗೆ ನಗದು ಬಹುಮಾನ ನೀಡಿ ಪುರಸ್ಕರಿಸಲಾಗುವುದು ಎಂದರು.

ಭಾಗವಹಿಸುವವರು ಹೆಸರು ಹಾಗೂ ವಿಳಾಸವನ್ನು ದ.ಕ. ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕರಿಗೆ ಮಾ. 29ರೊಳಗಾಗಿ ಕಳುಹಿಸಿಕೊಡುವಂತೆ ([email protected]) ಸೂಚಿಸಿದರು.

ಮನಪಾ ಅಧಿಕಾರಿ ಗಾಯತ್ರಿ, ನೆಹರೂ ಯುವಕೇಂದ್ರದ ಸಂಯೋಜಕ ರಘುವೀರ್‌ ಸೂಟರ್‌ಪೇಟೆ ಉಪಸ್ಥಿತರಿದ್ದರು.

18 ಕಿ.ಮೀ. ವಿಶೇಷ
ಎರಡು ಮುಖ್ಯ ಉದ್ದೇಶವನ್ನು ಇಟ್ಟುಕೊಂಡು ಮ್ಯಾರಥಾನ್‌ ಆಯೋಜಿಸಲಾಗಿದೆ. ಎ. 18 ಚುನಾವಣೆಯ ದಿನಾಂಕದ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸುವುದು ಹಾಗೂ 18 ವಯೋಮಿತಿಯ ಬಳಿಕ ಮತದಾನ ಅರ್ಹತೆಯನ್ನು ನೆನಪಿಸುವುದು 18 ಕಿ.ಮೀ. ದೂರದ ಹಿಂದಿರುವ ಅಂಶ ಎಂದು ಆಗಿದೆ ಎಂದು ಡಾ| ಆರ್‌. ಸೆಲ್ವಮಣಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.