ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್ ಅಧೀಕ್ಷಕ ರಿಷ್ಯಂತ್
Team Udayavani, May 28, 2024, 12:39 AM IST
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರ ಬಂಧನ ಹೈಡ್ರಾಮಾದಲ್ಲಿ ಪೊಲೀಸರು ಅನಗತ್ಯವಾಗಿ ಮನೆಗೆ ನುಗ್ಗಿದ್ದಾರೆ ಎಂಬ ಆರೋಪಕ್ಕೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕ ರಿಷ್ಯಂತ್ ಸಿ.ಬಿ. ಮಾಧ್ಯಮಕ್ಕೆ ಸ್ಪಷ್ಟೀಕರಣ ನೀಡಿದ್ದಾರೆ.
ಪೂಂಜ ಅವರ ಮನೆಗೆ ಆರಂಭದಲ್ಲಿ ನೋಟಿಸ್ ನೀಡುವ ಸಲುವಾಗಿ ಮೂವರು ತೆರಳಿದ್ದರು. ಆದರೆ ಅಲ್ಲಿ ಅವರು ಠಾಣೆಗೆ ಬಾರದೆ ಜನ ಸೇರಿಸಿ ದ್ದರಿಂದ ಭದ್ರತೆಗಾಗಿ ಹೆಚ್ಚುವರಿ ತಂಡ ಕಳುಹಿಸಬೇಕಾಯಿತು. ಬಳಿಕ ಅಲ್ಲಿನ ರಸ್ತೆ ಕಿರಿದಾಗಿದ್ದರಿಂದ ನೀವು ತೆರಳಿದರೆ ಅಲ್ಲಿ ಜನ ಕ್ಲಿಯರ್ ಆಗುತ್ತದೆ ಮುಂದೆ ನಾವು ಠಾಣೆಗೆ ಹಾಜರಾಗುವುದಾಗಿ ತಿಳಿಸಿದ್ದರಿಂದ ನಾವು ಬಂದಿದ್ದೇವೆ. ಬೇರೇನೂ ಇಲ್ಲ. ಕಾನೂನು ಎಲ್ಲ ರಿಗೂ ಒಂದೇ ಅಲ್ಲಿ 500 ಮಂದಿ ಸೇರಿಸಿ ದರೂ ಅಥವಾ 1 ಲಕ್ಷ ಮಂದಿ ಸೇರಿದರೂ ಒಂದೇ ಎಂದರು.
ಕಾನೂನಿಗೆ ತಲೆಬಾಗಲೇಬೇಕು
ಶಾಸಕರು ಕಾನೂನಿಗೆ ತಲೆಬಾಗಲೇ ಬೇಕು. ನೋಟಿಸ್ ನೀಡಿದ್ದೇವೆ, ಸಮಯ ಕೇಳಿದ್ದಾರೆ, ಉಳಿದಂತೆ ಅವರಿಗೆ ಬಿಟ್ಟ ವಿಚಾರ ಎಂದರು. ಬೆಳ್ತಂಗಡಿ ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ಸ್ಥಳದಲ್ಲಿ ಕೆಲಸಗಾರರು ಹೇಳಿದಂತೆ ಸಂಬಂಧಪಟ್ಟ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಅಮಾಯಕರು ಎನ್ನುವುದು ತಪ್ಪು, ಅವರವರ ಪ್ರಕಾರ ಎಲ್ಲರೂ ಅಮಾಯಕರೇ, ಹಾಗಾಗುವುದಿಲ್ಲ, ನ್ಯಾಯಾಲಯಕ್ಕೆ ಬೇಕಾಗಿರುವುದು ಸಾಕ್ಷಿ, ಅದಕ್ಕೆ ಬೇಕಾದ ಸಾಕ್ಷಿ ನೀಡುತ್ತೇವೆ. ಅಲ್ಲಿ ಒಂದು ಖಾಸಗಿ ಸ್ಥಳವಿದ್ದು, ಮತ್ತೊಂದು ವರ್ಗ ಸ್ಥಳ, ತಹಶೀಲ್ದಾರ್ ಪರಿಶೀಲಿಸಿ ವರದಿ ನೀಡಿದ್ದಾರೆ. ಅದರ ಬಗ್ಗೆ ತನಿಖೆ ನಡೆಯುತ್ತಿದೆ. ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಶೀಘ್ರದಲ್ಲೇ ಬಂಧಿಸಲಾಗುತ್ತದೆ. ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
Mangaluru: ಮುಕ್ತಿ ಕಾಣದ “ಬ್ಲ್ಯಾಕ್ಸ್ಪಾಟ್’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು
Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ
Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್ ನಜೀರ್
Gulf Medical University: ವಿದ್ಯಾರ್ಥಿಗಳ ಪ್ರತಿಜ್ಞಾ ವಿಧಿ ಸ್ವೀಕಾರ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
World Rabies Day 2024: ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ತಿಳಿವಳಿಕೆ ಕೊರತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.