ಕಾಮಗಾರಿ ಪ್ರಗತಿ ಪರಿಶೀಲನೆ
Team Udayavani, Jan 12, 2018, 10:30 AM IST
ಮಹಾನಗರ: ನಗರದ ಹಳೆಯ ಮಾರುಕಟ್ಟೆಗಳೊಂದಾದ ಕುದ್ರೋಳಿ- ಅಳಕೆ ಮಾರುಕಟ್ಟೆಗೆ ಹೊಸ ಕಟ್ಟಡದ ಭಾಗ್ಯ ಒದಗಿ ಬಂದಿದ್ದು, ಕಟ್ಟಡದ ಕಾಮಗಾರಿಯು ತ್ವರಿತ ಗತಿಯಲ್ಲಿ ನಡೆಯುತ್ತಿದೆ ಎಂದು ಶಾಸಕ ಜೆ.ಆರ್. ಲೋಬೋ ಅವರು ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿ ಮಾತನಾಡಿದರು. ಮುಖ್ಯಮಂತ್ರಿ ನಿಧಿಯ 50 ಲಕ್ಷ ರೂ. ಮತ್ತು ಎಂಟರ್ಪ್ರೈಸ್ ನಿಧಿಯ 50 ಲಕ್ಷ ರೂ. ಸೇರಿದಂತೆ ಒಟ್ಟು 1 ಕೋಟಿ ರೂ. ವೆಚ್ಚದಲ್ಲಿ ಈ ಮಾರುಕಟ್ಟೆಯ ಕಟ್ಟಡ ನಿರ್ಮಾಣ ಕಾರ್ಯ ಆರಂಭವಾಗಿದೆ ಎಂದು ಶಾಸಕರು ತಿಳಿಸಿದರು.
ಸಾಗುತ್ತಿದೆ ಪೂರಕ ಕಾಮಗಾರಿ
ಕುದ್ರೋಳಿ ಅಳಕೆ ಮಾರುಕಟ್ಟೆಯ ಕಟ್ಟಡವು ತೀರಾ ಹಳೆಯದಾಗಿದ್ದು, ಸಾರ್ವಜನಿಕರು ಬಹಳಷ್ಟು ಪ್ರಯಾಸ ಪಟ್ಟು ಈ ಮಾರುಕಟ್ಟೆಗೆ ಭೇಟಿ ನೀಡಿ ದಿನ ಬಳಕೆಯ ವಸ್ತುಗಳನ್ನು ಕೊಂಡುಕೊಳ್ಳುತ್ತಿದ್ದರು. ಈ ಪ್ರದೇಶದ ನಾಗರಿಕರು ಹಲವಾರು ವರ್ಷಗಳಿಂದ ಹೊಸ ಕಟ್ಟಡದ ಬೇಡಿಕೆಯನ್ನು ಮಂಗಳೂರು ಮಹಾನಗರ ಪಾಲಿಕೆಗೆ ಮಂಡಿಸುತ್ತಾ ಬಂದಿದ್ದಾರೆ. ಇದೀಗ ಕುದ್ರೋಳಿ ಮುಖ್ಯ ರಸ್ತೆ ವಿಸ್ತರಣೆ ಹಾಗೂ ಕಾಂಕ್ರೀಟ್ ಕಾಮಗಾರಿ ಕೂಡ ಭರದಿಂದ ಸಾಗುತ್ತಿದೆ. ಅದಕ್ಕೆ ಪೂರಕವಾಗಿ ಅಳಕೆ ಸೇತುವೆ ಕಾರ್ಯವು ಪ್ರಾರಂಭವಾಗಿದೆ ಎಂದು ವಿವರಿಸಿದರು.
ಬಹಳಷ್ಟು ಪ್ರಯೋಜನ
ನಗರ ಬೆಳೆಯುತ್ತಿದ್ದಂತೆ ಸುಸಜ್ಜಿತ ಮಾರುಕಟ್ಟೆಯು ತೀರಾ ಅಗತ್ಯವಾಗಿದೆ. ನೂತನ ಮಾರುಕಟ್ಟೆಯಿಂದ ಕುದ್ರೋಳಿ, ಅಳಕೆ, ಬಂದರ್, ಬೊಕ್ಕಪಟ್ಣ, ಕಾರ್ ಸ್ಟ್ರೀಟ್, ಮಣ್ಣಗುಡ್ಡೆ ಪ್ರದೇಶಗಳ ನಾಗರಿಕರಿಗೆ ಬಹಳಷ್ಟು ಪ್ರಯೋಜನ ಆಗಲಿದೆ. ಹೊಸ ಮಾರುಕಟ್ಟೆಯ ಕಟ್ಟಡದಲ್ಲಿ ಹೂವಿನ ಸ್ಟಾಲ್, ಹಣ್ಣುಹಂಪಲು, ತರಕಾರಿ, ಹಸಿಮೀನು, ಒಣಮೀನು, ಚಿಕನ್, ಮಟನ್, ಬೀಫ್, ಪೋರ್ಕ್ ಸ್ಟಾಲ್ಗಳ ಸಹಿತ ಸುಮಾರು 50 ಸ್ಟಾಲ್ಗಳಿವೆ. ಜನರ ನಿರೀಕ್ಷೆಗಳನ್ನು ಗಮನದಲ್ಲಿರಿಸಿ ಈ ಮಾರುಕಟ್ಟೆಯ ನಿರ್ಮಾಣ ಕಾರ್ಯವನ್ನು ಆದಷ್ಟು ಬೇಗ ಪೂರ್ತಿಗೊಳಿಸಲಾಗುವುದು ಎಂದು ಜೆ.ಆರ್. ಲೋಬೋ ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ
Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್ ಆರೋಪ
Kinnigoli ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ
Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Theft Case: ಬ್ಯಾಂಕಿನಿಂದ ಹಣದ ಬ್ಯಾಗ್ ಕಳವು ಪ್ರಕರಣ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.