ಹೊಸ್ಮಠ ಸೇತುವೆ ಬಳಿ ವಾಹನ ತೊಳೆದು ನೀರು ಕಲುಷಿತ 


Team Udayavani, Apr 20, 2018, 11:46 AM IST

20-April-5.jpg

ಕಡಬ: ಇಲ್ಲಿನ ಹೊಸ್ಮಠ ಸೇತುವೆಯ ಬಳಿ ಗುಂಡ್ಯ ಹೊಳೆಗೆ ವಾಹನಗಳನ್ನು ಇಳಿಸಿ ತೊಳೆಯುತ್ತಿರುವುದರಿಂದಾಗಿ ನೀರು ಕಲುಷಿತಗೊಂಡು ಹೊಳೆಯ ನೀರನ್ನು ಉಪಯೋಗಿಸುತ್ತಿರುವವರಿಗೆ ತೊಂದರೆಯಾಗುತ್ತಿರುವುದರಿಂದ ಸಂಬಂಧಪಟ್ಟವರು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಬಿರು ಬೇಸಗೆಯಾಗಿರುವುದರಿಂದ ಹೊಳೆಯಲ್ಲಿ ನೀರಿನ ಹರಿವು ಕೂಡ ಕಡಿಮೆಯಾಗಿದೆ. ಹೊಳೆಯ ಬದಿಯ ನಿವಾಸಿಗಳು ತಮ್ಮ ಬಾವಿಗಳಲ್ಲಿ ನೀರಿನ ಕೊರತೆ ಎದುರಾಗಿರುವುದರಿಂದ ಕುಡಿಯುವುದಕ್ಕಾಗಿಯೂ ಹೊಳೆಯ ನೀರನ್ನು ಉಪಯೋಗಿಸುತ್ತಿದ್ದಾರೆ. ಅಡುಗೆಗೆ, ಜಾನುವಾರುಗಳಿಗೆ ಹಾಗೂ ಬಟ್ಟೆ ಒಗೆಯುವುದು ಇತ್ಯಾದಿಗಳಿಗೂ ಹೊಳೆಯ ನೀರನ್ನೇ ಆಶ್ರಯಿಸುವಂತಾಗಿದೆ.

ಆದರೆ ಇಂತಹ ಸಂದರ್ಭ ಹೊಳೆಗೆ ವಾಹನಗಳನ್ನು ಇಳಿಸಿ ತೊಳೆಯುವುದರಿಂದಾಗಿ ನೀರು ಕಲುಷಿತಗೊಳ್ಳುತ್ತಿದೆ. ವಾಹನ ತೊಳೆಯುವ ವೇಳೆ ನೀರಿನಲ್ಲಿ ಸೇರಿಕೊಳ್ಳುವ ತೈಲದ ಅಂಶವು ಆರೋಗ್ಯಕ್ಕೆ ಹಾನಿಕರವೂ ಹೌದು. ಆದುದರಿಂದ ಸ್ಥಳೀಯ ಕುಟ್ರಾಪ್ಪಾಡಿ ಗ್ರಾಮ ಪಂಚಾಯತ್‌ ವತಿಯಿಂದ ಈ ಕುರಿತು ಸೂಕ್ತ ಕ್ರಮ ಕೈಗೊಂಡು ಹೊಳೆಯ ನೀರನ್ನು ಮಲಿನಗೊಳಿಸದಂತೆ ತಡೆಗಟ್ಟಬೇಕಾಗಿ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಆರೋಗ್ಯ ಕೆಡುವ ಭೀತಿ
ಎಲ್ಲೆಡೆ ನೀರಿನ ಕೊರತೆ ಎದುರಾಗಿರುವುದರಿಂದ ಸಾಕಷ್ಟು ಜನ ಹೊಳೆಯ ನೀರನ್ನೇ ಕುಡಿಯುವುದಕ್ಕಾಗಿ ಮತ್ತು ಅಡುಗೆಗೆ ಬಳಸುತ್ತಿದ್ದಾರೆ. ಆದರೆ ನೀರಿನ ಹರಿವು ಕಡಿಮೆ ಇರುವ ಹೊಳೆಯಲ್ಲಿ ವಾಹನ ತೊಳೆಯುವುದರಿಂದ ನೀರು ಮಲಿನಗೊಳ್ಳುತ್ತಿದೆ. ವಾಹನಗಳ ತೈಲಮಿಶ್ರೀತ ಕಲುಷಿತ ನೀರನ್ನು ಉಪಯೋಗಿಸುವ ಜನರು ಹಾಗೂ ಜಾನುವಾರುಗಳ ಆರೋಗ್ಯ ಕೆಡುವ ಭೀತಿಯೂ ಇದೆ. ಆದುದರಿಂದ ಸಂಬಂಧಪಟ್ಟವರು ಈ ಕುರಿತು ಗಮನಹರಿಸಬೇಕಿದೆ.
-ಡಾ| ರಾಜೇಶ್‌ ಬೀರಂತಡ್ಕ, ಪರಿಸರ ಅಧ್ಯಯನಕಾರರು

ಸೂಕ್ತ ಕ್ರಮ
ಹಿಂದೆ ಸಾರ್ವಜನಿಕರ ದೂರಿನಂತೆ ಹೊಳೆಯ ನೀರನ್ನು ಮಲಿನಗೊಳಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿತ್ತು. ವಾಹನಗಳನ್ನು ಹೊಳೆಗೆ ಇಳಿಸುವ ರಸ್ತೆಗೆ ಕಂದಕ ನಿರ್ಮಿಸಿ ವಾಹನ ಇಳಿಸದಂತೆ ತಡೆಯೊಡ್ಡಲಾಗಿತ್ತು. ಇದೀಗ ಮತ್ತೆ ಹೊಳೆಯ ನೀರು ಮಲಿನಗೊಳಿಸುವ ಕುರಿತು ಮಾಹಿತಿ ಲಭಿಸಿದೆ. ಹೊಳೆಯ ನೀರನ್ನು ಮಲಿನಗೊಳಿಸದಿರುವಂತೆ ಪಂಚಾಯತ್‌ ವತಿಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು.
-ವಿಲ್ಫ್ರೆಡ್ ಲಾರೆನ್ಸ್‌ ರೋಡ್ರಿಗಸ್‌,
ಕುಟ್ರುಪ್ಪಾಡಿ ಗ್ರಾ.ಪಂ. ಪಿಡಿಒ

ಟಾಪ್ ನ್ಯೂಸ್

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.