ವ್ಯರ್ಥವಾಗುತ್ತಿದೆ ಲಕ್ಷಾಂತರ ರೂ. ಮೌಲ್ಯದ ಸರಕಾರಿ ಆಸಿಪಾಸ್ತಿ 


Team Udayavani, Oct 27, 2018, 11:07 AM IST

27-october-5.gif

ಪುತ್ತೂರು: ಪುತ್ತೂರಿಗೆ ಯಾವುದೇ ಸರಕಾರಿ ವ್ಯವಸ್ಥೆಗಳು ಬರುವ ಸಂದರ್ಭದಲ್ಲಿ ಅದರ ಅನುಷ್ಠಾನಕ್ಕೆ ಜಾಗವಿಲ್ಲ ಎನ್ನುವ ಕೂಗು ಕಂದಾಯ ಇಲಾಖೆಯ ಕಡೆಯಿಂದ ಬರುತ್ತದೆ. ಆದರೆ ಇರುವ ಸರಕಾರಿ ಜಾಗ, ಕಟ್ಟಡ ನಿರುಪಯುಕ್ತವಾಗಿ ವ್ಯರ್ಥವಾಗುತ್ತಿದ್ದರೂ ಅದಕ್ಕೆ ಉತ್ತರವೇ ಇಲ್ಲಿಲ್ಲ!

ನಗರದ ದರ್ಬೆ ಸಮೀಪ ಸರಕಾರಿ ಅಧಿಕಾರಿಗಳ ವಸತಿ ಕಟ್ಟಡಗಳಿವೆ. ಇದರಲ್ಲಿ ನ್ಯಾಯಾಧೀಶರಿಗೆ ಸಂಬಂಧಪಟ್ಟ ವಸತಿ ಕಟ್ಟಡಗಳು ಹಲವು ವರ್ಷಗಳಿಂದ ನಿರುಪಯುಕ್ತವಾಗಿದೆ. ಲಕ್ಷಾಂತರ ರೂ. ವೆಚ್ಚದ ಸರಕಾರಿ ಆಸ್ತಿಪಾಸ್ತಿ ನಷ್ಟವಾಗುತ್ತಿದೆ. ಸೂಕ್ತ ನಿರ್ವಹಣೆಯ ಕೊರತೆಯಿಂದ ಕಟ್ಟಡಗಳು ಶಿಥಿಲಗೊಳ್ಳುತ್ತಿವೆ. ಜತೆಗೆ ಈ ಕಟ್ಟಡಗಳು ಈಗ ಅನೈತಿಕ ವ್ಯವಹಾರದ ಆಶ್ರಯತಾಣವಾಗಿ ಪರಿವರ್ತನೆಗೊಂಡಿದೆ.

ನ್ಯಾಯಾಧೀಶರ ವಸತಿಗೆ ಸಂಬಂಧಪಟ್ಟ ಈ ಮೂರು ವಸತಿ ಕಟ್ಟಡಗಳಲ್ಲಿ 2 ಕಟ್ಟಡಗಳನ್ನು 1966ರಲ್ಲಿ ನಿರ್ಮಿಸಲಾಗಿದ್ದರೆ, ಇನ್ನೊಂದು ಕಟ್ಟಡವನ್ನು 1980ರಲ್ಲಿ ನಿರ್ಮಿಸಲಾಗಿದೆ. ಸುಮಾರು 50 ಸೆಂಟ್ಸ್‌ ಜಾಗದಲ್ಲಿರುವ ಕಟ್ಟಡದಲ್ಲಿ ಸಾಕಷ್ಟು ಸ್ಥಳಾವಕಾಶಗಳಿವೆ. ಆದರೆ ನಿರ್ವಹಣೆಯ ಕೊರತೆಯಿಂದ ಕಟ್ಟಡ ಶಿಥಿಲಗೊಳ್ಳುತ್ತಿದೆ. ಕೆಲವು ಕಡೆ ಛಾವಣಿ ಕುಸಿತ ಉಂಟಾಗಿದೆ. ಆದರೆ ಬಳಸಿಕೊಳ್ಳುವ ಇರಾದೆ ಇದ್ದರೆ ಸಮರ್ಪಕಗೊಳಿಸುವಷ್ಟು ಸುಸ್ಥಿತಿಯಲ್ಲಿದೆ.

ಸರಕಾರಿ ಆಸ್ತಿ ವ್ಯರ್ಥವಾಗುತ್ತಿರುವ ಕುರಿತು ಚಿಕ್ಕಮುಟ್ನೂರು ಕಲಿಯುಗ ಸೇವಾ ಸಮಿತಿಯು ಕಳೆದ 4 ವರ್ಷಗಳಿಂದ ಹೋರಾಟವನ್ನೇ ನಡೆಸುತ್ತಿದೆ. ಕಟ್ಟಡವನ್ನು ತೆರವುಗೊಳಿಸುವಂತೆ ಲೋಕೋಪಯೋಗಿ ಇಲಾಖೆ ಹಾಗೂ ಮೇಲಧಿಕಾರಿಗಳಿಗೆ ಮನವಿ ಸಲ್ಲಿಸಿ ಅದರ ಪ್ರಗತಿಯ ಕುರಿತು ಬೆನ್ನುಹತ್ತಿದೆ. ಆದರೆ ಯಾವುದೇ ರೀತಿಯ ಅಂತಿಮ ಫ‌ಲಿತಾಂಶ ದೊರೆತಿಲ್ಲ.

ಅನುಮೋದನೆ ಸಿಗದ ಸಮಸ್ಯೆ
2014 -15ರ ಸಾಲಿನಲ್ಲಿ ಈ ಕಟ್ಟಡವನ್ನು ಕೆಡವಿ ಹೊಸ ಕಟ್ಟಡ ನಿರ್ಮಾಣಕ್ಕೆ 3 ಕೋಟಿ ರೂ. ಮಂಜೂರಾಗಿತ್ತು. ಆದರೆ ಪುತ್ತೂರಿನಲ್ಲಿ ಜಿಲ್ಲಾ ನ್ಯಾಯಾಲಯ ಆಗುವ ಸಂದರ್ಭದಲ್ಲಿ ಹೆಚ್ಚುವರಿ 8 ವಸತಿಗೃಹಗಳು ಬೇಕಾಗುವುದರಿಂದ ಅದಕ್ಕೆ ಮತ್ತೆ 6 ಕೋಟಿ ರೂ. ಆವಶ್ಯಕತೆ ಇದೆ ಎಂದು ಪ್ರಸ್ತಾವನೆ ಕಳುಹಿಸಲಾಗಿತ್ತು. ಬನ್ನೂರು ಆನೆಮಜಲಿನಲ್ಲಿ ಪ್ರತ್ಯೇಕ ನ್ಯಾಯಾಲಯ ಸಂಕೀರ್ಣವೂ ನಿರ್ಮಾಣವಾಗುವುದರಿಂದ 2017 -18ನೇ ಸಾಲಿನಲ್ಲಿ ಇಲ್ಲಿ ಬಹುಮಹಡಿ ಕಟ್ಟಡ ನಿರ್ಮಾಣಕ್ಕೆ 5.35 ಕೋಟಿ ರೂ. ಪ್ರಸ್ತಾವನೆಯನ್ನು ಮತ್ತೆ ಕಳುಹಿಸಲಾಗಿದೆ.

ಪ್ಲ್ಯಾನ್‌ ಬದಲಾವಣೆ ಮಾಡಿರುವ ಕಾರಣದಿಂದ ಆಡಳಿತಾತ್ಮಕ ಅನುಮೋದನೆ ಲಭಿಸದೆ ಇನ್ನೂ ಯಾವುದೂ ಅನುಷ್ಠಾನಕ್ಕೆ ಬಂದಿಲ್ಲ. ಹಾಲಿ ಲೋಕೋಪಯೋಗಿ ಇಲಾಖೆಯ ಮೇಲಧಿಕಾರಿಗಳ ಕಡೆಯಿಂದ ಯಾವುದೇ ಸೂಚನೆಗಳು ಬಾರದಿರುವುದರಿಂದ ಮತ್ತು ಹೊಸದಾಗಿ ಅಭಿವೃದ್ಧಿ ಕಾರ್ಯಕ್ಕೆ ಅನುಮೋದನೆ ಸಿಗದೇ ಇರುವುದರಿಂದ ಹಳೆಯ ಕಟ್ಟಡವನ್ನು ತೆರವುಗೊಳಿ ಸಲು ಸಾಧ್ಯವಾಗಿಲ್ಲ ಎನ್ನುವುದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಮಾತು.

ಅನೈತಿಕ ಚಟುವಟಿಕೆಗಳ ತಾಣ!
ಕಟ್ಟಡಗಳು ಇರುವ ಅಷ್ಟೂ ಜಾಗದಲ್ಲಿ ವ್ಯಾಪಕ ಪೊದೆಗಳು ಬೆಳೆದಿವೆ. ನಿರ್ವಹಣೆ ಇಲ್ಲದೆ ಅನೈತಿಕ ವ್ಯವಹಾರಗಳನ್ನು ನಡೆಸುವವರಿಗೆ ಆಶ್ರಯ ತಾಣವಾಗಿ ಈ ಕಟ್ಟಡಗಳು ಪರಿವರ್ತನೆಗೊಂಡಿದ್ದು, ಕಟ್ಟಡಗಳ ಒಳಗೆ ಕಂಡುಬರುವ ವಸ್ತುಗಳು, ಗೋಡೆ ಬರಹಗಳು ಇದಕ್ಕೆ ಸಾಕ್ಷಿ. ಹೆದ್ದಾರಿಗೂ ಸಮೀಪದಲ್ಲೇ ಇರುವುದರಿಂದ ರಾತ್ರಿಯಾದ ಮೇಲೆ ಅನೈತಿಕ ವ್ಯವಹಾರಗಳನ್ನು ಮಾಡುವವರು ಇಲ್ಲಿ ಕಂಡು ಬರುತ್ತಾರೆ ಎನ್ನುವುದು ಸ್ಥಳೀಯರ ಆರೋಪ.

 ಕ್ರಮಕ್ಕೆ ಸೂಚನೆ
ಸರಕಾರಿ ಕಟ್ಟಡ ವ್ಯರ್ಥವಾಗುತ್ತಿರುವ ಕುರಿತು ಗಮನಕ್ಕೆ ಬಂದಿಲ್ಲ. ಇಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಪೊಲೀಸ್‌ ಇಲಾಖೆಗೆ ಸೂಚನೆ ನೀಡುತ್ತೇನೆ. ಹಳೆಯ ಕಟ್ಟಡವನ್ನು ಕೆಡವಲು ತತ್‌ಕ್ಷಣ ಪಿಡಬ್ಲ್ಯುಡಿ ಇಲಾಖೆಗೆ ಹಾಗೂ ಅದರ ಮೇಲಧಿಕಾರಿಗಳಿಗೆ ಪತ್ರ ಬರೆದು ಸೂಚಿಸಲಾಗುವುದು.
ಎಚ್‌.ಕೆ. ಕೃಷ್ಣಮೂರ್ತಿ
ಪುತ್ತೂರು ಸಹಾಯಕ ಕಮಿಷನರ್‌

ನಿರಂತರ ಒತ್ತಡ
ಸರಕಾರ ವ್ಯವಸ್ಥೆ ವ್ಯರ್ಥವಾಗುತ್ತಿದೆ. ಹೊಸ ಕಟ್ಟಡ ಮಂಜೂರಾದ ಬಳಿಕ ಕಟ್ಟಡವನ್ನು ತೆಗೆಯುತ್ತೇವೆ. ಅನುದಾನ ಬಿಡುಗಡೆಯಾಗುತ್ತಿಲ್ಲ ಎಂದು ಪಿಡಬ್ಲ್ಯುಡಿ ಇಲಾಖೆಯವರು ಹೇಳುತ್ತಿದ್ದಾರೆ. ಹಾಲಿ ಆನೆಮಜಲುನಲ್ಲಿ ನ್ಯಾಯಾಲಯ ಸಂಕೀರ್ಣ ನಿರ್ಮಾಣವಾಗುತ್ತಿರುವುದರಿಂದ ನ್ಯಾಯಾಧೀಶರಿಗೆ ಸಂಬಂಧಪಟ್ಟಂತೆ ಆನೆಮಜಲಿನಲ್ಲಿ 3 ಹಾಗೂ ದರ್ಬೆಯಲ್ಲಿ 5 ವಸತಿ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವನೆ ಹೋಗಿದೆ. ಆಡಳಿತಾತ್ಮಕ ಅನುಮೋದನೆ ಹಾಗೂ ಜಾರಿಗೆ ಸರಕಾರದ ಮಟ್ಟದಲ್ಲಿ ನಿರಂತರ ಒತ್ತಡ ಹಾಕುತ್ತಿದ್ದೇವೆ.
– ಸಂಪತ್‌ ಕುಮಾರ್‌ ಜೈನ್‌ ಕಲಿಯುಗ ಸೇವಾ ಸಮಿತಿ, ಚಿಕ್ಕಮುಡ್ನೂರು

ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

7-bng

Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.