ಜಲಸಿರಿ ಕಾಮಗಾರಿ; ಕೆಲವೆಡೆ ಮಂದಗತಿ

ಸುರತ್ಕಲ್‌: ತಾಂತ್ರಿಕ, ಜನವಸತಿ ಪ್ರದೇಶದ ತೊಡಕು

Team Udayavani, Mar 31, 2022, 1:13 PM IST

kamagari

ಸುರತ್ಕಲ್‌: ಮಂಗಳೂರು ಮಹಾನಗರ ಪಾಲಿಕೆಯ ಸುರತ್ಕಲ್‌ ವಲಯದಲ್ಲಿ 24×7 ಗಂಟೆಗಳ ಕಾಲ ಕುಡಿಯುವ ನೀರು ವಿತರಿಸುವ ಯೋಜನೆ ಜಲಸಿರಿ ಕಾಮಗಾರಿ ಮಂದಗತಿಯಲ್ಲಿ ನಡೆಯುತ್ತಿದೆ.

ಎರಡು ವರ್ಷಗಳಲ್ಲಿ ಪೂರ್ಣಗೊಳಿಸುವ ಗುರಿ ಹೊಂದಿರುವ ಈ ಕಾಮಗಾರಿಗೆ ಹಲವೆಡೆ ತಾಂತ್ರಿಕ, ಜನವಸತಿ ಪ್ರದೇಶದ ತೊಡಕುಗಳು ಎದುರಾಗಿದೆ. ಸುರತ್ಕಲ್‌ ಪೂರ್ವದಲ್ಲಿ ಎರಡು ಜಲಸಿರಿ ಓವರ್‌ ಹೆಡ್‌ ಟ್ಯಾಂಕ್‌ ನಿರ್ಮಾಣ ನಡೆಯುತ್ತಿದೆ. ಮುಂಚೂರು ಕೊಡಿಪಾಡಿಯಲ್ಲಿ ಟ್ಯಾಂಕ್‌ ಕಾಮಗಾರಿ ಶೇ. 50ರಷ್ಟು ಮುಗಿದಿದೆ.

ಸುರತ್ಕಲ್‌ ತಡಂಬೈಲ್‌ ಸಮೀಪದ ಟ್ಯಾಂಕ್‌ ಕಾಮಗಾರಿ ಸ್ಥಳದಲ್ಲಿ ಕೆಲಸ ನಿಧಾನಗತಿಯಲ್ಲಿ ನಡೆಯುತ್ತಿದೆ. ಕಾಟಿಪಳ್ಳ ಮೂರನೇ ವಾರ್ಡ್‌ ನಲ್ಲಿ ಅಂಡರ್‌ಗ್ರೌಂಡ್‌ ನೀರು ಸಂಗ್ರಹ ಟ್ಯಾಂಕ್‌ ನಿರ್ಮಾಣಕ್ಕೆ ಬೃಹತ್‌ ಗುಂಡಿ ತೋಡಲಾಗಿದ್ದು, ಸಿಮೆಂಟ್‌ ಬೆಡ್‌, ಕಾಂಕ್ರೀಟ್‌ ಕಾಮಗಾರಿ ನಡೆಯುವ ಹಂತದಲ್ಲಿದೆ. ಹೊಸಬೆಟ್ಟು ವಾರ್ಡ್‌ನಲ್ಲಿ ನಾಲ್ಕು ವಾರ್ಡ್‌ಗಳಿಗೆ ನೀರು ಪೂರೈಸುವ ಟ್ಯಾಂಕ್‌ ಕಾಮಗಾರಿ ಆರಂಭವಾಗಿಲ್ಲ. ಇಲ್ಲಿ ಜನವಸತಿ ಪ್ರದೇಶವಿದ್ದು, ಪೈಪ್‌ಲೈನ್‌ ಹಾಕುವ ವಿಚಾರದಲ್ಲಿ ಸಮಸ್ಯೆ ಉಂಟಾಗಿದೆ. ಗುದ್ದಲಿ ಪೂಜೆ ನೆರವೇರಿಸಿ ಹಲವು ತಿಂಗಳಾದರೂ ಕಾಮಗಾರಿ ನಡೆದಿಲ್ಲ. ಈ ಬಗ್ಗೆ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು. ಸ್ಥಳೀಯ ಮನಪಾ ಸದಸ್ಯರಿಗೆ ಪ್ರಗತಿಯ ಮಾಹಿತಿ ನೀಡಬೇಕು ಎಂಬುದು ನಮ್ಮ ಆಗ್ರಹ ಎನ್ನುತ್ತಾರೆ ಮನಪಾ ಸದಸ್ಯ ವರುಣ್‌ ಚೌಟ ಅವರು.

ಟ್ಯಾಂಕ್‌ ನಿರ್ಮಾಣದ ಬಳಿ ಹೊಸ ಪೈಪ್‌ ಅಳವಡಿಕೆ ಕಾಮಗಾರಿ ನಡೆಯಬೇಕಿದೆ. ಈಗಾಗಲೇ ಪೈಪ್‌ ಗಳನ್ನು ತರಿಸಲಾಗಿದ್ದು, ಸರ್ವೇ ಮಾಡಿದ ಸ್ಥಳದಲ್ಲಿ ಅಳವಡಿಕೆಯಾಗಲಿದೆ. ಹಲವೆಡೆ ಜಲಸಿರಿ ಕಾಮಗಾರಿ ಪೈಪ್‌ ಅಳವಡಿಕೆಗೆ ಅಗೆಯಲಾಗುತ್ತಿದ್ದು, ಸೂಕ್ತ ಬ್ಯಾರಿಕೇಡ್‌, ಮಾಹಿತಿ ಫಲಕ ಹಾಕಬೇಕಾದ ಆವಶ್ಯಕತೆಯಿದೆ. ನಗರದಲ್ಲಿ ಈಗಾಗಲೇ ಗ್ಯಾಸ್‌ ಪೈಪ್‌ಲೈನ್‌ ಕಾಮಗಾರಿಯೂ ನಡೆಯುತ್ತಿದ್ದು, ಯಾವ ಕಾಮಗಾರಿ ಎಂಬುದರ ಬಗ್ಗೆ ಮಾಹಿತಿ ಅಳವಡಿಸಿದರೆ ಉತ್ತಮ. ಇದರಿಂದ ಜನರಿಗೆ ಸಮಸ್ಯೆಯಾದಲ್ಲಿ ದೂರು ದಾಖಲಿಸಲು ಸಾಧ್ಯವಾಗುತ್ತದೆ ಎಂಬುದು ಜನರ ಅಭಿಪ್ರಾಯ.

ನೀರಿನ ಶುಲ್ಕ ಕುರಿತಂತೆ ಜನರಿಗೆ ಮಾಹಿತಿ ಇಲ್ಲ. ಪಾಲಿಕೆ ಕಡಿಮೆ ದರದಲ್ಲಿ ನೀರು ಪೂರೈಸುತ್ತಿದ್ದರೆ, ಜಲಸಿರಿ ಯೋಜನೆಯಲ್ಲಿ ಕಾಮಗಾರಿ ಬಳಿಕ ಏಳೆಂಟು ವರ್ಷ ನಿರ್ವಹಣೆಯನ್ನು ಗುತ್ತಿಗೆ ಪಡೆದ ಸೂಯೆಜ್‌ ಪ್ರಾಜೆಕ್ಟ್ ಸಂಸ್ಥೆಯೇ ಮಾಡಬೇಕಿದ್ದು, ಈ ಎಲ್ಲ ವೆಚ್ಚ ಆಧರಿಸಿ ನಿಗದಿ ಆಗಲಿದೆ ಎನ್ನಲಾಗಿದೆ.

ಸಮಸ್ಯೆ ಬಗೆಹರಿಸಲು ಕ್ರಮ

ಕುಡ್ಸೆಂಪ್‌ ವತಿಯಿಂದ ಜಲಸಿರಿ ಕಾಮಗಾರಿಗಳು ನಡೆಯುತ್ತಿವೆ. ನಿಗದಿತ ಗುರಿಯೊಳಗೆ ಮುಗಿಸಿಕೊಡುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ತಾಂತ್ರಿಕ ಸಮಸ್ಯೆಗಳಿದ್ದರೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಅಕ್ಷಯ್‌ ಶ್ರೀಧರ್‌, ಆಯುಕ್ತರು, ಮಂಗಳೂರು ಮಹಾನಗರ ಪಾಲಿಕೆ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.