ಕಾಳ್ಗಿಚ್ಚಿಗೆ ಆಹುತಿಯಾಗುತ್ತಿದೆ ಪ್ರವಾಸಿಗರ ಸ್ವರ್ಗ


Team Udayavani, Mar 7, 2018, 1:06 PM IST

7-March-13.jpg

ಬೆಳ್ತಂಗಡಿ : ಕಳೆದ ಕೆಲವು ದಿನಗಳಿಂದ ಪ್ರವಾಸಿಗರ ಸ್ವರ್ಗ, ಹಿಮ್ಮುರಿ ತಿರುವುಗಳ ಕಡಿದಾದ ಘಾಟಿ ಚಾರ್ಮಾಡಿಯಲ್ಲಿ ಅಗ್ನಿಯ ರುದ್ರನರ್ತನವಾಗುತ್ತಿದೆ.

ಕಾಳ್ಗಿಚ್ಚಿನಿಂದಾಗಿ ನೂರಾರು ಹೆಕ್ಟೇರ್‌ ಕಾಡು ಬೆಂಕಿಗೆ ಆಹುತಿಯಾಗುತ್ತಿದ್ದು, ಸಾವಿರಾರು ವನ್ಯಜೀವಿಗಳು ತಮ್ಮ ನೆಲೆ ಕಳೆದುಕೊಂಡಿವೆ. ಅನೇಕ ಸರೀ ಸೃಪಗಳು ಬೆಂಕಿಯ ಬೇಗೆಗೆ ಬೆಂದು ಹೋಗಿವೆ. ಚಾರ್ಮಾಡಿ ಘಾಟಿಯ ಅರಣ್ಯ ಸಂಪತ್ತು ಬೆಂಕಿಯಲ್ಲಿ ಕರಕಲಾಗಿ ತನ್ನ ಸ್ವರೂಪವನ್ನು ಕಳೆದು ಕೊಳ್ಳುತ್ತಿದೆ. ಕಳೆದ ಕೆಲವು ದಿನಗಳಿಂದ ಮಲಯ ಮಾರುತ ನಿರೀಕ್ಷಣಾ ಮಂದಿರ ಸಮೀಪದಿಂದ ಹರಡಿದ ಬೆಂಕಿಯು ಘಾಟಿ ಪ್ರದೇಶದ ಅರಣ್ಯವನ್ನು ಆವರಿಸಿಕೊಂಡಿದೆ.

ನಿರ್ಲಕ್ಷ್ಯದಿಂದ ಅನಾಹುತ
ಶಿರಾಡಿ ಘಾಟಿಯ ಕಾಮಗಾರಿಯ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟಿ ರಸ್ತೆ ಮೂಲಕ ದಿನಂಪ್ರತಿ ಸಾವಿರಾರು ವಾಹನಗಳು ಸಂಚರಿಸುತ್ತಿವೆ. ಕೆಲವು ಪ್ರವಾಸಿಗರು ಘಾಟಿಯ ಸೊಬಗನ್ನು ಸವಿಯಲು ಬಂದರೆ, ಲಾರಿ ಇನ್ನಿತರ ಖಾಸಗಿ ವಾಹನ ಸವಾರರು ತಮ್ಮ ದಣಿವನ್ನು ನಿವಾರಿಸಲು ಈ ಭಾಗದಲ್ಲಿ ತಂಗುವುದು ಸರ್ವೇಸಾಮಾನ್ಯ. ಕೆಲವು ಬಾರಿ ಇಂತಹ ಮಂದಿಯೇ ಚಳಿ ಕಾಯಿಸಲು ಇಲ್ಲಿ ಬೆಂಕಿ ಹಾಕಿ ಹಾಗೆಯೇ ಬಿಟ್ಟು ಅದು ಗಾಳಿಗೆ ಕಾಡಿನಾದ್ಯಂತ ಹಬ್ಬಿದ ಘಟನೆಗಳಿವೆ.

ಅರಣ್ಯ ಇಲಾಖೆ ಮೌನ
ಇಂತಹ ದುರ್ಘ‌ಟನೆಗಳು ಕಣ್ಣೆದುರು ನಡೆಯುತ್ತಿದ್ದರೂ ಅರಣ್ಯ ಇಲಾಖೆ ಕೈಗೊಂಡ ಕ್ರಮ ನಿರೀಕ್ಷಿತ ಪ್ರಮಾಣದಲ್ಲಿ ಇಲ್ಲದ್ದು ಚಾರಣಿಗರ, ಪ್ರವಾಸಿಗರ ಆಕ್ರೋಶಕ್ಕೆ ಗುರಿಯಾಗಿದೆ. ಘಾಟಿ ಯಲ್ಲಿ ಮುಂದುವರಿದ ಕಾಳ್ಗಿಚ್ಚಿನಿಂದ ಬೆಳೆಬಾಳುವ ಅರಣ್ಯ ಸಂಪತ್ತು, ಔಷಧೀಯ ಗುಣಗಳ ಸಸ್ಯಗಳು, ಅಪರೂಪದ ವನ್ಯಜೀವಿಗಳು ಬೆಂಕಿಯ ಬೇಗೆಯಲ್ಲಿ ಸಿಲುಕಿ ನಾಶವಾಗುವ ಭೀತಿ ಎದುರಾಗಿದೆ. ಕೆಲವು ಪ್ರಾಣಿ – ಪಕ್ಷಿಗಳು ತಮ್ಮ ವಾಸ ತಾಣವನ್ನು ಕಳೆದುಕೊಂಡು ನೀರು, ಆಹಾರವಿಲ್ಲದೆ ನಾಡಿಗೆ ಇಳಿಯುವ ಸಾಧ್ಯತೆಯೂ ಇದೆ. ಇಂತಹ ಘಟನೆಗಳು ಮರುಕಳಿಸದಂತೆ ಇಲಾಖೆ ತತ್‌ಕ್ಷಣ ಕಾರ್ಯಪ್ರವೃತ್ತರಾಗಬೇಕಿದೆ.

ಮಾಫಿಯಾಗಳಿಂದ ಪಶ್ಚಿಮ ಘಟ್ಟ ನಿಯಂತ್ರಣ
ವರ್ಷದಿಂದ ವರ್ಷಕ್ಕೆ ಕಾಳ್ಗಿಚ್ಚು ಹೆಚ್ಚಾಗುತ್ತಿದ್ದು, ಇದು ಅರಣ್ಯ ಅತಿಕ್ರಮಣ ಮತ್ತು ಪಶ್ಚಿಮ ಘಟ್ಟವನ್ನು ನಿಯಂತ್ರಣ ಮಾಡುತ್ತಿರುವ ಮಾಫಿಯಾಗಳ ಕೊಡುಗೆ. ಅರಣ್ಯ ಇಲಾಖೆ ಮತ್ತು ಸರಕಾರ ಈ ಬಗ್ಗೆ ವಿಶೇಷವಾದ ಗಮನ ಕೊಡದೇ ಮತ್ತಷ್ಟು ಅರಣ್ಯ ವಿನಾಶಕ ಯೋಜನೆಗಳಿಗೆ ಅಗೋಚರವಾಗಿ ಪರವಾನಿಗೆ ನೀಡುತ್ತಿದೆ. ಈ ರೀತಿ ಮುಂದುವರಿದರೆ ಪಶ್ಚಿಮ ಘಟ್ಟದ ಸೂಕ್ಷ್ಮ ಜೀವ ವೈವಿಧ್ಯ, ನದಿ ಮೂಲ, ಮಳೆ ಕಾಡು ನಾಶವಾಗುತ್ತಾ ಮುಂದೆ ಆಗಲಿರುವ ಪ್ರಾಕೃತಿಕ ದುರಂತಕ್ಕೆ ನಾವೇ ಕಾರಣರಾಗುತ್ತೇವೆ ಎಂದು ಚಾರಣಿಗ ದಿನೇಶ್‌ ಹೊಳ್ಳ ತಿಳಿಸಿದ್ದಾರೆ.

ಬೆಳ್ತಂಗಡಿ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಕಾಳ್ಗಿಚ್ಚು ಸಂಭವಿಸಿಲ್ಲ. ಅದು ಮೂಡಿಗೆರೆ ವ್ಯಾಪ್ತಿಯದ್ದು.
-ಕಿರಣ್‌, ವಲಯ ಅರಣ್ಯಾಧಿಕಾರಿ
ವನ್ಯಜೀವಿ ವಿಭಾಗ, ಬೆಳ್ತಂಗಡಿ

ಗುರು ಮುಂಡಾಜೆ

ಟಾಪ್ ನ್ಯೂಸ್

Thirthahalli: ಹಾಸ್ಟೆಲ್ ಮಕ್ಕಳ ಊಟದಲ್ಲಿ ಹುಳ ಪ್ರತ್ಯಕ್ಷ!

Thirthahalli: ಹಾಸ್ಟೆಲ್ ಮಕ್ಕಳ ಊಟದಲ್ಲಿ ಹುಳ ಪ್ರತ್ಯಕ್ಷ!

ಮಗಳನ್ನು ಮದುವೆ ಮಾಡಿಕೊಡುವಂತೆ ಯುವಕನಿಂದ ಒತ್ತಾಯ… ಒಪ್ಪದಕ್ಕೆ ಯುವತಿಯ ತಾಯಿಗೆ ಚೂರಿ ಇರಿತ

ಮಗಳನ್ನು ಮದುವೆ ಮಾಡಿಕೊಡುವಂತೆ ಯುವಕನಿಂದ ಒತ್ತಾಯ… ಒಪ್ಪದಕ್ಕೆ ಯುವತಿಯ ತಾಯಿಗೆ ಚೂರಿ ಇರಿತ

KPSC-Meet

Competitive Exam: ಯುಪಿಎಸ್‌ಸಿ ಮಾದರಿ ಕೆಪಿಎಸ್‌ಸಿಯಲ್ಲೂ ಸುಧಾರಣೆಯಾಗಲಿ: ಸಿಎಂ

Thailand: ಥಾಯ್ಲೆಂಡ್‌ನ‌ಲ್ಲಿ ಈಗ ಸಲಿಂಗ ವಿವಾಹ ಕಾನೂನುಬದ್ಧ

Thailand: ಥಾಯ್ಲೆಂಡ್‌ನ‌ಲ್ಲಿ ಈಗ ಸಲಿಂಗ ವಿವಾಹ ಕಾನೂನುಬದ್ಧ

ಕೃಷಿ ಕಾಯ್ದೆ ಹೇಳಿಕೆ ವಾಪಸ್‌ ಪಡೆದ ಕಂಗನಾ: ಮೋದಿ ಸ್ಪಷ್ಟನೆ ಕೇಳಿದ ರಾಹುಲ್‌

ಕೃಷಿ ಕಾಯ್ದೆ ಹೇಳಿಕೆ ವಾಪಸ್‌ ಪಡೆದ ಕಂಗನಾ: ಮೋದಿ ಸ್ಪಷ್ಟನೆ ಕೇಳಿದ ರಾಹುಲ್‌

BBK11: ಈ ಬಾರಿ ಬಿಗ್ ಬಾಸ್ ಸ್ಪರ್ಧಿಗಳ ಆಯ್ಕೆಗೆ ಪ್ರೇಕ್ಷಕರೇ ಪ್ರಭುಗಳು

BBK11: ಈ ಬಾರಿ ಬಿಗ್ ಬಾಸ್ ಸ್ಪರ್ಧಿಗಳ ಆಯ್ಕೆಗೆ ಪ್ರೇಕ್ಷಕರೇ ಪ್ರಭುಗಳು

Mahalakshmi Case: ಮಹಾಲಕ್ಷ್ಮಿ ಹತ್ಯೆ ಪ್ರಕರಣ… ಶಂಕಿತ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ

Mahalakshmi Case: ಮಹಾಲಕ್ಷ್ಮಿ ಹತ್ಯೆ ಪ್ರಕರಣ… ಶಂಕಿತ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kalla

Belthangady: 10 ಲಕ್ಷ ರೂ. ಮೌಲ್ಯದ ನಗ-ನಗದು ಕಳವು

3

Puttur: ಟ್ರೀ ಪಾರ್ಕ್‌ ನಿರ್ಲಕ್ಷ್ಯಕ್ಕೆ ದುಡ್ಡಿನ ಕೊರತೆ ನೆಪ

2(2)

Vitla: ಟ್ರಾಫಿಕ್‌ ಜಾಮ್‌ ವಿಟ್ಲ ಪೇಟೆಯಲ್ಲಿ ನಿತ್ಯ ಸಂಕಟ

6-belthanagdy

ಬೆಳ್ತಂಗಡಿ:ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ ‘ಕುತ್ಲೂರು ಗ್ರಾಮ’ ರಾಷ್ಟ್ರಪ್ರಶಸ್ತಿಗೆ ಆಯ್ಕೆ

Bantwal: ಮುಂಬಯಿ ಪೊಲೀಸರೆಂದು ಹೇಳಿ ವಂಚನೆ

Bantwal: ಮುಂಬಯಿ ಪೊಲೀಸರೆಂದು ಹೇಳಿ ವಂಚನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Thirthahalli: ಹಾಸ್ಟೆಲ್ ಮಕ್ಕಳ ಊಟದಲ್ಲಿ ಹುಳ ಪ್ರತ್ಯಕ್ಷ!

Thirthahalli: ಹಾಸ್ಟೆಲ್ ಮಕ್ಕಳ ಊಟದಲ್ಲಿ ಹುಳ ಪ್ರತ್ಯಕ್ಷ!

ಮಗಳನ್ನು ಮದುವೆ ಮಾಡಿಕೊಡುವಂತೆ ಯುವಕನಿಂದ ಒತ್ತಾಯ… ಒಪ್ಪದಕ್ಕೆ ಯುವತಿಯ ತಾಯಿಗೆ ಚೂರಿ ಇರಿತ

ಮಗಳನ್ನು ಮದುವೆ ಮಾಡಿಕೊಡುವಂತೆ ಯುವಕನಿಂದ ಒತ್ತಾಯ… ಒಪ್ಪದಕ್ಕೆ ಯುವತಿಯ ತಾಯಿಗೆ ಚೂರಿ ಇರಿತ

KPSC-Meet

Competitive Exam: ಯುಪಿಎಸ್‌ಸಿ ಮಾದರಿ ಕೆಪಿಎಸ್‌ಸಿಯಲ್ಲೂ ಸುಧಾರಣೆಯಾಗಲಿ: ಸಿಎಂ

WhatsApp Image 2024-09-25 at 21.00.45

Kollur: ಮರಕ್ಕೆ ಗುದ್ದಿ ಪಿಕಪ್‌ಗೆ ಢಿಕ್ಕಿಯಾದ ಬಸ್‌; ಹಲವರಿಗೆ ಗಾಯ

Thailand: ಥಾಯ್ಲೆಂಡ್‌ನ‌ಲ್ಲಿ ಈಗ ಸಲಿಂಗ ವಿವಾಹ ಕಾನೂನುಬದ್ಧ

Thailand: ಥಾಯ್ಲೆಂಡ್‌ನ‌ಲ್ಲಿ ಈಗ ಸಲಿಂಗ ವಿವಾಹ ಕಾನೂನುಬದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.